Categories: ಕೋಲಾರ

ಅರಣ್ಯ ಇಲಾಖೆ ಕಿರುಕುಳ ಆರೋಪ: ಬಗರ್ ಹುಕುಂ ಸಾಗುವಳಿಗೆ ಒತ್ತಾಯಿಸಿ ಫೆ.10ರಂದು ವಿಧಾನಸೌಧ ಚಲೋ, ಅನಿರ್ದಿಷ್ಟಾವಧಿ ಧರಣಿ

ಕೋಲಾರ: ಅರಣ್ಯ ಇಲಾಖೆ ಕಿರುಕುಳ, ಬಗರ್ ಹುಕುಂ ಸಾಗುವಳಿ ಪಿ.ನಂಬರ್ ದುರಸ್ತಿ ಮನೆ ನಿವೇಶನ, ಕಾರ್ಪೋರೇಟ್ ಕಂಪನಿಗಳಿಗೆ ಕೃಷಿ ಭೂಮಿ ವಹಿಸಿಕೊಡುವುದನ್ನು ತಕ್ಷಣ ನಿಲ್ಲಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಕೃಷಿಕೂಲೀಕ ಫೆಬ್ರುವರಿ 10ರಿಂದ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಘಟಕ ಉಪಾಧ್ಯಕ್ಷ ಪಿ.ಆರ್ ಸೂರ್ಯನಾರಾಯಣ ತಿಳಿಸಿದರು.

ನಗರದ ಪಾಲಸಂದ್ರ ಲೇಔಟ್ ನಲ್ಲಿರುವ ಕಚೇರಿಯಲ್ಲಿ ಜಿಲ್ಲಾ ಸಮಿತಿ ಸಭೆಯ ನಂತರ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು ಕೋಲಾರ ಜಿಲ್ಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಡವರಿಗೆ ಒಂದು ಕಾನೂನು ಶ್ರೀಮಂತರಿಗೆ ಬಲಿಷ್ಠರಿಗೆ ಒಂದು ಕಾನೂನು ತಂದಿದ್ದಾರೆ ದೇಶದಲ್ಲಿ ಬಲವಂತದ ಭೂ ಸ್ವಾಧೀನ ಹಾಗೂ ಮೋಸದ ಭೂ ಬೆಲೆ ನಿಗದಿಸಿ ವಂಚಿಸುವುದನ್ನು ತಡೆಯಬೇಕು. ಬಗರ್ ಹುಕುಂ, ಅರಣ್ಯ ಭೂಮಿ ಸಾಗುವಳಿ ನಿರತ ಬಡವರನ್ನು ಒಕ್ಕಲೆಬ್ಬಿಸುವುದನ್ನು ನಿಲ್ಲಿಸಿ ಹಕ್ಕುಪತ್ರ ನೀಡಲು ಅಗತ್ಯ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು

ಕೃಷಿ ಭೂಮಿಗಾಗಿ ಹಾತೊರೆಯುತ್ತಿರುವ ಭೂ ವಂಚಿತ ದಲಿತರು, ಕೂಲಿಕಾರ್ಮಿಕರು, ಇತರೆ ವಲಯದ ಕಾರ್ಮಿಕರಿಗೆ ನೀರಾವರಿ ಕೃಷಿ ಭೂಮಿ ಹಾಗೂ ನಿವೇಶನ ರಹಿತರಿಗೆ ನಿವೇಶನ ಸಹಿತ ವಸತಿಯನ್ನು ಉಚಿತವಾಗಿ ಒದಗಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಗಳ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದ ಎದುರು ಹತ್ತು ಸಾವಿರ ರೈತರು ಹಾಗೂ ಕೂಲಿಕಾರರು ಅನಿರ್ಧಿಷ್ಟವಧಿಯ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ತಿಳಿಸಿದರು.

ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಬಡವರು ಹಾಗೂ ಎಲ್ಲ ದುಡಿಯುವ ಜನರ ವಿರುದ್ದವಾಗಿ ಬಹುರಾಷ್ಟ್ರೀಯ ಸಂಸ್ಥೆಗಳ ಪರವಾದ ನವ ಉದಾರೀಕರಣದ ಕೃಷಿ ನೀತಿಗಳನ್ನು ಬಲವಂತವಾಗಿ ಹೇರುತ್ತಿವೆ. ಇದರ ಭಾಗವಾಗಿ ರೈತರ ಭೂಮಿ ಪಡೆಯಲು ಯತ್ನಿಸುತ್ತಿವೆ ಹೋರಾಟಗಳನ್ನು ಹತ್ತಿಕ್ಕಲು ಬಂಡವಾಳದಾರರ ಜೊತೆ ಕೈ ಜೋಡಿಸಿವೆ. ಕೋಮುವಾದಿ, ಜಾತಿವಾದಿ ಶಕ್ತಿಗಳು ಒಟ್ಟಾಗಿ ದೇಶದ ಮೇಲೆ ಸರ್ವಾಧಿಕಾರ ಹೇರಲು ಹವಣಿಸುತ್ತಿವೆ ಎಂದು ಆರೋಪ ಮಾಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಪಾತಕೋಟ ನವೀನ್ ಕುಮಾರ್ ಉಪಾಧ್ಯಕ್ಷರಾದ ಗಂಗಮ್ಮ, ಅಲಹಳ್ಳಿ ವೆಂಕಟೇಶಪ್ಪ, ಸಹ ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಮಾಲೂರು ವೆಂಕಟಪ್ಪ, ಮುಖಂಡರಾದ ನಾರಾಯಣಪ್ಪ, ಶ್ರೀಧರ್ ರೆಡ್ಡಿ, ಎಂ.ಎಸ್.ನಾಗರಾಜ್, ಎನ್.ಯಲ್ಲಪ್ಪ ಮುಂತಾದವರ ಇದ್ದರು.

Ramesh Babu

Journalist

Recent Posts

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

2 hours ago

2026ರಲ್ಲಿ ‘ಸೂಪರ್ ಎಲ್ ನಿನೊ’ ಆತಂಕ: ಭಾರತಕ್ಕೆ ಕಡಿಮೆ ಮಳೆ, ಕೃಷಿ ಮತ್ತು ಜಲಮೂಲಗಳ ಮೇಲೆ ಗಂಭೀರ ಪರಿಣಾಮದ ಎಚ್ಚರಿಕೆ

ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…

7 hours ago

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

19 hours ago

ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…

19 hours ago

ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ- ಶಾಸಕಿ ನಯನಾ ಮೋಟಮ್ಮ

ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…

19 hours ago

ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿ, ಎಲ್ಲರ ಸಹಮತದೊಂದಿಗೆ ಮುಂದುವರಿಯಬೇಕು- ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…

19 hours ago