ದೊಡ್ಡಬಳ್ಳಾಪುರ (ಡಿ.4): ತಾಲೂಕಿನ ತೂಬಗೆರೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಯ್ಯಪ್ಪಸ್ವಾಮಿ ಭಜನಾ ಮಂದಿರ ಬುಧವಾರ ಉದ್ಘಾಟನೆಗೂಂಡಿತು.
ಗಣಪತಿ ಹೋಮ, ಸ್ವಸ್ತಿ ವಾಚನ, ಪಂಚಗವ್ಯ,ಕಳಸ ಸ್ಥಾಪನೆ ಸೇರಿದಂತೆ ಅಯ್ಯಪ್ಪ ಸಹಿತ ವಾಸ್ತು ಬಲಿ ಪ್ರದಾನ ಪೂರ್ಣಾಹುತಿ ಪೂಜೆಗಳು ನಡೆದವು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಭಾಗವಹಿಸಿ ಮಾತನಾಡಿ,
ತೂಬಗೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತಿ ವರ್ಷ ಸುಮಾರು 500-600 ಭಕ್ತರು ಅಯ್ಯಪ್ಪ ಸ್ವಾಮಿ ವ್ರತವನ್ನು ಮಾಡುತ್ತಿದ್ದು, ವ್ರತದ 45 ದಿನದ ಅವಧಿಯಲ್ಲಿ ಅವರಿಗೆ ವಾಸ್ತವ್ಯಕ್ಕೆ ಸರಿಯಾದ ಸ್ಥಳದ ಕೊರತೆ ಕಾಡುತ್ತಿತ್ತು, ಆ ದಿಶೆಯಲ್ಲಿ ಈ ಭಜನಾ ಮಂದಿರ ಮಾಡಲಾಗಿದ್ದು ಮಾಲಾಧಾರಿಗಳಿಗೆ ಇನ್ನೂ ಮುಂದೆ ಅನುಕೂಲವಾಗುತ್ತದೆ ಎಂದರು.
ಅಯ್ಯಪ್ಪ ಭಕ್ತರು ಆಗಮಿಸಿ ಹೂ ಹಣ್ಣು-ಕಾಯಿ ಸೇವೆ, ದವಸ ಧಾನ್ಯ ಸೇವೆ ಮುಂತಾದವುಗಳನ್ನು ಸಮರ್ಪಿಸಿದರು. ವಿಶೇಷ ಅಲಂಕಾರದೊಂದಿಗೆ ಶ್ರೀ ಅಯ್ಯಪ್ಪಸ್ವಾಮಿಯ ಪಂಚಲೋಹ ಮೂರ್ತಿ ಕಂಗೊಳಿಸುತ್ತಿತ್ತು ಆಗಮಿಸಿದ ಎಲ್ಲ ಭಕ್ತಾದಿಗಳಿಗೆ ಪ್ರಸಾದ ವಿತರಣೆ ನಡೆಯಿತು.
ಈ ವೇಳೆ ಗುರುಸ್ವಾಮಿ ಶಿವಾನಂದ, ಪುರುಷೋತ್ತಮ್, ಪುಟ್ಟಣ್ಣ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಪ್ಪಯ್ಯಣ್ಣ, ಮುಖಂಡರಾದ ಕನಕದಾಸ, ಸುಬ್ರಹ್ಮಣ್ಯ, ಉದಯ ಆರಾಧ್ಯ ಹಾಗೂ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಹಾಜರಿದ್ದರು.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…