ಬೆಂಗಳೂರು: ವಿಶ್ವ ಕುಂದಾಪುರ ಕನ್ನಡ ಹಬ್ಬವನ್ನು ಪ್ರತಿವರ್ಷವೂ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಆಚರಣೆ ಮಾಡಿಕೊಂಡು ಬಂದಿದೆ. ಕುಂದಾಪ್ರ ಕನ್ನಡ ಪ್ರತಿಷ್ಠಾನದ ವತಿಯಿಂದ ಆಗಸ್ಟ್ 17 ರಿಂದ 18ರವರೆಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ. ಇದಕ್ಕೆ ಪೂರ್ವಭಾವಿಯಾಗಿ ಇಂದು ಥೀಮ್ ಸಾಂಗ್ ಮತ್ತು ಪೋಸ್ಟರ್ ಅನಾವರಣ ಕಾರ್ಯಕ್ರಮ ಮಾಗಡಿ ರಸ್ತೆಯ ಕೊಟ್ಟಿಗೆಪಾಳ್ಯದ ಸುದೀಕ್ಷಾ ಕನ್ವೆನ್ಶನ್ ಹಾಲ್ ನಲ್ಲಿ ನಡೆಯಿತು.
ಉದ್ಘಾಟಕರಾದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಮಾತಾಡಿ, ಕುಂದಾಪ್ರ ಕನ್ನಡ ಹಬ್ಬದಲ್ಲಿ ಹಲವುರು ಶ್ರಮಿಸುತ್ತಿದ್ದಾರೆ. ಸದಾ ಈ ಪ್ರಯತ್ನಕ್ಕೆ ನನ್ನ ಬೆಂಬಲ ಇರಲಿದೆ. ಕುಂದಾಪುರ ಸಂಸ್ಕ್ರತಿಗೆ ಸಂಬಂಧಿಸಿದ ಹೊಸ ಪ್ರಯೋಗ ಮಾಡುತ್ತಿದ್ದು, ಕುಂದಾಪುರ ಹಬ್ಬದಲ್ಲಿ ಅದನ್ನ ರಿವೀಲ್ ಮಾಡೋದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಚಿತ್ರ ಸಾಹಿತಿ ಪ್ರಮೋದ್ ಮರವಂತೆ, ಸತೀಶ್ ಶೆಟ್ಟಿ, ಉಪೇಂದ್ರ ಶೆಟ್ಟಿ, ಕುಂದಾಪ್ರ ಕನ್ನಡ ಪ್ರತಿಷ್ಠಾನದ ದೀಪಕ್ ಶೆಟ್ಟಿ, ರಾಘವೇಂದ್ರ ಕಾಂಚನ್, ನರಸಿಂಹ ಬೀಜಾಡಿ, ಅಜಿತ್ ಶೆಟ್ಟಿ ಉಳ್ತೂರು, ಉದಯ್ ಹೆಗ್ಡೆ ಉಪಸ್ಥಿತರಿದ್ದು ಶುಭ ಹಾರೈಸಿದರು.
*ಈ ಬಾರಿಯ ಕುಂದಾಪುರ ಕನ್ನಡದ ವಿಶೇಷತೆಗಳು*
ಬೆಂಗಳೂರಿನ ಹಲವು ಏರಿಯಾಗಳಿಂದ ಮೆರವಣಿಗೆಯೊಂದಿಗೆ ದಿಬ್ಬಣವು ಅರಮನೆ ಮೈದಾನಕ್ಕೆ ಬರಲಿದೆ. ಬಳಿಕ ನುಡಿ ಚಾವುಡಿಯ ಮೂಲಕ ಆಗಸ್ಟ್ 17 ರ ಶನಿವಾರ ಮಧ್ಯಾನ್ಹ ಉದ್ಘಾಟನಾ ಕಾರ್ಯಕ್ರಮ ಇರಲಿದೆ. ಚಿತ್ರತಾರೆಯರು, ಗಣ್ಯರು ಉಪಸ್ಥಿತರಿರಲಿದ್ದಾರೆ.
ಕುಂದಾಪುರ ಕನ್ನಡ ಹಬ್ಬದಲ್ಲಿ ಬೆಂಗಳೂರಿನಲ್ಲಿ ಅತಿದೊಡ್ಡ ಐತಿಹಾಸಿಕ ಜೋಡಾಟ ಯಕ್ಷಗಾನ, ಹಂದಾಡಿ ಮತ್ತು ತಂಡದ ಹಂದಾಡ್ತಾ ನೆಗ್ಯಾಡಿಯ ವಿಭಿನ್ನ ನಗೆನಾಟಕ, ಕುಂದಾಪುರದ ಗ್ರಾಮೀಣ ಕ್ರೀಡೆಗಳನ್ನ ಒಳಗೊಂಡ ಬಯಲಾಟ, ರಥೋತ್ಸವ, ಆಫ್ರಿಕಾದ ಜಂಬೆ- ಕುಂದಾಪುರದ ಚಂಡೆಯ ಜುಗಲ್ಬಂದಿ ಕಾರ್ಯಕ್ರಮದಲ್ಲಿ ಆಫ್ರಿಕಾ- ಕುಂದಾಪುರ ಕಲಾ ಸಮಾಗಮ, ಭುಭಬಲದ ಪರಾಕ್ರಮ ಎಂಬ ಹಗ್ಗ ಜಗ್ಗಾಟ ಸ್ಪರ್ಧೆ, ಯುವಕ-ಯುವತಿಯರಿಗಾಗಿ ಕುಂದಾಪುರ ಕನ್ನಡ ಡಿಜೆ, ಕುಂದಗೀತೆಗಳ ಡಾನ್ಸ್ ಕುಂದಾಪುರ ಡಾನ್ಸ್, ಕುಂದಾಪುರ ಕನ್ನಡ ಚಿತ್ರ ಪ್ರದರ್ಶನ, ಕುಂದಾಪುರ ನೆಲಮೂಲದ ಸಿನಿ ತಾರಾ ಮೆರಗು, ಕಡಲೂರಿನ ವಸ್ತು, ಒಡವೆ, ವಸ್ತ್ರ ಮೊದಲಾದವುಗಳ ಪ್ರದರ್ಶನ, ಮಾರಾಟ, ಕರಾವಳಿ ಖಾದ್ಯ ಮೇಳ ಸೇರಿ ಈ ಬಾರಿ ವೈವಿಧ್ಯಮಯ ಕಾರ್ಯಕ್ರಮಗಳು ಇರಲಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ-ರೂಪೇಶ್ ಬೈಂದೂರು9535472318
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…