ಕೋಲಾರ: ರೈತರಿಗೆ ತೊಂದರೆ ಕೊಡುತ್ತಿರುವ ಅರಣ್ಯ ಇಲಾಖೆ ಕ್ರಮ ಖಂಡಿಸಿ ಜಿಲ್ಲೆಯ ದಳಸನೂರಿನಲ್ಲಿ ರೈತರು ಹಾಗೂ ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ.
ಈ ಸಂಬಂಧ ಶುಕ್ರವಾರ ಗ್ರಾಮದಲ್ಲಿ ಪ್ರತಿಭಟನೆ ನಡೆಸಿ, ಅರಣ್ಯ ಇಲಾಖೆ ಅಧಿಕಾರಿಗಳು ರೈತರ ಸಾಗುವಳಿ ಜಮೀನನ್ನು ರಾತ್ರೋರಾತ್ರಿ ವಶಪಡಿಸಿಕೊಂಡು ಬೆಳೆ ಹಾಗೂ ಮಾವಿನ ಮರ ನಾಶ ಮಾಡಿದ್ದಾರೆ. ಈ ಸಂಬಂಧ ನ್ಯಾಯಾಲಯದ ತಡೆಯಾಜ್ಞೆ ಇದ್ದರೂ, ಜಂಟಿ ಸರ್ವೇ ಮಾಡದೇ ರೈತರ ಮೇಲೆ ದೌರ್ಜನ್ಯ ಹಾಗೂ ದಬ್ಬಾಳಿಕೆ ಮುಂದುವರಿಸಿದ್ದಾರೆ. ಇವರಿಗೆ ಕುಮ್ಮಕ್ಕು ಕೊಡುತ್ತಿರುವ ಸರ್ಕಾರದ ನಡೆ ಖಂಡಿಸಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದರು.
ಜಂಟಿ ಸಮೀಕ್ಷೆ ನಡೆಸಬೇಕೆಂದು ಆಗ್ರಹಿಸಿದ ಗ್ರಾಮಸ್ಥರು ಹಾಗೂ ರೈತರು ರಾಜ್ಯ ಮತ್ತು ಕೇಂದ್ರ ಸರ್ಕಾರ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು. ಊರಿನೊಳಗೆ ಮೆರವಣಿಗೆ ತೆರಳಿ ಬೇಕೇ ಬೇಕು ಭೂಮಿ ಬೇಕು, ನ್ಯಾಯಕ್ಕಾಗಿ ರಕ್ತ ಚೆಲ್ಲುತ್ತೇವೆ ಎಂದು ಘೋಷಣೆ ಹಾಕಿದರು. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದರು. ಈ ಸಂಬಂಧ ಗ್ರಾಮದ ಪ್ರವೇಶ ದ್ವಾರದಲ್ಲಿ ಮತದಾನ ಬಹಿಷ್ಕರಿಸುವ ಬ್ಯಾನರ್ ಕೂಡ ಕಟ್ಟಿದ್ದಾರೆ.
ಗ್ರಾಮದ ಮುಖಂಡ ವೀರಭದ್ರಗೌಡ ಮಾತನಾಡಿ, ಜನಪ್ರತಿನಿಧಿಗಳು ರೈತರ ಹೆಸರಲ್ಲಿ ಪ್ರಮಾಣ ಮಾಡುತ್ತಾರೆ. ಆದರೆ, ಚುನಾವಣೆ ಮುಗಿದ ಮೇಲೆ ರೈತರನ್ನು ತುಳಿಯುತ್ತಾರೆ. ರೈತರಿಗೆ ನ್ಯಾಯ ಸಿಗುವವರೆಗೆ ಮತದಾನ ಬಹಿಷ್ಕಾರ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಕಂದಾಯ ಹಾಗೂ ಅರಣ್ಯ ಇಲಾಖೆ ಜಂಟಿ ಸರ್ವೇ ನಡೆಇ ಆಮೇಲೆ ಕ್ರಮ ಕೈಗೊಳ್ಳಲಿ. ಒತ್ತುವರಿ ತೆರವು ಕಾರ್ಯಾಚರಣೆ ನೆಪದಲ್ಲಿ ರೈತರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಬಡ ರೈತರನ್ನು ಒಕ್ಕಲೆಬ್ನೆಸಿದರೆ ಅವರು ಏನು ಮಾಡಬೇಕು. ಆತ್ಮಹತ್ಯೆ ಮಾಡಿಕೊಳ್ಳದೇ ಬೇರೆ ದಾರಿ ಇಲ್ಲ ಎಂದರು.
ರೈತ ಮುಖಂಡ ವೀರಭದ್ರಸ್ವಾಮಿ ಮಾತನಾಡಿ, ಸರ್ಕಾರ ಅರಣ್ಯ ಇಲಾಖೆ ಮುಂದಿಟ್ಟುಕೊಂಡು ರೈತರ ಮೇಲೆ ದೌರ್ಜನ್ಯ ಎಸಗುತ್ತಿದೆ. ರೈತರ ಪರ ಯಾರೂ ಧ್ವನಿ ಎತ್ತುತ್ತಿಲ್ಲ ಲಕ್ಷಾಂತರ ಮೌಲ್ಯದ ಬೆಳೆ ನಾಶ ಮಾಡಿದ್ದಾರೆ. ಸಮಯ ಕೊಡಿ ಎಂದು ಮನವಿ ಮಾಡಿದರೂ ಕೇಳಲಿಲ್ಲ ಎಂದು ವಾಗ್ದಾಳಿ ನಡೆಸಿದರು ಇದಕ್ಕೆ ದಳಸನೂರು ಗ್ರಾಮಸ್ಥರು ಮಾತ್ರವಲ್ಲ ಅಕ್ಕಪಕ್ಕದ ಗ್ರಾಮಸ್ಥರು ಕೂಡ ಮತದಾನ ಬಹಿಷ್ಕರಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯ ಜಗದೀಶ್, ಗ್ರಾಮಸ್ಥರಾದ ಗೋಪಾಲರೆಡ್ಡಿ, ಟಿ.ರಾಮಯ್ಯ, ಬಾಷ ಸಾಬಿ, ಬಳಗೆರೆ ವೆಂಕಟೇಶಪ್ಪ, ರಾಜಶೇಖರ್, ನಂದೀಶ್, ಕೃಷ್ಣಪ್ಪ, ಸೇರಿದಂತೆ ರೈತರು ಇದ್ದರು
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…