ಬೆಂಗಳೂರು: ವಿಶ್ವ ಕುಂದಾಪುರ ಕನ್ನಡ ಹಬ್ಬವನ್ನು ಪ್ರತಿವರ್ಷವೂ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಆಚರಣೆ ಮಾಡಿಕೊಂಡು ಬಂದಿದೆ. ಕುಂದಾಪ್ರ ಕನ್ನಡ ಪ್ರತಿಷ್ಠಾನದ ವತಿಯಿಂದ ಆಗಸ್ಟ್ 17 ರಿಂದ 18ರವರೆಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ. ಇದಕ್ಕೆ ಪೂರ್ವಭಾವಿಯಾಗಿ ಇಂದು ಥೀಮ್ ಸಾಂಗ್ ಮತ್ತು ಪೋಸ್ಟರ್ ಅನಾವರಣ ಕಾರ್ಯಕ್ರಮ ಮಾಗಡಿ ರಸ್ತೆಯ ಕೊಟ್ಟಿಗೆಪಾಳ್ಯದ ಸುದೀಕ್ಷಾ ಕನ್ವೆನ್ಶನ್ ಹಾಲ್ ನಲ್ಲಿ ನಡೆಯಿತು.
ಉದ್ಘಾಟಕರಾದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಮಾತಾಡಿ, ಕುಂದಾಪ್ರ ಕನ್ನಡ ಹಬ್ಬದಲ್ಲಿ ಹಲವುರು ಶ್ರಮಿಸುತ್ತಿದ್ದಾರೆ. ಸದಾ ಈ ಪ್ರಯತ್ನಕ್ಕೆ ನನ್ನ ಬೆಂಬಲ ಇರಲಿದೆ. ಕುಂದಾಪುರ ಸಂಸ್ಕ್ರತಿಗೆ ಸಂಬಂಧಿಸಿದ ಹೊಸ ಪ್ರಯೋಗ ಮಾಡುತ್ತಿದ್ದು, ಕುಂದಾಪುರ ಹಬ್ಬದಲ್ಲಿ ಅದನ್ನ ರಿವೀಲ್ ಮಾಡೋದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಚಿತ್ರ ಸಾಹಿತಿ ಪ್ರಮೋದ್ ಮರವಂತೆ, ಸತೀಶ್ ಶೆಟ್ಟಿ, ಉಪೇಂದ್ರ ಶೆಟ್ಟಿ, ಕುಂದಾಪ್ರ ಕನ್ನಡ ಪ್ರತಿಷ್ಠಾನದ ದೀಪಕ್ ಶೆಟ್ಟಿ, ರಾಘವೇಂದ್ರ ಕಾಂಚನ್, ನರಸಿಂಹ ಬೀಜಾಡಿ, ಅಜಿತ್ ಶೆಟ್ಟಿ ಉಳ್ತೂರು, ಉದಯ್ ಹೆಗ್ಡೆ ಉಪಸ್ಥಿತರಿದ್ದು ಶುಭ ಹಾರೈಸಿದರು.
*ಈ ಬಾರಿಯ ಕುಂದಾಪುರ ಕನ್ನಡದ ವಿಶೇಷತೆಗಳು*
ಬೆಂಗಳೂರಿನ ಹಲವು ಏರಿಯಾಗಳಿಂದ ಮೆರವಣಿಗೆಯೊಂದಿಗೆ ದಿಬ್ಬಣವು ಅರಮನೆ ಮೈದಾನಕ್ಕೆ ಬರಲಿದೆ. ಬಳಿಕ ನುಡಿ ಚಾವುಡಿಯ ಮೂಲಕ ಆಗಸ್ಟ್ 17 ರ ಶನಿವಾರ ಮಧ್ಯಾನ್ಹ ಉದ್ಘಾಟನಾ ಕಾರ್ಯಕ್ರಮ ಇರಲಿದೆ. ಚಿತ್ರತಾರೆಯರು, ಗಣ್ಯರು ಉಪಸ್ಥಿತರಿರಲಿದ್ದಾರೆ.
ಕುಂದಾಪುರ ಕನ್ನಡ ಹಬ್ಬದಲ್ಲಿ ಬೆಂಗಳೂರಿನಲ್ಲಿ ಅತಿದೊಡ್ಡ ಐತಿಹಾಸಿಕ ಜೋಡಾಟ ಯಕ್ಷಗಾನ, ಹಂದಾಡಿ ಮತ್ತು ತಂಡದ ಹಂದಾಡ್ತಾ ನೆಗ್ಯಾಡಿಯ ವಿಭಿನ್ನ ನಗೆನಾಟಕ, ಕುಂದಾಪುರದ ಗ್ರಾಮೀಣ ಕ್ರೀಡೆಗಳನ್ನ ಒಳಗೊಂಡ ಬಯಲಾಟ, ರಥೋತ್ಸವ, ಆಫ್ರಿಕಾದ ಜಂಬೆ- ಕುಂದಾಪುರದ ಚಂಡೆಯ ಜುಗಲ್ಬಂದಿ ಕಾರ್ಯಕ್ರಮದಲ್ಲಿ ಆಫ್ರಿಕಾ- ಕುಂದಾಪುರ ಕಲಾ ಸಮಾಗಮ, ಭುಭಬಲದ ಪರಾಕ್ರಮ ಎಂಬ ಹಗ್ಗ ಜಗ್ಗಾಟ ಸ್ಪರ್ಧೆ, ಯುವಕ-ಯುವತಿಯರಿಗಾಗಿ ಕುಂದಾಪುರ ಕನ್ನಡ ಡಿಜೆ, ಕುಂದಗೀತೆಗಳ ಡಾನ್ಸ್ ಕುಂದಾಪುರ ಡಾನ್ಸ್, ಕುಂದಾಪುರ ಕನ್ನಡ ಚಿತ್ರ ಪ್ರದರ್ಶನ, ಕುಂದಾಪುರ ನೆಲಮೂಲದ ಸಿನಿ ತಾರಾ ಮೆರಗು, ಕಡಲೂರಿನ ವಸ್ತು, ಒಡವೆ, ವಸ್ತ್ರ ಮೊದಲಾದವುಗಳ ಪ್ರದರ್ಶನ, ಮಾರಾಟ, ಕರಾವಳಿ ಖಾದ್ಯ ಮೇಳ ಸೇರಿ ಈ ಬಾರಿ ವೈವಿಧ್ಯಮಯ ಕಾರ್ಯಕ್ರಮಗಳು ಇರಲಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ-ರೂಪೇಶ್ ಬೈಂದೂರು9535472318
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…