ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ತಾಲೂಕಿನ ವೀರಾಪುರ ಗ್ರಾಮದಿಂದ ಸುಮಾರು 4 ಕಿ.ಮೀ ದೂರದ ಅರಳುಮಲ್ಲಿಗೆ-ಕುಂಟನಹಳ್ಳಿ ರಸ್ತೆಯಲ್ಲಿ ಹುಸ್ಕೂರು ಗ್ರಾಮದ ಕಡೆಗೆ ಹೋಗುತ್ತಿದ್ದಾಗ ಚಿರತೆಯೊಂದು ಬೈಕ್ ಗೆ ಅಡ್ಡವಾಗಿ ಧಾವಿಸಿದೆ. ಈ ದೃಶ್ಯವನ್ನು ವಾಹನ ಸವಾರರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.
ಚಿರತೆ ಕಾಣಿಸಿಕೊಂಡ ಸ್ಥಳದಿಂದ ಸುಮಾರು ಅರ್ಧ ಕಿಮೀ ದೂರದಲ್ಲಿ ಗಂಡ್ರಗೊಳ್ಳಿಪುರ ಅರಣ್ಯ ಪ್ರದೇಶಕ್ಕೆ ಈ ಕಡೆಯಿಂದ ಚಿರತೆ ಬಂದಿರಬಹುದು ಎನ್ನಲಾಗಿದೆ. ಚಿರತೆ ಕುಂಟನಹಳ್ಳಿ ರಸ್ತೆಯಿಂದ ಅರಳುಮಲ್ಲಿಗೆ ಕೆರೆ ಕಡೆಗೆ ಹೋಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇತ್ತೀಚೆಗೆ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಸುತ್ತಾಮುತ್ತಾ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿತ್ತು. ನಂತರ ಕುಕ್ಕಲಹಳ್ಳಿ ಗ್ರಾಮದಲ್ಲಿ ಮೇಕೆಯನ್ನ ಹೊತ್ತೊಯ್ದು ಬಲಿ ಪಡೆದಿತ್ತು. ಇದರಿಂದ ತಾಲೂಕಿನ ಜನತೆ ಜೀವಭಯದಲ್ಲಿ ಇದ್ದು, ಕೂಡಲೇ ಚಿರತೆಗಳನ್ನ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಕೋರಿದ್ದಾರೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…