ಅರಳುಮಲ್ಲಿಗೆ ಕೆರೆಯ ಒಡಲು ಸೇರುತ್ತಿರುವ ಕಾರ್ಖಾನೆಗಳ ತ್ಯಾಜ್ಯ ನೀರು : ರಾತ್ರಿ ವೇಳೆ ಟ್ಯಾಂಕರ್ ಗಳ ಮೂಲಕ ಕೆರೆ ಅಂಗಳಕ್ಕೆ ಹರಿದು ಬಿಡುತ್ತಿರುವ ಆರೋಪ

ಬಾಶೆಟ್ಟಿಹಳ್ಳಿ ಕೈಗಾರಿಕೆಗಳ ವಕ್ರದೃಷ್ಠಿ ಈಗ ಅರಳುಮಲ್ಲಿಗೆ ಕೆರೆ ಅಂಗಳದ ಕಡೆಗೆ ಬಿದ್ದಿದ್ದು, ಕಾರ್ಖಾನೆಗಳ ತ್ಯಾಜ್ಯ ನೀರನ್ನು ಟ್ಯಾಂಕರ್ ಗಳ ಮೂಲಕ ರಾತ್ರಿ ವೇಳೆ ತುಂಬಿಕೊಂಡು ಬಂದು ರಸ್ತೆ ಅಂಚಿನ ರಾಜಕಾಲುವೆಗಳ ಮೂಲಕ ಕೆರೆ ಅಂಗಳಕ್ಕೆ ಹರಿದು ಬಿಡಲಾಗುತ್ತಿದೆ.

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಸುತ್ತಲಿನ ಚಿಕ್ಕತುಮಕೂರು, ವೀರಾಪುರ, ದೊಡ್ಡತುಮಕೂರು ಕೆರೆಗಳಿಗೆ ಕಾಖಾನೆಗಳ ತ್ಯಾಜ್ಯ ನೀರು ಹರಿದು ಕೆರೆಯಲ್ಲಿನ ನೀರಷ್ಟೇ ಅಲ್ಲದೆ ಅಂತರ್ಜಲವು ಸಂಪೂರ್ಣವಾಗಿ ಕಲುಷಿತಗೊಂಡಿದೆ. ಇಲ್ಲಿನ ಜನರು ಎಚ್ಚೆತ್ತುಕೊಂಡು ತ್ಯಾಜ್ಯ ನೀರನ್ನು ಕೆರೆಗೆ ಹರಿಸುವುದರ ವಿರುದ್ಧ ಹೋರಾಟವನ್ನು ತೀವ್ರಗೊಳಿಸಿದ ನಂತರ ಈಗ ಕಾರ್ಖಾನೆಗಳವರು ರಾತ್ರಿ ವೇಳೆ ಟ್ಯಾಂಕರ್ ಗಳ ಮೂಲಕ ಅರಳುಮಲ್ಲಿಗೆ ಕೆರೆಗೆ ತಂದು ಸುರಿಯುತ್ತಿದ್ದಾರೆ.

ಈ ಬಗ್ಗೆ ಯುವಸಂಚಲನ ಅಧ್ಯಕ್ಷ ಚಿದಾನಂದ್ ಅವರು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ನೀಡಿದ್ದರ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ವಿಜಯ ಅವರು ಬುಧವಾರ ಕೆರೆ ಅಂಚಿನ ರಾಜಕಾಲುಗಳಿಗೆ ಭೇಟಿ ನೀಡಿ ಅಲ್ಲಿ ಶೇಖರಣೆಯಾಗಿದ್ದ ತ್ಯಾಜ್ಯ ನೀರನ್ನು ಸಂಗ್ರಹ ಮಾಡಿಕೊಂಡು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

ಈಗ ನಿರ್ಮಾಣ ಹಂತದಲ್ಲಿ ಇರುವ ದಾಬಸ್ಪೇಟೆ-ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲೇ ಇರುವ ರಾಜಕಾಲುವೆಗಳಿಗೆ ರಾತ್ರಿ ವೇಳೆ ಟ್ಯಾಂಕರ್ಗಳ ಮೂಲಕ ತ್ಯಾಜ್ಯ ನೀರನ್ನು ಸುರಿದು ಹೋಗಲಾಗುತ್ತಿದೆ.

ಇದಷ್ಟೇ ಅಲ್ಲದೆ ಹೆದ್ದಾರಿ ನಿರ್ಮಾಣಕ್ಕಾಗಿ ಕೆರೆ ಅಂಗಳದಿಂದ ಮಣ್ಣು ಸಾಗಿಸಲು ತಾತ್ಕಾಲಿಕವಾಗಿ ನಿರ್ಮಿಸಿಕೊಂಡಿರುವ ರಸ್ತೆಗಳ ಮೂಲಕವು ಕೆರೆ ಅಂಗಳಕ್ಕೆ ಹೋಗಿ ಬೃಹತ್ ಹೊಂಡಗಳಿಗು ತ್ಯಾಜ್ಯ ನೀರನ್ನು ಸುರಿದಿರುವುದು ಬೆಳಕಿಗೆ ಬಂದಿದೆ.

ಕೆರೆ ಅಂಚಿನ ಗ್ರಾಮಗಳ ಸಾರ್ವಜನಿಕರು ಹಾಗೂ ರೈತರು ಈಗಲೇ ಎಚ್ಚೆತ್ತುಕೊಂಡು ರಾತ್ರಿ ವೇಳೆ ತ್ಯಾಜ್ಯ ನೀರು ತುಂಬಿಕೊಂಡು ಬರುವ ಟ್ಯಾಂಕರ್ಗಳನ್ನು ತಡೆದು ಪೊಲೀಸರಿಗೆ ಒಪ್ಪಿಸುವ ಕೆಲಸ ತುರ್ತಾಗಿ ಮಾಡಬೇಕಿದೆ. ಇಲ್ಲವಾದರೆ ಈಗ ದೊಡ್ಡತುಮಕೂರು ಗ್ರಾಮದ ರೈತರು ಕುಡಿಯುವ ನೀರನ್ನು ಬೇರೆ ಊರಿನಿಂದ ತರಿಸಿಕೊಳ್ಳುತ್ತಿರುವ ಪರಿಸ್ಥಿಯೇ ಅರಳುಮಲ್ಲಿಗೆ ಕೆರೆ ಅಂಚಿನ ಗ್ರಾಮಗಳ ರೈತರಿಗೂ ಬರಲಿದೆ ಎಂದು ಚಿದಾನಂದ್ ಎಚ್ಚರಿಸಿದ್ದಾರೆ.

Ramesh Babu

Journalist

Recent Posts

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

2 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

3 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

5 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

5 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

9 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

12 hours ago