ತಂದೆ-ತಾಯಿ ಮರಣ ಹೊಂದಿದ ನಂತರ ಮಾನಸಿಕವಾಗಿ ಖಿನ್ನತೆಗೆ ಒಳಗಾದ ಯುವಕ ನೇಣಿಗೆ ಶರಣಾಗಿದ್ದಾನೆ. ಈ ಘಟನೆ ತಾಲೂಕಿನ ಗೌಡನಕುಂಟೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ಮೃತ ಯುವಕನನ್ನು ಕೃಷ್ಣರಾಜ್(26) ಎಂದು ಗುರುತಿಸಲಾಗಿದೆ.
ಮೃತ ಕೃಷ್ಣರಾಜ್ ನವೆಂಬರ್ 21ರಂದು ಅಯ್ಯಪ್ಪ ಮಾಲೆ ಧರಿಸಿದ್ದು, ನ.29 ರಂದು ಶಬರಿ ಮಲೆಗೆ ತೆರಳಬೇಕಿತ್ತು. ಆದರೆ ಶನಿವಾರ ರಾತ್ರಿ ಭಜನೆ ಮುಗಿಸಿ ಮಲಗಿದವರು, ಬೆಳಗ್ಗೆ ದೇವಾಲಯದ ಸಮೀಪದ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಇತ್ತೀಚೆಗೆ ಮೃತ ಕೃಷ್ಣರಾಜ್ ತಂದೆ ತಾಯಿ ಇಬ್ಬರು ಮರಣ ಹೊಂದಿದ್ದು, ಪೋಷಕರನ್ನು ಕಳೆದುಕೊಂಡ ನಂತರ ಒಬ್ಬೊಂಟಿಯಾಗುತ್ತಾನೆ. ಇದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಾನೆ. ತೀವ್ರ ಜಿಗುಪ್ಸೆಗೊಂಡ ಯುವಕ ನೇಣಿಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ…
ಸ್ಥಳಕ್ಕೆ ಹೊಸಹಳ್ಳಿ ಠಾಣೆ ಸಬ್ಇನ್ಸೆಕ್ಟರ್ ರವಿಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…