ಅಯ್ಯಪ್ಪಸ್ವಾಮಿ ಭಜನಾ ಮಂದಿರ ಉದ್ಘಾಟನೆ

ದೊಡ್ಡಬಳ್ಳಾಪುರ (ಡಿ.4): ತಾಲೂಕಿನ ತೂಬಗೆರೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಯ್ಯಪ್ಪಸ್ವಾಮಿ ಭಜನಾ ಮಂದಿರ ಬುಧವಾರ ಉದ್ಘಾಟನೆಗೂಂಡಿತು.

ಗಣಪತಿ ಹೋಮ, ಸ್ವಸ್ತಿ ವಾಚನ, ಪಂಚಗವ್ಯ,ಕಳಸ ಸ್ಥಾಪನೆ ಸೇರಿದಂತೆ ಅಯ್ಯಪ್ಪ ಸಹಿತ ವಾಸ್ತು ಬಲಿ ಪ್ರದಾನ ಪೂರ್ಣಾಹುತಿ ಪೂಜೆಗಳು ನಡೆದವು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಭಾಗವಹಿಸಿ ಮಾತನಾಡಿ,
ತೂಬಗೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತಿ ವರ್ಷ ಸುಮಾರು 500-600 ಭಕ್ತರು ಅಯ್ಯಪ್ಪ ಸ್ವಾಮಿ ವ್ರತವನ್ನು ಮಾಡುತ್ತಿದ್ದು, ವ್ರತದ 45 ದಿನದ ಅವಧಿಯಲ್ಲಿ ಅವರಿಗೆ ವಾಸ್ತವ್ಯಕ್ಕೆ ಸರಿಯಾದ ಸ್ಥಳದ ಕೊರತೆ ಕಾಡುತ್ತಿತ್ತು, ಆ ದಿಶೆಯಲ್ಲಿ ಈ ಭಜನಾ ಮಂದಿರ ಮಾಡಲಾಗಿದ್ದು ಮಾಲಾಧಾರಿಗಳಿಗೆ ಇನ್ನೂ ಮುಂದೆ ಅನುಕೂಲವಾಗುತ್ತದೆ ಎಂದರು.

ಅಯ್ಯಪ್ಪ ಭಕ್ತರು ಆಗಮಿಸಿ ಹೂ ಹಣ್ಣು-ಕಾಯಿ ಸೇವೆ, ದವಸ ಧಾನ್ಯ ಸೇವೆ ಮುಂತಾದವುಗಳನ್ನು ಸಮರ್ಪಿಸಿದರು. ವಿಶೇಷ ಅಲಂಕಾರದೊಂದಿಗೆ ಶ್ರೀ ಅಯ್ಯಪ್ಪಸ್ವಾಮಿಯ ಪಂಚಲೋಹ ಮೂರ್ತಿ ಕಂಗೊಳಿಸುತ್ತಿತ್ತು ಆಗಮಿಸಿದ ಎಲ್ಲ ಭಕ್ತಾದಿಗಳಿಗೆ ಪ್ರಸಾದ ವಿತರಣೆ ನಡೆಯಿತು.

ಈ ವೇಳೆ ಗುರುಸ್ವಾಮಿ ಶಿವಾನಂದ, ಪುರುಷೋತ್ತಮ್, ಪುಟ್ಟಣ್ಣ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಪ್ಪಯ್ಯಣ್ಣ, ಮುಖಂಡರಾದ ಕನಕದಾಸ, ಸುಬ್ರಹ್ಮಣ್ಯ, ಉದಯ ಆರಾಧ್ಯ ಹಾಗೂ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಹಾಜರಿದ್ದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

11 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

12 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

18 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago