ದೊಡ್ಡಬಳ್ಳಾಪುರ (ಡಿ.4): ತಾಲೂಕಿನ ತೂಬಗೆರೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಯ್ಯಪ್ಪಸ್ವಾಮಿ ಭಜನಾ ಮಂದಿರ ಬುಧವಾರ ಉದ್ಘಾಟನೆಗೂಂಡಿತು.
ಗಣಪತಿ ಹೋಮ, ಸ್ವಸ್ತಿ ವಾಚನ, ಪಂಚಗವ್ಯ,ಕಳಸ ಸ್ಥಾಪನೆ ಸೇರಿದಂತೆ ಅಯ್ಯಪ್ಪ ಸಹಿತ ವಾಸ್ತು ಬಲಿ ಪ್ರದಾನ ಪೂರ್ಣಾಹುತಿ ಪೂಜೆಗಳು ನಡೆದವು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಭಾಗವಹಿಸಿ ಮಾತನಾಡಿ,
ತೂಬಗೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತಿ ವರ್ಷ ಸುಮಾರು 500-600 ಭಕ್ತರು ಅಯ್ಯಪ್ಪ ಸ್ವಾಮಿ ವ್ರತವನ್ನು ಮಾಡುತ್ತಿದ್ದು, ವ್ರತದ 45 ದಿನದ ಅವಧಿಯಲ್ಲಿ ಅವರಿಗೆ ವಾಸ್ತವ್ಯಕ್ಕೆ ಸರಿಯಾದ ಸ್ಥಳದ ಕೊರತೆ ಕಾಡುತ್ತಿತ್ತು, ಆ ದಿಶೆಯಲ್ಲಿ ಈ ಭಜನಾ ಮಂದಿರ ಮಾಡಲಾಗಿದ್ದು ಮಾಲಾಧಾರಿಗಳಿಗೆ ಇನ್ನೂ ಮುಂದೆ ಅನುಕೂಲವಾಗುತ್ತದೆ ಎಂದರು.
ಅಯ್ಯಪ್ಪ ಭಕ್ತರು ಆಗಮಿಸಿ ಹೂ ಹಣ್ಣು-ಕಾಯಿ ಸೇವೆ, ದವಸ ಧಾನ್ಯ ಸೇವೆ ಮುಂತಾದವುಗಳನ್ನು ಸಮರ್ಪಿಸಿದರು. ವಿಶೇಷ ಅಲಂಕಾರದೊಂದಿಗೆ ಶ್ರೀ ಅಯ್ಯಪ್ಪಸ್ವಾಮಿಯ ಪಂಚಲೋಹ ಮೂರ್ತಿ ಕಂಗೊಳಿಸುತ್ತಿತ್ತು ಆಗಮಿಸಿದ ಎಲ್ಲ ಭಕ್ತಾದಿಗಳಿಗೆ ಪ್ರಸಾದ ವಿತರಣೆ ನಡೆಯಿತು.
ಈ ವೇಳೆ ಗುರುಸ್ವಾಮಿ ಶಿವಾನಂದ, ಪುರುಷೋತ್ತಮ್, ಪುಟ್ಟಣ್ಣ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಪ್ಪಯ್ಯಣ್ಣ, ಮುಖಂಡರಾದ ಕನಕದಾಸ, ಸುಬ್ರಹ್ಮಣ್ಯ, ಉದಯ ಆರಾಧ್ಯ ಹಾಗೂ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಹಾಜರಿದ್ದರು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…