ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಹಲವು ವಿಘ್ನಗಳೂ ಎದುರಾಗಿವೆ. ತಾಲೂಕಿನ ಹಲವು ಗ್ರಾಮಗಳಲ್ಲಿ ಸಮಸ್ಯೆ ಮುಂದಿಟ್ಟುಕೊಂಡು ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ.
ಕಂದಾಯ ಗ್ರಾಮ ಘೋಷಣೆ, ಒಳ ಮೀಸಲಾತಿ ರದ್ದು, ಅರಣ್ಯ ಇಲಾಖೆ ಕಿರುಕುಳ ತಾಲೂಕಿನ ಕೆಳಗಿನನಾಯಕರಾಂಡಹಳ್ಳಿ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು.
ಶನಿವಾರ ಗ್ರಾಮದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಗ್ರಾಮದ ಮುಖಂಡರು, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದ ಹೊರತು ಮತದಾನ ಮಾಡುವುದಿಲ್ಲ ಎಂದು ಘೋಷಿಸಿದರು.
ಗ್ರಾಮಸ್ಥರ ಬೇಡಿಕೆಗಳೇನು..?
1.ಕೆಳಗಿನನಾಯಕರಾಂಡನಹಳ್ಳಿ ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸುವುದು.
2. ಗೋಮಾಳ ಭೂಮಿಯಲ್ಲಿ ದಶಕಗಳಿಂದ ಉಳುಮೆ ಮಾಡುತ್ತಿರುವ ರೈತರ ಹೆಸರಿಗೆ ಖಾತೆ ಮಾಡಿಸುವುದು.
3. ಅರಣ್ಯ ಇಲಾಖೆಯು ರೈತರಿಗೆ ನೀಡುತ್ತಿರುವ ಕಿರುಕುಳದಿಂದ ಮುಕ್ತಿಗೊಳಿಸಬೇಕು.
4. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವ ಒಳ ಮೀಸಲಾತಿ ಹಿಂಪಡೆಯುವಂತೆ ಒತ್ತಾಯ
5. ರೈತರ ಮೇಲೆ ಹಾಕಿರುವ ಕ್ರಿಮಿನಲ್ ಮೊಕದ್ದಮೆ ವಾಪಸ್ ಪಡೆಯಬೇಕು
6. ಗ್ರಾಮಕ್ಕೆ ಇನ್ನೂ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹ.
ಗ್ರಾಮದಲ್ಲಿ ಒಟ್ಟು 140 ಮನೆ, 900 ಜನಸಂಖ್ಯೆ , 486 ಮತದಾರರು ಇದ್ದು, ನಾವು ಯಾರೂ ಮತ ಹಾಕೋದಿಲ್ಲ. ನಮಗೆ ತುಂಬಾ ಅನ್ಯಾಯ ಆಗಿದೆ ಅವಕಾಶ ವಂಚಿತರಾಗಿದ್ದೇವೆ. ಅಲೆಮಾರಿಗಳು ಎಂದು ಕುಂಟುನೆಪದಿಂದ ನಮ್ಮನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸಲಾಗಿದೆ, ನಮ್ಮ ಬೇಡಿಕೆಗಳು ಈಡೇರುವವರಿಗೆ ಮತದಾನ ಬಹಿಷ್ಕಾರ ಮಾಡುತ್ತೇವೆ. ನಮ್ಮ ಊರಿಗೆ ಮತಪೆಟ್ಟಿಗೆ ತರಲು ಬಿಡೋದಿಲ್ಲ ಎಂದು ಘಂಟಾಘೋಷವಾಗಿ ತಿಳಿಸಿದರು.
1951-52, 1983-84, 1994-95ನೇ ಇಸವಿಗಳಲ್ಲಿ ಅಂಗೈ ಅಗಲದಷ್ಟು ಗೋಮಾಳ ಜಮೀನನ್ನು ನಮ್ಮ ಹೆಸರಿಗೆ ಖಾತೆ ಮಾಡಿಕೊಡಲಾಗಿತ್ತು. ಅದರಲ್ಲಿ ನಾವು ಉತ್ತು ಬಿತ್ತು ಜೀವನ ನಡೆಸುತ್ತಿದ್ದೆವು. ಇನ್ನೂ ಕೆಲವರು ನಮೂನೆ 57, ನಮೂನೆ 53 ಅರ್ಜಿ ಹಾಕಿ ಉಳುಮೆ ಮಾಡುತ್ತಿದ್ದಾರೆ. ಈಗ ಏಕಾಏಕಿ ಅರಣ್ಯ ಇಲಾಖೆ ಬಂದು ಈ ಭೂಮಿ ಅರಣ್ಯ ಇಲಾಖೆಗೆ ಒಳಪಟ್ಟಿದೆ ಎಂದು ಟ್ರಂಚ್ ಹೊಡೆಯಲು ಮುಂದಾಗಿ ನಮಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದರು.
ಈ ವೇಳೆ ಸರ್ಕಾರ, ಅರಣ್ಯ ಇಲಾಖಾಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಊರಿನ ಗ್ರಾಮಸ್ಥರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…