Categories: ಕೋಲಾರ

ಅರಣ್ಯ ಭೂಮಿ ಒತ್ತುವರಿ ತೆರವುಗೆ ರೈತ ಸಂಘ ಒತ್ತಾಯ

ಕೋಲಾರ: ಬಲಾಢ್ಯರು, ರಾಜಕೀಯ ವ್ಯಕ್ತಿಗಳ ಕಪಿಮುಷ್ಟಿಯಲ್ಲಿರುವ ಸಾವಿರಾರು ಎಕರೆ ಅರಣ್ಯ ಭೂಮಿಯನ್ನು ಒತ್ತುವರಿ ತೆರವುಗೊಳಿಸಿ ಕಾನೂನಿನಲ್ಲಿ ಬಡವರು, ಶ್ರೀಮಂತರಿಗೆ ಒಂದೇ ಕಾನೂನು ಎಂದು ಸಾಬೀತು ಪಡಿಸಬೇಕೆಂದು ರೈತಸಂಘ ದಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗರ್ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಅರಣ್ಯ ಸಚಿವರು ನೀಡಿರುವ ಹೇಳಿಕೆಯಂತೆ 1 ರಿಂದ 4 ಎಕರೆ ಒತ್ತುವರಿ ತೆರವುಗೊಳಿಸಬೇಡಿ ಎಂಬ ಆದೇಶ ಎಲ್ಲಿ ಕಳೆದುಹೋಗಿದೆ. ಜೊತೆಗೆ ದೇಶಕ್ಕೆ ಅನ್ನ ಹಾಕುವ ರೈತ ಎಂದಿಗೂ ಅರಣ್ಯ ಭೂಮಿಯನ್ನು ಕಬಳಿಸುವುದಿಲ್ಲ. ಅಮಾಯಕ ರೈತರನ್ನು ಕಂದಾಯ ಸರ್ವೇ ಅರಣ್ಯ ಅಧಿಕಾರಿಗಳೇ ದಿಕ್ಕು ತಪ್ಪಿಸಿ ದಾಖಲೆ ಮಾಡಿಕೊಳ್ಳುತ್ತೇವೆಂದು ಲಕ್ಷಲಕ್ಷ ಲಂಚ ಪಡೆದಿರುವ ಪ್ರಕರಣಗಳು ಕಣ್ಣಿಗೆ ಕಾಣಿಸುತ್ತಿಲ್ಲವೇ. ರೈತರಿಗೆ ದಾಖಲೆ ಮಾಡಿಕೊಟ್ಟಿರುವವರು ಯಾರು ಎಂದು ಮೊದಲು ಹುಡುಕಿ ಆನಂತರ ತೆರವುಗೊಳಿಸಲು ಮುಂದಾಗಿ ಎಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಅರಣ್ಯ ಅಧಿಕಾರಿಗಳಿಗೆ ಸಲಹೆ ನೀಡಿದರು.

ಜಿಲ್ಲಾದ್ಯಂತ ಅರಣ್ಯ ಒತ್ತುವರಿದಾರರ ವಿರುದ್ಧ ನಿರಂತರವಾಗಿ ಅರಣ್ಯಾಧಿಕಾರಿಗಳು ತಮ್ಮ ಅಧಿಕಾರವನ್ನು ಉಪಯೋಗಿಸಿಕೊಂಡು ಸಾವಿರಾರು ಕೋಟಿರೂ ಬೆಲೆ ಬಾಳುವ ಸಾವಿರಾರು ಎಕರೆ ಅರಣ್ಯ ಭೂಮಿ ಉಳಿಸಿಕೊಂಡಿರುವುದಕ್ಕೆ ನಮ್ಮ ಬೆಂಬಲವಿದೆ. ಆದರೆ, ಬಲಾಢ್ಯರು ರಾಜಕೀಯ ಹಿನ್ನೆಲೆಯುಳ್ಳ ವ್ಯಕ್ತಿಗಳ ಮೇಲೆ ತಮ್ಮ ಪ್ರತಾಪ ತೋರಿಸದೆ ತನ್ನ ಕುಟುಂಬದ ಸ್ವಾಭಿಮಾನದ ಬದುಕಿಗಾಗಿ 2-3 ಎಕರೆ ಒತ್ತುವರಿ ಮಾಡಿಕೊಂಡಿರುವ ರೈತರ ಮೇಲೆ ಪೊಲೀಸ್ ಸರ್ಪಗಾವನಲಿನಲ್ಲಿ ಜೆಸಿಬಿಗಳ ಅಬ್ಬರ ಸರಿಯೇ ? ಕಾನೂನಿನಲ್ಲಿ ಬಡವರಿಗೆ ಒಂದು ನ್ಯಾಯ, ಶ್ರೀಮಂತರಿಗೆ ಪ್ರತ್ಯೇಕ ನ್ಯಾಯವಿದೆಯೇ ಎಂದು ಪ್ರಶ್ನೆ ಮಾಡಿದರು.

ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ಬ್ಯಾಂಕ್ ನಲ್ಲಿ ಹಣ ಠೇವಣಿ ಇಟ್ಟು ಭದ್ರಪಡಿಸಿಕೊಳ್ಳುವಂತೆ ಅರಣ್ಯ ಅಧಿಕಾರಿಗಳು ಶ್ರೀಮಂತರ ಅರಣ್ಯ ಭೂ ಒತ್ತುವರಿ
ನ್ಯಾಯಾಲಯದಲ್ಲಿ ಪ್ರಕರಣವಿದೆ ಎಂದು ಹೇಳುವ ಮುಖಾಂತರ ಶ್ರೀಮಂತರನ್ನು ರಕ್ಷಣೆ ಮಾಡಿ ಬಡವರ ಬದುಕನ್ನು ಬೀದಿಗೆ ತಳ್ಳುತ್ತಿರುವುದು ಅರಣ್ಯ ಅಧಿಕಾರಿಗಳಿಗೆ ನ್ಯಾಯವೆನಿಸುತ್ತದೆಯೇ ಎಂದರು.

ಜಂಟಿ ಸರ್ವೇ ಹೆಸರಿನಲ್ಲಿ ಬಲಾಢ್ಯರನ್ನು ರಕ್ಷಣೆ ಮಾಡಿ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿರುವ ರೈತರ 3 ತಿಂಗಳ ಬೆವರ ಕಷ್ಟವನ್ನು ಅನುಭವಿಸಲು ಅವಕಾಶ ನೀಡದೆ ಕಣ್ಣ ಮುಂದೆಯೇ ರೈತರ ಬೆಳೆ ನಾಶ ಮಾಡುತ್ತಿರುವುದು ರೈತ ವಿರೋಧಿ ಧೋರಣೆಯಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅರಣ್ಯ ಅಧಿಕಾರಿಗಳಿಗೆ ಧೈರ್ಯವಿದ್ದರೆ ಬಂಗಾರಪೇಟೆ, ಮಾಲೂರು, ಮುಳಬಾಗಲು ತಾಲೂಕಿನಾದ್ಯಂತ ಬಲಾಢ್ಯರು, ಭೂಗಳ್ಳರ ಕಪಿಮುಷ್ಟಿಯಲ್ಲಿರುವ ಅರಣ್ಯ ಭೂಮಿಯನ್ನು
ತೆರವುಗೊಳಿಸಿ ಆಗ ನಿಮ್ಮ ಧೈರ್ಯಕ್ಕೆ ನಾವು ಬೆಂಬಲಿಸುತ್ತೇವೆ. ಅದನ್ನು ಬಿಟ್ಟು, ಅಮಾಯಕ ರೈತರ ಮೇಲೆ ತಮ್ಮ ದೌರ್ಜನ್ಯ, ದಬ್ಬಾಳಿಕೆ ನಿಲ್ಲಬೇಕು. ಇಲ್ಲವಾದರೆ ಕಾನೂನನ್ನು ಕೈಗೆತ್ತಿಕೊಳ್ಳುವ ಹೋರಾಟಕ್ಕೆ ಚಾಲನೆ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಬಲಾಢ್ಯರ ಸಾವಿರಾರು ಎಕರೆ ಭೂ ಒತ್ತುವರಿ ತೆರವುಗೊಳಿಸಲು ಮುಂದಾಗಬೇಕು. ಇಲ್ಲವಾದರೆ ಈಗಾಗಲೇ ರೈತರಿಂದ ಬಲವಂತದಿಂದ ಕಾನೂನಿನ ಅಡಿಯಲ್ಲಿ ಭೂಸ್ವಾಧೀನ ಮಾಡಿಕೊಂಡಿರುವ ಜಮೀನನ್ನು ಮತ್ತೆ ರೈತರಿಗೆ ವಾಪಸ್ ನೀಡುವ ಹೋರಾಟ ಮಾಡುವ ಎಚ್ಚರಿಕೆಯೊಂದಿಗೆ ಮನವಿ ನೀಡಿ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಅವರು, ಯಾರೇ ಎಷ್ಟೇ ಪ್ರಭಾವಿಗಳಾದರೂ ಒಂದು ಇಂಚು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲು ಅವಕಾಶ ನೀಡುವುದಿಲ್ಲ. ಜೊತೆಗೆ ರೈತರ ದಾಖಲೆ ಇದ್ದರೆ ಆ ಜಮೀನನ್ನು ತೆರವುಗೊಳಿಸುವುದಿಲ್ಲವೆಂದು ಭರವಸೆ ನೀಡಿದರು.

ಹೋರಾಟದಲ್ಲಿ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ರಾಜ್ಯ ಮುಖಂಡ ಬಂಗವಾದಿ ನಾಗರಾಜಗೌಡ, ಮಂಗಸಂದ್ರ ತಿಮ್ಮಣ್ಣ, ಗಿರೀಶ್, ಪುತ್ತೇರಿ ರಾಜು, ಸುಪ್ರೀಂ ಚಲ,
ಕದಿರಿನತ್ತ ಅಪ್ಪೋಜಿರಾವ್, ತೆರ್ನಹಳ್ಳಿ ಆಂಜಿನಪ್ಪ, ಯಲ್ಲಣ್ಣ, ಶೈಲಜ, ರತ್ನಮ್ಮ, ಗೌರಮ್ಮ, ಮುನಿವೆಂಕಟಮ್ಮ ಮುಂತಾದವರಿದ್ದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

8 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

9 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

13 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

15 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

18 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

19 hours ago