ಅರಮನೆ ಮೈದಾನದಲ್ಲಿ ವಿಶ್ವ ಕುಂದಾಪುರ ಕನ್ನಡ ಹಬ್ಬ

ಬೆಂಗಳೂರು:  ವಿಶ್ವ ಕುಂದಾಪುರ ಕನ್ನಡ ಹಬ್ಬವನ್ನು ಪ್ರತಿವರ್ಷವೂ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಆಚರಣೆ ಮಾಡಿಕೊಂಡು ಬಂದಿದೆ. ಕುಂದಾಪ್ರ ಕನ್ನಡ ಪ್ರತಿಷ್ಠಾನದ ವತಿಯಿಂದ ಆಗಸ್ಟ್ 17 ರಿಂದ 18ರವರೆಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ. ಇದಕ್ಕೆ ಪೂರ್ವಭಾವಿಯಾಗಿ ಇಂದು ಥೀಮ್ ಸಾಂಗ್ ಮತ್ತು ಪೋಸ್ಟರ್ ಅನಾವರಣ ಕಾರ್ಯಕ್ರಮ ಮಾಗಡಿ ರಸ್ತೆಯ ಕೊಟ್ಟಿಗೆಪಾಳ್ಯದ ಸುದೀಕ್ಷಾ ಕನ್ವೆನ್ಶನ್ ಹಾಲ್ ನಲ್ಲಿ ನಡೆಯಿತು.

ಉದ್ಘಾಟಕರಾದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಮಾತಾಡಿ, ಕುಂದಾಪ್ರ ಕನ್ನಡ ಹಬ್ಬದಲ್ಲಿ ಹಲವುರು ಶ್ರಮಿಸುತ್ತಿದ್ದಾರೆ. ಸದಾ ಈ ಪ್ರಯತ್ನಕ್ಕೆ ನನ್ನ ಬೆಂಬಲ ಇರಲಿದೆ. ಕುಂದಾಪುರ ಸಂಸ್ಕ್ರತಿಗೆ ಸಂಬಂಧಿಸಿದ ಹೊಸ ಪ್ರಯೋಗ ಮಾಡುತ್ತಿದ್ದು, ಕುಂದಾಪುರ ಹಬ್ಬದಲ್ಲಿ ಅದನ್ನ ರಿವೀಲ್ ಮಾಡೋದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಚಿತ್ರ ಸಾಹಿತಿ ಪ್ರಮೋದ್ ಮರವಂತೆ, ಸತೀಶ್ ಶೆಟ್ಟಿ, ಉಪೇಂದ್ರ ಶೆಟ್ಟಿ, ಕುಂದಾಪ್ರ ಕನ್ನಡ ಪ್ರತಿಷ್ಠಾನದ ದೀಪಕ್ ಶೆಟ್ಟಿ, ರಾಘವೇಂದ್ರ ಕಾಂಚನ್, ನರಸಿಂಹ ಬೀಜಾಡಿ, ಅಜಿತ್ ಶೆಟ್ಟಿ ಉಳ್ತೂರು, ಉದಯ್ ಹೆಗ್ಡೆ ಉಪಸ್ಥಿತರಿದ್ದು ಶುಭ ಹಾರೈಸಿದರು.

*ಈ ಬಾರಿಯ ಕುಂದಾಪುರ ಕನ್ನಡದ ವಿಶೇಷತೆಗಳು*

ಬೆಂಗಳೂರಿನ ಹಲವು ಏರಿಯಾಗಳಿಂದ ಮೆರವಣಿಗೆಯೊಂದಿಗೆ ದಿಬ್ಬಣವು ಅರಮನೆ ಮೈದಾನಕ್ಕೆ ಬರಲಿದೆ. ಬಳಿಕ ನುಡಿ ಚಾವುಡಿಯ ಮೂಲಕ ಆಗಸ್ಟ್ 17 ರ ಶನಿವಾರ ಮಧ್ಯಾನ್ಹ ಉದ್ಘಾಟನಾ ಕಾರ್ಯಕ್ರಮ ಇರಲಿದೆ. ಚಿತ್ರತಾರೆಯರು, ಗಣ್ಯರು ಉಪಸ್ಥಿತರಿರಲಿದ್ದಾರೆ.

ಕುಂದಾಪುರ ಕನ್ನಡ ಹಬ್ಬದಲ್ಲಿ ಬೆಂಗಳೂರಿನಲ್ಲಿ ಅತಿದೊಡ್ಡ ಐತಿಹಾಸಿಕ ಜೋಡಾಟ ಯಕ್ಷಗಾನ, ಹಂದಾಡಿ ಮತ್ತು ತಂಡದ ಹಂದಾಡ್ತಾ ನೆಗ್ಯಾಡಿಯ ವಿಭಿನ್ನ ನಗೆನಾಟಕ, ಕುಂದಾಪುರದ ಗ್ರಾಮೀಣ ಕ್ರೀಡೆಗಳನ್ನ ಒಳಗೊಂಡ ಬಯಲಾಟ, ರಥೋತ್ಸವ, ಆಫ್ರಿಕಾದ ಜಂಬೆ- ಕುಂದಾಪುರದ ಚಂಡೆಯ ಜುಗಲ್ಬಂದಿ ಕಾರ್ಯಕ್ರಮದಲ್ಲಿ ಆಫ್ರಿಕಾ- ಕುಂದಾಪುರ ಕಲಾ ಸಮಾಗಮ, ಭುಭಬಲದ ಪರಾಕ್ರಮ ಎಂಬ ಹಗ್ಗ ಜಗ್ಗಾಟ ಸ್ಪರ್ಧೆ, ಯುವಕ-ಯುವತಿಯರಿಗಾಗಿ ಕುಂದಾಪುರ ಕನ್ನಡ ಡಿಜೆ, ಕುಂದಗೀತೆಗಳ ಡಾನ್ಸ್ ಕುಂದಾಪುರ ಡಾನ್ಸ್, ಕುಂದಾಪುರ ಕನ್ನಡ ಚಿತ್ರ ಪ್ರದರ್ಶನ, ಕುಂದಾಪುರ ನೆಲಮೂಲದ ಸಿನಿ ತಾರಾ ಮೆರಗು, ಕಡಲೂರಿನ ವಸ್ತು,‌ ಒಡವೆ, ವಸ್ತ್ರ ಮೊದಲಾದವುಗಳ ಪ್ರದರ್ಶನ, ಮಾರಾಟ, ಕರಾವಳಿ ಖಾದ್ಯ ಮೇಳ ಸೇರಿ ಈ ಬಾರಿ ವೈವಿಧ್ಯಮಯ ಕಾರ್ಯಕ್ರಮಗಳು ಇರಲಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ-ರೂಪೇಶ್ ಬೈಂದೂರು9535472318

Ramesh Babu

Journalist

Recent Posts

ಕೆಂಪೇಗೌಡರ ಹೆಸರನ್ನು ಶಾಶ್ವತಗೊಳಿಸಲು ಹೊಸ ಯೋಜನೆಗಳು: ಟೌನ್ ಪ್ಲಾನಿಂಗ್, ಕಾಲೇಜು, ಅಭಿವೃದ್ಧಿ ಕೇಂದ್ರ ಸ್ಥಾಪನೆ – ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

39 minutes ago

517ನೇ ಕೆಂಪೇಗೌಡ ಜಯಂತಿ: ವಿಮಾನ ನಿಲ್ದಾಣದಲ್ಲಿ ನಾಡಪ್ರಭುವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ

ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

3 hours ago

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

22 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

2 days ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

2 days ago