ಅರಳುಮಲ್ಲಿಗೆ-ಕುಂಟನಹಳ್ಳಿ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ: ದೃಶ್ಯವನ್ನ ಮೊಬೈಲ್ ನಲ್ಲಿ ಸೆರೆ ಹಿಡಿದ ವಾಹನ ಸವಾರರು

ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ತಾಲೂಕಿನ ವೀರಾಪುರ ಗ್ರಾಮದಿಂದ ಸುಮಾರು 4 ಕಿ.ಮೀ ದೂರದ ಅರಳುಮಲ್ಲಿಗೆ-ಕುಂಟನಹಳ್ಳಿ ರಸ್ತೆಯಲ್ಲಿ ಹುಸ್ಕೂರು ಗ್ರಾಮದ ಕಡೆಗೆ ಹೋಗುತ್ತಿದ್ದಾಗ ಚಿರತೆಯೊಂದು ಬೈಕ್ ಗೆ ಅಡ್ಡವಾಗಿ ಧಾವಿಸಿದೆ.  ಈ ದೃಶ್ಯವನ್ನು ವಾಹನ ಸವಾರರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

ಚಿರತೆ ಕಾಣಿಸಿಕೊಂಡ ಸ್ಥಳದಿಂದ ಸುಮಾರು ಅರ್ಧ ಕಿಮೀ ದೂರದಲ್ಲಿ ಗಂಡ್ರಗೊಳ್ಳಿಪುರ ಅರಣ್ಯ ಪ್ರದೇಶಕ್ಕೆ ಈ ಕಡೆಯಿಂದ ಚಿರತೆ ಬಂದಿರಬಹುದು ಎನ್ನಲಾಗಿದೆ.  ಚಿರತೆ ಕುಂಟನಹಳ್ಳಿ ರಸ್ತೆಯಿಂದ ಅರಳುಮಲ್ಲಿಗೆ ಕೆರೆ ಕಡೆಗೆ ಹೋಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇತ್ತೀಚೆಗೆ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಸುತ್ತಾಮುತ್ತಾ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿತ್ತು. ನಂತರ ಕುಕ್ಕಲಹಳ್ಳಿ ಗ್ರಾಮದಲ್ಲಿ ಮೇಕೆಯನ್ನ ಹೊತ್ತೊಯ್ದು ಬಲಿ ಪಡೆದಿತ್ತು. ಇದರಿಂದ ತಾಲೂಕಿನ ಜನತೆ ಜೀವಭಯದಲ್ಲಿ ಇದ್ದು, ಕೂಡಲೇ ಚಿರತೆಗಳನ್ನ ಸೆರೆ ಹಿಡಿಯುವಂತೆ ಅರಣ್ಯ‌ ಇಲಾಖೆಗೆ ಕೋರಿದ್ದಾರೆ.

Leave a Reply

Your email address will not be published. Required fields are marked *