ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಧಗಧಗನೆ ಹೊತ್ತಿ ಉರಿಯುತ್ತಿದ್ದ ಬೆಂಕಿ ಅರಣ್ಯದೊಳಗೆ ವೇಗವಾಗಿ ವ್ಯಾಪಿಸುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಭಯಗೊಂಡಿದ್ದರು.
ವಿಷಯ ತಿಳಿಯುತ್ತಿದ್ದಂತೆಯೇ ಹೊಸಹಳ್ಳಿ ಠಾಣೆಯ ನೂತನ ಪೊಲೀಸ್ ಇನ್ಸ್ಪೆಕ್ಟರ್ ಅಮರೇಶ್ ಗೌಡ ಅವರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ಬಳಿಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನಾರಾಯಣಸ್ವಾಮಿ, ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯ ಗ್ರಾಮಸ್ಥರ ಸಹಕಾರದೊಂದಿಗೆ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡರು.
ಗಂಟೆಗಳ ಕಾಲ ಶ್ರಮಪಟ್ಟು ಬೆಂಕಿಯನ್ನು ನಿಯಂತ್ರಣಕ್ಕೆ ತಂದು, ಅರಣ್ಯದ ಹೆಚ್ಚಿನ ಭಾಗಕ್ಕೆ ಬೆಂಕಿ ವ್ಯಾಪಿಸದಂತೆ ತಡೆಗಟ್ಟಲಾಯಿತು. ಸಮಯೋಚಿತ ಕಾರ್ಯಾಚರಣೆಯಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಅರಣ್ಯ ಪ್ರದೇಶದಲ್ಲಿ ಬೆಂಕಿ ನಂದಿಸಲು ಪೊಲೀಸರು ಸ್ವತಃ ಮುಂದಾಗಿ ಮಾನವೀಯತೆ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಸ್ಥಳೀಯರು ಇನ್ಸ್ಪೆಕ್ಟರ್ ಅಮರೇಶ್ ಗೌಡ ಹಾಗೂ ಪೊಲೀಸ್ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…