ಅರಮನೆ ಮೈದಾನದಲ್ಲಿ ವಿಶ್ವ ಕುಂದಾಪುರ ಕನ್ನಡ ಹಬ್ಬ

ಬೆಂಗಳೂರು:  ವಿಶ್ವ ಕುಂದಾಪುರ ಕನ್ನಡ ಹಬ್ಬವನ್ನು ಪ್ರತಿವರ್ಷವೂ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಆಚರಣೆ ಮಾಡಿಕೊಂಡು ಬಂದಿದೆ. ಕುಂದಾಪ್ರ ಕನ್ನಡ ಪ್ರತಿಷ್ಠಾನದ ವತಿಯಿಂದ ಆಗಸ್ಟ್ 17 ರಿಂದ 18ರವರೆಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ. ಇದಕ್ಕೆ ಪೂರ್ವಭಾವಿಯಾಗಿ ಇಂದು ಥೀಮ್ ಸಾಂಗ್ ಮತ್ತು ಪೋಸ್ಟರ್ ಅನಾವರಣ ಕಾರ್ಯಕ್ರಮ ಮಾಗಡಿ ರಸ್ತೆಯ ಕೊಟ್ಟಿಗೆಪಾಳ್ಯದ ಸುದೀಕ್ಷಾ ಕನ್ವೆನ್ಶನ್ ಹಾಲ್ ನಲ್ಲಿ ನಡೆಯಿತು.

ಉದ್ಘಾಟಕರಾದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಮಾತಾಡಿ, ಕುಂದಾಪ್ರ ಕನ್ನಡ ಹಬ್ಬದಲ್ಲಿ ಹಲವುರು ಶ್ರಮಿಸುತ್ತಿದ್ದಾರೆ. ಸದಾ ಈ ಪ್ರಯತ್ನಕ್ಕೆ ನನ್ನ ಬೆಂಬಲ ಇರಲಿದೆ. ಕುಂದಾಪುರ ಸಂಸ್ಕ್ರತಿಗೆ ಸಂಬಂಧಿಸಿದ ಹೊಸ ಪ್ರಯೋಗ ಮಾಡುತ್ತಿದ್ದು, ಕುಂದಾಪುರ ಹಬ್ಬದಲ್ಲಿ ಅದನ್ನ ರಿವೀಲ್ ಮಾಡೋದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಚಿತ್ರ ಸಾಹಿತಿ ಪ್ರಮೋದ್ ಮರವಂತೆ, ಸತೀಶ್ ಶೆಟ್ಟಿ, ಉಪೇಂದ್ರ ಶೆಟ್ಟಿ, ಕುಂದಾಪ್ರ ಕನ್ನಡ ಪ್ರತಿಷ್ಠಾನದ ದೀಪಕ್ ಶೆಟ್ಟಿ, ರಾಘವೇಂದ್ರ ಕಾಂಚನ್, ನರಸಿಂಹ ಬೀಜಾಡಿ, ಅಜಿತ್ ಶೆಟ್ಟಿ ಉಳ್ತೂರು, ಉದಯ್ ಹೆಗ್ಡೆ ಉಪಸ್ಥಿತರಿದ್ದು ಶುಭ ಹಾರೈಸಿದರು.

*ಈ ಬಾರಿಯ ಕುಂದಾಪುರ ಕನ್ನಡದ ವಿಶೇಷತೆಗಳು*

ಬೆಂಗಳೂರಿನ ಹಲವು ಏರಿಯಾಗಳಿಂದ ಮೆರವಣಿಗೆಯೊಂದಿಗೆ ದಿಬ್ಬಣವು ಅರಮನೆ ಮೈದಾನಕ್ಕೆ ಬರಲಿದೆ. ಬಳಿಕ ನುಡಿ ಚಾವುಡಿಯ ಮೂಲಕ ಆಗಸ್ಟ್ 17 ರ ಶನಿವಾರ ಮಧ್ಯಾನ್ಹ ಉದ್ಘಾಟನಾ ಕಾರ್ಯಕ್ರಮ ಇರಲಿದೆ. ಚಿತ್ರತಾರೆಯರು, ಗಣ್ಯರು ಉಪಸ್ಥಿತರಿರಲಿದ್ದಾರೆ.

ಕುಂದಾಪುರ ಕನ್ನಡ ಹಬ್ಬದಲ್ಲಿ ಬೆಂಗಳೂರಿನಲ್ಲಿ ಅತಿದೊಡ್ಡ ಐತಿಹಾಸಿಕ ಜೋಡಾಟ ಯಕ್ಷಗಾನ, ಹಂದಾಡಿ ಮತ್ತು ತಂಡದ ಹಂದಾಡ್ತಾ ನೆಗ್ಯಾಡಿಯ ವಿಭಿನ್ನ ನಗೆನಾಟಕ, ಕುಂದಾಪುರದ ಗ್ರಾಮೀಣ ಕ್ರೀಡೆಗಳನ್ನ ಒಳಗೊಂಡ ಬಯಲಾಟ, ರಥೋತ್ಸವ, ಆಫ್ರಿಕಾದ ಜಂಬೆ- ಕುಂದಾಪುರದ ಚಂಡೆಯ ಜುಗಲ್ಬಂದಿ ಕಾರ್ಯಕ್ರಮದಲ್ಲಿ ಆಫ್ರಿಕಾ- ಕುಂದಾಪುರ ಕಲಾ ಸಮಾಗಮ, ಭುಭಬಲದ ಪರಾಕ್ರಮ ಎಂಬ ಹಗ್ಗ ಜಗ್ಗಾಟ ಸ್ಪರ್ಧೆ, ಯುವಕ-ಯುವತಿಯರಿಗಾಗಿ ಕುಂದಾಪುರ ಕನ್ನಡ ಡಿಜೆ, ಕುಂದಗೀತೆಗಳ ಡಾನ್ಸ್ ಕುಂದಾಪುರ ಡಾನ್ಸ್, ಕುಂದಾಪುರ ಕನ್ನಡ ಚಿತ್ರ ಪ್ರದರ್ಶನ, ಕುಂದಾಪುರ ನೆಲಮೂಲದ ಸಿನಿ ತಾರಾ ಮೆರಗು, ಕಡಲೂರಿನ ವಸ್ತು,‌ ಒಡವೆ, ವಸ್ತ್ರ ಮೊದಲಾದವುಗಳ ಪ್ರದರ್ಶನ, ಮಾರಾಟ, ಕರಾವಳಿ ಖಾದ್ಯ ಮೇಳ ಸೇರಿ ಈ ಬಾರಿ ವೈವಿಧ್ಯಮಯ ಕಾರ್ಯಕ್ರಮಗಳು ಇರಲಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ-ರೂಪೇಶ್ ಬೈಂದೂರು9535472318

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

7 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

8 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

16 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago