Categories: ಕೋಲಾರ

ಅರಣ್ಯ ಸಂರಕ್ಷಣೆಗೆ ಇಲಾಖೆಯ ಸಿಬ್ಬಂದಿಯ ಸೇವೆ ಅನನ್ಯವಾದದ್ದು-ನ್ಯಾ. ಮಂಜುನಾಥ್

ಕೋಲಾರ: ಗಡಿಯಲ್ಲಿ ಯೋಧರು ದೇಶವನ್ನು ರಕ್ಷಣೆ ಮಾಡಿದರೆ ದೇಶದ ಒಳಗಿರುವ ಅರಣ್ಯ ಸಂಪತ್ತನ್ನು ಸಂರಕ್ಷಿಸುವ ಮಹತ್ವದ ಕಾರ್ಯವನ್ನು ಅರಣ್ಯ ಇಲಾಖೆ ಸಿಬ್ಬಂದಿ ವಹಿಸಿದ್ದಾರೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎ ಮಂಜುನಾಥ ತಿಳಿಸಿದರು.

ನಗರದ ಹೊರವಲಯದ ಗಾಜಲದಿನ್ನೆ ಅರಣ್ಯ ವಿಭಾಗ ಕಛೇರಿಯ ಆವರಣದಲ್ಲಿ ಬುಧವಾರ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ ಗೌರವ ಸಲ್ಲಿಸಿ ಮಾತನಾಡಿದ ಅವರು ಇಂದಿನ ದಿನಗಳಲ್ಲಿ ಪ್ರಾಣಿ ಮತ್ತು ಮಾನವನ ನಡುವಿನ ಸಂಘರ್ಷಗಳ ನಡುವೆ ಅರಣ್ಯವನ್ನು ನಾಶ ಮಾಡಲು ಹೊರಟಿದ್ದಾರೆ ಇದರೊಂದಿಗೆ ಪ್ರಕೃತಿ ವಿಕೋಪ ಮತ್ತು ದರೋಡೆಕೋರ ಮಧ್ಯೆ ಸೆಣಸಾಟದಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಬಲಿಯಾಗುತ್ತಾ ಇದ್ದಾರೆ ಅವರ ಪ್ರಾಣ ತ್ಯಾಗಕ್ಕೆ ಅವರ ಕುಟುಂಬಗಳಿಗೆ ಶಾಂತಿ ಮತ್ತು ಭವಿಷ್ಯ ರೂಪಿಸುವಂತಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ ಅರಣ್ಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಕರ್ತವ್ಯವಾಗಬೇಕು ಅರಣ್ಯ ಸಂಪತ್ತು ದೇಶದ ಸಮೃದ್ಧಿಯ ಸಂಕೇತವಾಗಿದೆ ಅರಣ್ಯವನ್ನು ಸಂರಕ್ಷಿಸುವುದರಿಂದ ಮಾತ್ರವೇ ಮುಂದಿನ ಜನಾಂಗಕ್ಕೆ ಉತ್ತಮ ಭವಿಷ್ಯವನ್ನು ನೀಡಲು ಸಾಧ್ಯವಾಗುತ್ತದೆ ಅರಣ್ಯ ಸಂರಕ್ಷಣೆಗಾಗಿ ತಮ್ಮ ಪ್ರಾಣಿಗಳನ್ನು ಕೊಟ್ಟ ಮಹನೀಯರ ತ್ಯಾಗವು ವ್ಯರ್ಥವಾಗಬಾರದು ಎಂದರು.

ಕೋಲಾರ ಜಿಲ್ಲೆಯಲ್ಲಿ ಇತ್ತಿಚೆಗೆ ಸುಮಾರು 2850 ಎಕರೆಗಳಷ್ಟು ಅರಣ್ಯ ಭೂಮಿಯನ್ನು ಉಳಿಸಿದ್ದು ಭಾರತ ದೇಶದ ಇತಿಹಾಸದಲ್ಲೇ ದೊಡ್ಡ ಮಟ್ಟದ ದಾಖಲೆಯಾಗಿದೆ ಜಿಲ್ಲೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಏಡುಕೊಂಡಲು ಅವರ ಧೈರ್ಯವನ್ನು ಇತರೆ ಅಧಿಕಾರಿಗಳಿಗೆ ಸ್ಪೂರ್ತಿ ಮತ್ತು ಮಾದರಿಯಾಗಬೇಕು ಇವರ ಸೇವೆಯನ್ನು ಸರಕಾರವು ಗುರುತಿಸಬೇಕಾಗಿದೆ ಭಯ ಮತ್ತು ಒತ್ತಡಕ್ಕೆ ಮಣಿಯದೇ ತಮ್ಮ ಕೆಲಸವನ್ನು ಮುಂದುವರೆಸಲು ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಾಗುತ್ತದೆ ಎಂದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಮಾತನಾಡಿ ಅರಣ್ಯ ಇಲಾಖೆ ಹುತಾತ್ಮ ಸಿಬ್ಬಂದಿಯ ನೋವು ನಮ್ಮ ಪೋಲಿಸ್ ಇಲಾಖೆಯಲ್ಲಿ ಕೂಡ ಇದೆ
ಅರಣ್ಯ ಸಂರಕ್ಷಣೆಯು ನಮ್ಮೆಲ್ಲರ ಬದ್ದತೆಯನ್ನು ಹೆಚ್ಚಿಸುತ್ತದೆ ಹುತಾತ್ಮರ ಕುಟುಂಬದೊಂದಿಗೆ ಇಲಾಖೆಗಳು ಸದಾ ಇರುತ್ತದೆ ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಮಾತ್ರವೇ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಅದಕ್ಕೆ ಕೋಲಾರದಲ್ಲಿ ಒತ್ತುವರಿ ತೆರೆವು ಉದಾಹರಣೆಯಾಗಿದೆ ಅರಣ್ಯ ಇಲಾಖೆಯು ಒತ್ತುವರಿ ಭೂಮಿಯನ್ನು ಜಿಲ್ಲಾಡಳಿತಕ್ಕೆ ಕೊಡುಗೆಯಾಗಿ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಏಡುಕೊಂಡಲು ಮಾತನಾಡಿ ಪ್ರತಿ ವರ್ಷವೂ ಅರಣ್ಯ ಇಲಾಖೆಯ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗಲೇ ಮೃತಪಡುತ್ತಿದ್ದಾರೆ. ಅವರ ಸೇವೆಯನ್ನು ನಾವು ಸ್ಮರಿಸಬೇಕು. ಆ ಉದ್ದೇಶಕ್ಕಾಗಿ ರಾಷ್ಟ್ರೀಯವಾಗಿ ಹುತಾತ್ಮರ ದಿನ ಆಚರಿಸುತ್ತಿರುವುದು ಒಳ್ಳೆಯ ಕೆಲಸವಾಗಿದೆ ಸುಮಾರು 61 ಸಿಬ್ಬಂದಿ ರಾಜ್ಯದಲ್ಲಿ ಹುತಾತ್ಮರಾಗಿದ್ದಾರೆ ಅವರ ಸೇವೆ ಇನ್ನೂ ಇಲಾಖೆಗೆ ಅಗತ್ಯವಾಗಿತ್ತು ಎಂದು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಶ್ರೀನಿವಾಸ್ ಎಸ್ ಪಾಟೀಲ್, ಒಂದನೇ ಅಧಿಕ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಚೇತನಾ ಅರಿಕಟ್ಟೆ, ಸಾಮಾಜಿಕ ಅರಣ್ಯಾಧಿಕಾರಿ ಆನಂದ್ ಕುಮಾರ್, ವೇದಿಕೆಯಲ್ಲಿ ಇದ್ದು ಕೋಲಾರ ಪ್ರಾದೇಶಿಕ ಉಪ ವಲಯ ಅರಣ್ಯಾಧಿಕಾರಿ ಬಿ.ಮಂಜುನಾಥ್ ಕಾರ್ಯಕ್ರಮವನ್ನು ನಿರೂಪಿಸಿದರು, ಅತಿಥಿಗಳು ಹುತಾತ್ಮ ಸ್ಮಾರಕಕ್ಕೆ ಪುಷ್ಪ ಗುಚ್ಚ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಪೊಲೀಸ್ ತಂಡದಿಂದ ಹುತಾತ್ಮರ ಸ್ಮರಣಾರ್ಥ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

6 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

7 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

19 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

20 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

20 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

21 hours ago