Categories: ಕೋಲಾರ

ಅರಣ್ಯ ಇಲಾಖೆ ಕಿರುಕುಳ ಆರೋಪ: ಬಗರ್ ಹುಕುಂ ಸಾಗುವಳಿಗೆ ಒತ್ತಾಯಿಸಿ ಫೆ.10ರಂದು ವಿಧಾನಸೌಧ ಚಲೋ, ಅನಿರ್ದಿಷ್ಟಾವಧಿ ಧರಣಿ

ಕೋಲಾರ: ಅರಣ್ಯ ಇಲಾಖೆ ಕಿರುಕುಳ, ಬಗರ್ ಹುಕುಂ ಸಾಗುವಳಿ ಪಿ.ನಂಬರ್ ದುರಸ್ತಿ ಮನೆ ನಿವೇಶನ, ಕಾರ್ಪೋರೇಟ್ ಕಂಪನಿಗಳಿಗೆ ಕೃಷಿ ಭೂಮಿ ವಹಿಸಿಕೊಡುವುದನ್ನು ತಕ್ಷಣ ನಿಲ್ಲಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಕೃಷಿಕೂಲೀಕ ಫೆಬ್ರುವರಿ 10ರಿಂದ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಘಟಕ ಉಪಾಧ್ಯಕ್ಷ ಪಿ.ಆರ್ ಸೂರ್ಯನಾರಾಯಣ ತಿಳಿಸಿದರು.

ನಗರದ ಪಾಲಸಂದ್ರ ಲೇಔಟ್ ನಲ್ಲಿರುವ ಕಚೇರಿಯಲ್ಲಿ ಜಿಲ್ಲಾ ಸಮಿತಿ ಸಭೆಯ ನಂತರ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು ಕೋಲಾರ ಜಿಲ್ಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಡವರಿಗೆ ಒಂದು ಕಾನೂನು ಶ್ರೀಮಂತರಿಗೆ ಬಲಿಷ್ಠರಿಗೆ ಒಂದು ಕಾನೂನು ತಂದಿದ್ದಾರೆ ದೇಶದಲ್ಲಿ ಬಲವಂತದ ಭೂ ಸ್ವಾಧೀನ ಹಾಗೂ ಮೋಸದ ಭೂ ಬೆಲೆ ನಿಗದಿಸಿ ವಂಚಿಸುವುದನ್ನು ತಡೆಯಬೇಕು. ಬಗರ್ ಹುಕುಂ, ಅರಣ್ಯ ಭೂಮಿ ಸಾಗುವಳಿ ನಿರತ ಬಡವರನ್ನು ಒಕ್ಕಲೆಬ್ಬಿಸುವುದನ್ನು ನಿಲ್ಲಿಸಿ ಹಕ್ಕುಪತ್ರ ನೀಡಲು ಅಗತ್ಯ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು

ಕೃಷಿ ಭೂಮಿಗಾಗಿ ಹಾತೊರೆಯುತ್ತಿರುವ ಭೂ ವಂಚಿತ ದಲಿತರು, ಕೂಲಿಕಾರ್ಮಿಕರು, ಇತರೆ ವಲಯದ ಕಾರ್ಮಿಕರಿಗೆ ನೀರಾವರಿ ಕೃಷಿ ಭೂಮಿ ಹಾಗೂ ನಿವೇಶನ ರಹಿತರಿಗೆ ನಿವೇಶನ ಸಹಿತ ವಸತಿಯನ್ನು ಉಚಿತವಾಗಿ ಒದಗಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಗಳ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದ ಎದುರು ಹತ್ತು ಸಾವಿರ ರೈತರು ಹಾಗೂ ಕೂಲಿಕಾರರು ಅನಿರ್ಧಿಷ್ಟವಧಿಯ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ತಿಳಿಸಿದರು.

ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಬಡವರು ಹಾಗೂ ಎಲ್ಲ ದುಡಿಯುವ ಜನರ ವಿರುದ್ದವಾಗಿ ಬಹುರಾಷ್ಟ್ರೀಯ ಸಂಸ್ಥೆಗಳ ಪರವಾದ ನವ ಉದಾರೀಕರಣದ ಕೃಷಿ ನೀತಿಗಳನ್ನು ಬಲವಂತವಾಗಿ ಹೇರುತ್ತಿವೆ. ಇದರ ಭಾಗವಾಗಿ ರೈತರ ಭೂಮಿ ಪಡೆಯಲು ಯತ್ನಿಸುತ್ತಿವೆ ಹೋರಾಟಗಳನ್ನು ಹತ್ತಿಕ್ಕಲು ಬಂಡವಾಳದಾರರ ಜೊತೆ ಕೈ ಜೋಡಿಸಿವೆ. ಕೋಮುವಾದಿ, ಜಾತಿವಾದಿ ಶಕ್ತಿಗಳು ಒಟ್ಟಾಗಿ ದೇಶದ ಮೇಲೆ ಸರ್ವಾಧಿಕಾರ ಹೇರಲು ಹವಣಿಸುತ್ತಿವೆ ಎಂದು ಆರೋಪ ಮಾಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಪಾತಕೋಟ ನವೀನ್ ಕುಮಾರ್ ಉಪಾಧ್ಯಕ್ಷರಾದ ಗಂಗಮ್ಮ, ಅಲಹಳ್ಳಿ ವೆಂಕಟೇಶಪ್ಪ, ಸಹ ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಮಾಲೂರು ವೆಂಕಟಪ್ಪ, ಮುಖಂಡರಾದ ನಾರಾಯಣಪ್ಪ, ಶ್ರೀಧರ್ ರೆಡ್ಡಿ, ಎಂ.ಎಸ್.ನಾಗರಾಜ್, ಎನ್.ಯಲ್ಲಪ್ಪ ಮುಂತಾದವರ ಇದ್ದರು.

Ramesh Babu

Journalist

Recent Posts

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

3 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

6 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

22 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

23 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago