ಬಾಶೆಟ್ಟಿಹಳ್ಳಿ ಕೈಗಾರಿಕೆಗಳ ವಕ್ರದೃಷ್ಠಿ ಈಗ ಅರಳುಮಲ್ಲಿಗೆ ಕೆರೆ ಅಂಗಳದ ಕಡೆಗೆ ಬಿದ್ದಿದ್ದು, ಕಾರ್ಖಾನೆಗಳ ತ್ಯಾಜ್ಯ ನೀರನ್ನು ಟ್ಯಾಂಕರ್ ಗಳ ಮೂಲಕ ರಾತ್ರಿ ವೇಳೆ ತುಂಬಿಕೊಂಡು ಬಂದು ರಸ್ತೆ ಅಂಚಿನ ರಾಜಕಾಲುವೆಗಳ ಮೂಲಕ ಕೆರೆ ಅಂಗಳಕ್ಕೆ ಹರಿದು ಬಿಡಲಾಗುತ್ತಿದೆ.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಸುತ್ತಲಿನ ಚಿಕ್ಕತುಮಕೂರು, ವೀರಾಪುರ, ದೊಡ್ಡತುಮಕೂರು ಕೆರೆಗಳಿಗೆ ಕಾಖಾನೆಗಳ ತ್ಯಾಜ್ಯ ನೀರು ಹರಿದು ಕೆರೆಯಲ್ಲಿನ ನೀರಷ್ಟೇ ಅಲ್ಲದೆ ಅಂತರ್ಜಲವು ಸಂಪೂರ್ಣವಾಗಿ ಕಲುಷಿತಗೊಂಡಿದೆ. ಇಲ್ಲಿನ ಜನರು ಎಚ್ಚೆತ್ತುಕೊಂಡು ತ್ಯಾಜ್ಯ ನೀರನ್ನು ಕೆರೆಗೆ ಹರಿಸುವುದರ ವಿರುದ್ಧ ಹೋರಾಟವನ್ನು ತೀವ್ರಗೊಳಿಸಿದ ನಂತರ ಈಗ ಕಾರ್ಖಾನೆಗಳವರು ರಾತ್ರಿ ವೇಳೆ ಟ್ಯಾಂಕರ್ ಗಳ ಮೂಲಕ ಅರಳುಮಲ್ಲಿಗೆ ಕೆರೆಗೆ ತಂದು ಸುರಿಯುತ್ತಿದ್ದಾರೆ.
ಈ ಬಗ್ಗೆ ಯುವಸಂಚಲನ ಅಧ್ಯಕ್ಷ ಚಿದಾನಂದ್ ಅವರು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ನೀಡಿದ್ದರ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ವಿಜಯ ಅವರು ಬುಧವಾರ ಕೆರೆ ಅಂಚಿನ ರಾಜಕಾಲುಗಳಿಗೆ ಭೇಟಿ ನೀಡಿ ಅಲ್ಲಿ ಶೇಖರಣೆಯಾಗಿದ್ದ ತ್ಯಾಜ್ಯ ನೀರನ್ನು ಸಂಗ್ರಹ ಮಾಡಿಕೊಂಡು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
ಈಗ ನಿರ್ಮಾಣ ಹಂತದಲ್ಲಿ ಇರುವ ದಾಬಸ್ಪೇಟೆ-ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲೇ ಇರುವ ರಾಜಕಾಲುವೆಗಳಿಗೆ ರಾತ್ರಿ ವೇಳೆ ಟ್ಯಾಂಕರ್ಗಳ ಮೂಲಕ ತ್ಯಾಜ್ಯ ನೀರನ್ನು ಸುರಿದು ಹೋಗಲಾಗುತ್ತಿದೆ.
ಇದಷ್ಟೇ ಅಲ್ಲದೆ ಹೆದ್ದಾರಿ ನಿರ್ಮಾಣಕ್ಕಾಗಿ ಕೆರೆ ಅಂಗಳದಿಂದ ಮಣ್ಣು ಸಾಗಿಸಲು ತಾತ್ಕಾಲಿಕವಾಗಿ ನಿರ್ಮಿಸಿಕೊಂಡಿರುವ ರಸ್ತೆಗಳ ಮೂಲಕವು ಕೆರೆ ಅಂಗಳಕ್ಕೆ ಹೋಗಿ ಬೃಹತ್ ಹೊಂಡಗಳಿಗು ತ್ಯಾಜ್ಯ ನೀರನ್ನು ಸುರಿದಿರುವುದು ಬೆಳಕಿಗೆ ಬಂದಿದೆ.
ಕೆರೆ ಅಂಚಿನ ಗ್ರಾಮಗಳ ಸಾರ್ವಜನಿಕರು ಹಾಗೂ ರೈತರು ಈಗಲೇ ಎಚ್ಚೆತ್ತುಕೊಂಡು ರಾತ್ರಿ ವೇಳೆ ತ್ಯಾಜ್ಯ ನೀರು ತುಂಬಿಕೊಂಡು ಬರುವ ಟ್ಯಾಂಕರ್ಗಳನ್ನು ತಡೆದು ಪೊಲೀಸರಿಗೆ ಒಪ್ಪಿಸುವ ಕೆಲಸ ತುರ್ತಾಗಿ ಮಾಡಬೇಕಿದೆ. ಇಲ್ಲವಾದರೆ ಈಗ ದೊಡ್ಡತುಮಕೂರು ಗ್ರಾಮದ ರೈತರು ಕುಡಿಯುವ ನೀರನ್ನು ಬೇರೆ ಊರಿನಿಂದ ತರಿಸಿಕೊಳ್ಳುತ್ತಿರುವ ಪರಿಸ್ಥಿಯೇ ಅರಳುಮಲ್ಲಿಗೆ ಕೆರೆ ಅಂಚಿನ ಗ್ರಾಮಗಳ ರೈತರಿಗೂ ಬರಲಿದೆ ಎಂದು ಚಿದಾನಂದ್ ಎಚ್ಚರಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…
ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…
ದೃಷ್ಟಿಕೋನ........ ಗೆಲ್ಲುತ್ತಲೇ ಇರುವ ರಾಜಕಾರಣಿಗಳು, ಸೋಲುತ್ತಲೇ ಇರುವ ಮತದಾರರು, ಕನಸು ಕಾಣುತ್ತಲೇ ಇರುವ ಬಡ, ಮಧ್ಯಮ ವರ್ಗದವರು, ಅಧಿಕ ಪ್ರಸಂಗಿಗಳಂತೆ…
ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗವನ್ನು ತುಳಿದು ದೌರ್ಜನ್ಯ ನಡೆಸಿ ಮಹಿಳೆಯ ಸಾವಿಗೆ ಕಾರಣನಾದ ಕಾಮುಕನನ್ನು ಪೊಲೀಸರು ಬಂಧಿಸಿರುವ…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್ಗಳಲ್ಲಿ ವಿದ್ಯುತ್…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…