ಬಾಶೆಟ್ಟಿಹಳ್ಳಿ ಕೈಗಾರಿಕೆಗಳ ವಕ್ರದೃಷ್ಠಿ ಈಗ ಅರಳುಮಲ್ಲಿಗೆ ಕೆರೆ ಅಂಗಳದ ಕಡೆಗೆ ಬಿದ್ದಿದ್ದು, ಕಾರ್ಖಾನೆಗಳ ತ್ಯಾಜ್ಯ ನೀರನ್ನು ಟ್ಯಾಂಕರ್ ಗಳ ಮೂಲಕ ರಾತ್ರಿ ವೇಳೆ ತುಂಬಿಕೊಂಡು ಬಂದು ರಸ್ತೆ ಅಂಚಿನ ರಾಜಕಾಲುವೆಗಳ ಮೂಲಕ ಕೆರೆ ಅಂಗಳಕ್ಕೆ ಹರಿದು ಬಿಡಲಾಗುತ್ತಿದೆ.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಸುತ್ತಲಿನ ಚಿಕ್ಕತುಮಕೂರು, ವೀರಾಪುರ, ದೊಡ್ಡತುಮಕೂರು ಕೆರೆಗಳಿಗೆ ಕಾಖಾನೆಗಳ ತ್ಯಾಜ್ಯ ನೀರು ಹರಿದು ಕೆರೆಯಲ್ಲಿನ ನೀರಷ್ಟೇ ಅಲ್ಲದೆ ಅಂತರ್ಜಲವು ಸಂಪೂರ್ಣವಾಗಿ ಕಲುಷಿತಗೊಂಡಿದೆ. ಇಲ್ಲಿನ ಜನರು ಎಚ್ಚೆತ್ತುಕೊಂಡು ತ್ಯಾಜ್ಯ ನೀರನ್ನು ಕೆರೆಗೆ ಹರಿಸುವುದರ ವಿರುದ್ಧ ಹೋರಾಟವನ್ನು ತೀವ್ರಗೊಳಿಸಿದ ನಂತರ ಈಗ ಕಾರ್ಖಾನೆಗಳವರು ರಾತ್ರಿ ವೇಳೆ ಟ್ಯಾಂಕರ್ ಗಳ ಮೂಲಕ ಅರಳುಮಲ್ಲಿಗೆ ಕೆರೆಗೆ ತಂದು ಸುರಿಯುತ್ತಿದ್ದಾರೆ.
ಈ ಬಗ್ಗೆ ಯುವಸಂಚಲನ ಅಧ್ಯಕ್ಷ ಚಿದಾನಂದ್ ಅವರು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ನೀಡಿದ್ದರ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ವಿಜಯ ಅವರು ಬುಧವಾರ ಕೆರೆ ಅಂಚಿನ ರಾಜಕಾಲುಗಳಿಗೆ ಭೇಟಿ ನೀಡಿ ಅಲ್ಲಿ ಶೇಖರಣೆಯಾಗಿದ್ದ ತ್ಯಾಜ್ಯ ನೀರನ್ನು ಸಂಗ್ರಹ ಮಾಡಿಕೊಂಡು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
ಈಗ ನಿರ್ಮಾಣ ಹಂತದಲ್ಲಿ ಇರುವ ದಾಬಸ್ಪೇಟೆ-ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲೇ ಇರುವ ರಾಜಕಾಲುವೆಗಳಿಗೆ ರಾತ್ರಿ ವೇಳೆ ಟ್ಯಾಂಕರ್ಗಳ ಮೂಲಕ ತ್ಯಾಜ್ಯ ನೀರನ್ನು ಸುರಿದು ಹೋಗಲಾಗುತ್ತಿದೆ.
ಇದಷ್ಟೇ ಅಲ್ಲದೆ ಹೆದ್ದಾರಿ ನಿರ್ಮಾಣಕ್ಕಾಗಿ ಕೆರೆ ಅಂಗಳದಿಂದ ಮಣ್ಣು ಸಾಗಿಸಲು ತಾತ್ಕಾಲಿಕವಾಗಿ ನಿರ್ಮಿಸಿಕೊಂಡಿರುವ ರಸ್ತೆಗಳ ಮೂಲಕವು ಕೆರೆ ಅಂಗಳಕ್ಕೆ ಹೋಗಿ ಬೃಹತ್ ಹೊಂಡಗಳಿಗು ತ್ಯಾಜ್ಯ ನೀರನ್ನು ಸುರಿದಿರುವುದು ಬೆಳಕಿಗೆ ಬಂದಿದೆ.
ಕೆರೆ ಅಂಚಿನ ಗ್ರಾಮಗಳ ಸಾರ್ವಜನಿಕರು ಹಾಗೂ ರೈತರು ಈಗಲೇ ಎಚ್ಚೆತ್ತುಕೊಂಡು ರಾತ್ರಿ ವೇಳೆ ತ್ಯಾಜ್ಯ ನೀರು ತುಂಬಿಕೊಂಡು ಬರುವ ಟ್ಯಾಂಕರ್ಗಳನ್ನು ತಡೆದು ಪೊಲೀಸರಿಗೆ ಒಪ್ಪಿಸುವ ಕೆಲಸ ತುರ್ತಾಗಿ ಮಾಡಬೇಕಿದೆ. ಇಲ್ಲವಾದರೆ ಈಗ ದೊಡ್ಡತುಮಕೂರು ಗ್ರಾಮದ ರೈತರು ಕುಡಿಯುವ ನೀರನ್ನು ಬೇರೆ ಊರಿನಿಂದ ತರಿಸಿಕೊಳ್ಳುತ್ತಿರುವ ಪರಿಸ್ಥಿಯೇ ಅರಳುಮಲ್ಲಿಗೆ ಕೆರೆ ಅಂಚಿನ ಗ್ರಾಮಗಳ ರೈತರಿಗೂ ಬರಲಿದೆ ಎಂದು ಚಿದಾನಂದ್ ಎಚ್ಚರಿಸಿದ್ದಾರೆ.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…