ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ತಾಲೂಕಿನ ವೀರಾಪುರ ಗ್ರಾಮದಿಂದ ಸುಮಾರು 4 ಕಿ.ಮೀ ದೂರದ ಅರಳುಮಲ್ಲಿಗೆ-ಕುಂಟನಹಳ್ಳಿ ರಸ್ತೆಯಲ್ಲಿ ಹುಸ್ಕೂರು ಗ್ರಾಮದ ಕಡೆಗೆ ಹೋಗುತ್ತಿದ್ದಾಗ ಚಿರತೆಯೊಂದು ಬೈಕ್ ಗೆ ಅಡ್ಡವಾಗಿ ಧಾವಿಸಿದೆ. ಈ ದೃಶ್ಯವನ್ನು ವಾಹನ ಸವಾರರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.
ಚಿರತೆ ಕಾಣಿಸಿಕೊಂಡ ಸ್ಥಳದಿಂದ ಸುಮಾರು ಅರ್ಧ ಕಿಮೀ ದೂರದಲ್ಲಿ ಗಂಡ್ರಗೊಳ್ಳಿಪುರ ಅರಣ್ಯ ಪ್ರದೇಶಕ್ಕೆ ಈ ಕಡೆಯಿಂದ ಚಿರತೆ ಬಂದಿರಬಹುದು ಎನ್ನಲಾಗಿದೆ. ಚಿರತೆ ಕುಂಟನಹಳ್ಳಿ ರಸ್ತೆಯಿಂದ ಅರಳುಮಲ್ಲಿಗೆ ಕೆರೆ ಕಡೆಗೆ ಹೋಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇತ್ತೀಚೆಗೆ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಸುತ್ತಾಮುತ್ತಾ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿತ್ತು. ನಂತರ ಕುಕ್ಕಲಹಳ್ಳಿ ಗ್ರಾಮದಲ್ಲಿ ಮೇಕೆಯನ್ನ ಹೊತ್ತೊಯ್ದು ಬಲಿ ಪಡೆದಿತ್ತು. ಇದರಿಂದ ತಾಲೂಕಿನ ಜನತೆ ಜೀವಭಯದಲ್ಲಿ ಇದ್ದು, ಕೂಡಲೇ ಚಿರತೆಗಳನ್ನ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಕೋರಿದ್ದಾರೆ.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…