ದೊಡ್ಡಬಳ್ಳಾಪುರ (ಡಿ.4): ತಾಲೂಕಿನ ತೂಬಗೆರೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಯ್ಯಪ್ಪಸ್ವಾಮಿ ಭಜನಾ ಮಂದಿರ ಬುಧವಾರ ಉದ್ಘಾಟನೆಗೂಂಡಿತು.
ಗಣಪತಿ ಹೋಮ, ಸ್ವಸ್ತಿ ವಾಚನ, ಪಂಚಗವ್ಯ,ಕಳಸ ಸ್ಥಾಪನೆ ಸೇರಿದಂತೆ ಅಯ್ಯಪ್ಪ ಸಹಿತ ವಾಸ್ತು ಬಲಿ ಪ್ರದಾನ ಪೂರ್ಣಾಹುತಿ ಪೂಜೆಗಳು ನಡೆದವು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಭಾಗವಹಿಸಿ ಮಾತನಾಡಿ,
ತೂಬಗೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತಿ ವರ್ಷ ಸುಮಾರು 500-600 ಭಕ್ತರು ಅಯ್ಯಪ್ಪ ಸ್ವಾಮಿ ವ್ರತವನ್ನು ಮಾಡುತ್ತಿದ್ದು, ವ್ರತದ 45 ದಿನದ ಅವಧಿಯಲ್ಲಿ ಅವರಿಗೆ ವಾಸ್ತವ್ಯಕ್ಕೆ ಸರಿಯಾದ ಸ್ಥಳದ ಕೊರತೆ ಕಾಡುತ್ತಿತ್ತು, ಆ ದಿಶೆಯಲ್ಲಿ ಈ ಭಜನಾ ಮಂದಿರ ಮಾಡಲಾಗಿದ್ದು ಮಾಲಾಧಾರಿಗಳಿಗೆ ಇನ್ನೂ ಮುಂದೆ ಅನುಕೂಲವಾಗುತ್ತದೆ ಎಂದರು.
ಅಯ್ಯಪ್ಪ ಭಕ್ತರು ಆಗಮಿಸಿ ಹೂ ಹಣ್ಣು-ಕಾಯಿ ಸೇವೆ, ದವಸ ಧಾನ್ಯ ಸೇವೆ ಮುಂತಾದವುಗಳನ್ನು ಸಮರ್ಪಿಸಿದರು. ವಿಶೇಷ ಅಲಂಕಾರದೊಂದಿಗೆ ಶ್ರೀ ಅಯ್ಯಪ್ಪಸ್ವಾಮಿಯ ಪಂಚಲೋಹ ಮೂರ್ತಿ ಕಂಗೊಳಿಸುತ್ತಿತ್ತು ಆಗಮಿಸಿದ ಎಲ್ಲ ಭಕ್ತಾದಿಗಳಿಗೆ ಪ್ರಸಾದ ವಿತರಣೆ ನಡೆಯಿತು.
ಈ ವೇಳೆ ಗುರುಸ್ವಾಮಿ ಶಿವಾನಂದ, ಪುರುಷೋತ್ತಮ್, ಪುಟ್ಟಣ್ಣ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಪ್ಪಯ್ಯಣ್ಣ, ಮುಖಂಡರಾದ ಕನಕದಾಸ, ಸುಬ್ರಹ್ಮಣ್ಯ, ಉದಯ ಆರಾಧ್ಯ ಹಾಗೂ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಹಾಜರಿದ್ದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…