oplus_0
ತಾಲೂಕಿನ ಅರಳುಮಲ್ಲಿಗೆ ಪಂಚಾಯಿತಿಯಲ್ಲಿ ಅಧ್ಯಕ್ಷರ ಚುನಾವಣೆ ನಡೆದಿದ್ದು ನೂತನ ಅಧ್ಯಕ್ಷರಾಗಿ ಮಂಗಳ ಗೌರಮ್ಮ ಕೃಷ್ಣಮೂರ್ತಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
18 ಸದಸ್ಯರ ಬಲ ಹೊಂದಿರುವ ಅರಳು ಮಲ್ಲಿಗೆ ಪಂಚಾಯಿತಿಯಲ್ಲಿ ಜೂನ್ 12ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, 11 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಂಗಳ ಗೌರಮ್ಮ ಕೃಷ್ಣಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅರಳುಮಲ್ಲಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿದ್ದ ನಿರ್ಮಲಾ ಸಿದ್ದೇಗೌಡರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಬೆಂಬಲಿತ ಮಂಗಳಗೌರಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದರು.
ಬೇರೆ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ಮಂಗಳ ಗೌರಮ್ಮನವರು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರಿಗೆ ಪುಷ್ಪಮಾಲೆ ನೀಡಿ ಸಿಹಿ ತಿನಿಸುವ ಮೂಲಕ ಸದಸ್ಯರು, ಕಾಂಗ್ರೆಸ್ ಮುಖಂಡರು ಶುಭ ಕೋರಿದರು. ಪಟಾಕಿ ಸಿಡಿಸುವ ಮೂಲಕ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು.
ನೂತನ ಅಧ್ಯಕ್ಷರಾದ ಮಂಗಳ ಗೌರಮ್ಮ ಮಾತನಾಡಿ, ಸರ್ವ ಸದಸ್ಯರು ಒಮ್ಮತದಿಂದ ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ , ನಾನು ಬಡ ಕುಟುಂಬದ ಹೆಣ್ಣು ಮಗಳು ನನಗೆ ಈ ಅವಕಾಶ ಸಿಕ್ಕಿರುವುದು ಭಾಗ್ಯವೆಂದೆ ಭಾವಿಸುತ್ತೇನೆ. ಗ್ರಾಮ ಪಂಚಾಯಿತಿ ಸದಸ್ಯರಾಗಿ ಸತತ ನಾಲ್ಕು ಬಾರಿ ಜಯಗಳಿಸಿದ್ದು ಇದೇ ಮೊದಲ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೇನೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕೆಂಬ ಹಂಬಲವಿದೆ, ಸರ್ವ ಸದಸ್ಯರ ಸಲಹೆ ಸೂಚನೆಗಳನ್ನು ಪಡೆದು ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಪಂಚಾಯ್ತಿ ಉಪಾಧ್ಯಕ್ಷ ಡಿ.ಆರ್. ಧ್ರುವಕುಮಾರ್, ಮಾಜಿ ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಕೆಂಪಣ್ಣ, ನಗರಸಭಾ ಸದಸ್ಯರಾದ ಚಂದ್ರ ಮೋಹನ್, ರಘು, ಮಂಜುನಾಥ್, ಭೀಮಣ್ಣ ಮುಂತಾದವರು ಹಾಜರಿದ್ದರು.
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…
" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…