ಅರಳುಮಲ್ಲಿಗೆ ಕೆರೆಯ ಒಡಲು ಸೇರುತ್ತಿರುವ ಕಾರ್ಖಾನೆಗಳ ತ್ಯಾಜ್ಯ ನೀರು : ರಾತ್ರಿ ವೇಳೆ ಟ್ಯಾಂಕರ್ ಗಳ ಮೂಲಕ ಕೆರೆ ಅಂಗಳಕ್ಕೆ ಹರಿದು ಬಿಡುತ್ತಿರುವ ಆರೋಪ

ಬಾಶೆಟ್ಟಿಹಳ್ಳಿ ಕೈಗಾರಿಕೆಗಳ ವಕ್ರದೃಷ್ಠಿ ಈಗ ಅರಳುಮಲ್ಲಿಗೆ ಕೆರೆ ಅಂಗಳದ ಕಡೆಗೆ ಬಿದ್ದಿದ್ದು, ಕಾರ್ಖಾನೆಗಳ ತ್ಯಾಜ್ಯ ನೀರನ್ನು ಟ್ಯಾಂಕರ್ ಗಳ ಮೂಲಕ ರಾತ್ರಿ ವೇಳೆ ತುಂಬಿಕೊಂಡು ಬಂದು ರಸ್ತೆ ಅಂಚಿನ ರಾಜಕಾಲುವೆಗಳ ಮೂಲಕ ಕೆರೆ ಅಂಗಳಕ್ಕೆ ಹರಿದು ಬಿಡಲಾಗುತ್ತಿದೆ.

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಸುತ್ತಲಿನ ಚಿಕ್ಕತುಮಕೂರು, ವೀರಾಪುರ, ದೊಡ್ಡತುಮಕೂರು ಕೆರೆಗಳಿಗೆ ಕಾಖಾನೆಗಳ ತ್ಯಾಜ್ಯ ನೀರು ಹರಿದು ಕೆರೆಯಲ್ಲಿನ ನೀರಷ್ಟೇ ಅಲ್ಲದೆ ಅಂತರ್ಜಲವು ಸಂಪೂರ್ಣವಾಗಿ ಕಲುಷಿತಗೊಂಡಿದೆ. ಇಲ್ಲಿನ ಜನರು ಎಚ್ಚೆತ್ತುಕೊಂಡು ತ್ಯಾಜ್ಯ ನೀರನ್ನು ಕೆರೆಗೆ ಹರಿಸುವುದರ ವಿರುದ್ಧ ಹೋರಾಟವನ್ನು ತೀವ್ರಗೊಳಿಸಿದ ನಂತರ ಈಗ ಕಾರ್ಖಾನೆಗಳವರು ರಾತ್ರಿ ವೇಳೆ ಟ್ಯಾಂಕರ್ ಗಳ ಮೂಲಕ ಅರಳುಮಲ್ಲಿಗೆ ಕೆರೆಗೆ ತಂದು ಸುರಿಯುತ್ತಿದ್ದಾರೆ.

ಈ ಬಗ್ಗೆ ಯುವಸಂಚಲನ ಅಧ್ಯಕ್ಷ ಚಿದಾನಂದ್ ಅವರು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ನೀಡಿದ್ದರ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ವಿಜಯ ಅವರು ಬುಧವಾರ ಕೆರೆ ಅಂಚಿನ ರಾಜಕಾಲುಗಳಿಗೆ ಭೇಟಿ ನೀಡಿ ಅಲ್ಲಿ ಶೇಖರಣೆಯಾಗಿದ್ದ ತ್ಯಾಜ್ಯ ನೀರನ್ನು ಸಂಗ್ರಹ ಮಾಡಿಕೊಂಡು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

ಈಗ ನಿರ್ಮಾಣ ಹಂತದಲ್ಲಿ ಇರುವ ದಾಬಸ್ಪೇಟೆ-ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲೇ ಇರುವ ರಾಜಕಾಲುವೆಗಳಿಗೆ ರಾತ್ರಿ ವೇಳೆ ಟ್ಯಾಂಕರ್ಗಳ ಮೂಲಕ ತ್ಯಾಜ್ಯ ನೀರನ್ನು ಸುರಿದು ಹೋಗಲಾಗುತ್ತಿದೆ.

ಇದಷ್ಟೇ ಅಲ್ಲದೆ ಹೆದ್ದಾರಿ ನಿರ್ಮಾಣಕ್ಕಾಗಿ ಕೆರೆ ಅಂಗಳದಿಂದ ಮಣ್ಣು ಸಾಗಿಸಲು ತಾತ್ಕಾಲಿಕವಾಗಿ ನಿರ್ಮಿಸಿಕೊಂಡಿರುವ ರಸ್ತೆಗಳ ಮೂಲಕವು ಕೆರೆ ಅಂಗಳಕ್ಕೆ ಹೋಗಿ ಬೃಹತ್ ಹೊಂಡಗಳಿಗು ತ್ಯಾಜ್ಯ ನೀರನ್ನು ಸುರಿದಿರುವುದು ಬೆಳಕಿಗೆ ಬಂದಿದೆ.

ಕೆರೆ ಅಂಚಿನ ಗ್ರಾಮಗಳ ಸಾರ್ವಜನಿಕರು ಹಾಗೂ ರೈತರು ಈಗಲೇ ಎಚ್ಚೆತ್ತುಕೊಂಡು ರಾತ್ರಿ ವೇಳೆ ತ್ಯಾಜ್ಯ ನೀರು ತುಂಬಿಕೊಂಡು ಬರುವ ಟ್ಯಾಂಕರ್ಗಳನ್ನು ತಡೆದು ಪೊಲೀಸರಿಗೆ ಒಪ್ಪಿಸುವ ಕೆಲಸ ತುರ್ತಾಗಿ ಮಾಡಬೇಕಿದೆ. ಇಲ್ಲವಾದರೆ ಈಗ ದೊಡ್ಡತುಮಕೂರು ಗ್ರಾಮದ ರೈತರು ಕುಡಿಯುವ ನೀರನ್ನು ಬೇರೆ ಊರಿನಿಂದ ತರಿಸಿಕೊಳ್ಳುತ್ತಿರುವ ಪರಿಸ್ಥಿಯೇ ಅರಳುಮಲ್ಲಿಗೆ ಕೆರೆ ಅಂಚಿನ ಗ್ರಾಮಗಳ ರೈತರಿಗೂ ಬರಲಿದೆ ಎಂದು ಚಿದಾನಂದ್ ಎಚ್ಚರಿಸಿದ್ದಾರೆ.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

4 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

7 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

10 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

11 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

13 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

13 hours ago