ಅರಳುಮಲ್ಲಿಗೆ ವ್ಯವಸಾಯ ಸಹಕಾರ ಸಂಘಕ್ಕೆ ನೂತನ ನಿರ್ದೇಶಕರ ಆಯ್ಕೆ

ದೊಡ್ಡಬಳ್ಳಾಪುರ: ಅರಳುಮಲ್ಲಿಗೆ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಯ 12ಸ್ಥಾನಗಳ ಪೈಕಿ ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದ್ದು, ಉಳಿದ ಹನ್ನೊಂದು ಸ್ಥಾನಗಳಿಗೆ ಕೆಲವು ದಿನಗಳ ಹಿಂದೆ ಚುನಾವಣೆ ನಡೆದು ತಾಂತ್ರಿಕ ಕಾರಣಗಳಿಂದ ಮಾ.4ರಂದು ಮತ ಎಣಿಕೆ ನಡೆದಿದ್ದು ಅದರಲ್ಲಿ ಸಾಮಾನ್ಯ ವರ್ಗದಿಂದ ಚಿಕ್ಕೇಗೌಡ ಸಿ, ಮಹೇಶ್ ಕೆ. ಏನ್., ಲಕ್ಷ್ಮೀನಾರಾಯಣ ಜಿ. ಪಿ., ಜಲೆಂದ್ರ, ರಾಜಣ್ಣ ಎ.ಹಿಂದುಳಿದ ಎ ವರ್ಗದಿಂದ ಲಕ್ಷ್ಮೀನಾರಾಯಣ, ಹಿಂದುಳಿದ ಬಿ. ವರ್ಗದಿಂದ ಅರುಣ್ ಕುಮಾರ್ ಎ. ಪಿ.ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಅಶ್ವಥ್ ನಾರಾಯಣ್,ಮಹಿಳಾ ಮೀಸಲು ಸ್ಥಾನದಿಂದ ಮಂಜಮ್ಮ, ಉಮಾದೇವಿ, ಪರಿಶಿಷ್ಟ ಪಂಗಡದ ಸ್ಥಾನಕ್ಕೆ ಕೊಂಡ ತಿಮ್ಮಯ್ಯ.. ಅವಿರೋಧ ಆಯ್ಕೆ. ಸಾಲಗಾರರಲ್ಲದ ಕ್ಷೇತ್ರದಿಂದ ವೆಂಕಟೇಶ್ ಎಂ. ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಶಿವಕುಮಾರ್ ವಿ. ವಿದ್ಯಕ್ತವಾಗಿ ಘೋಷಿಸಿದ್ದಾರೆ.

ತೀರಾ ಗಮನ ಸೆಳೆದಿದ್ದ ಈ ಚುನಾವಣೆಯಲ್ಲಿ ದಳ ಬಿಜೆಪಿ ಮೈತ್ರಿಕೂಟ ಬೆಂಬಲಿತ ಎಂಟು ಸ್ಥಾನ, ಕಾಂಗ್ರೆಸ್ ಬೆಂಬಲಿತ ಮೂರು ಅಭ್ಯರ್ಥಿಗಳು ಹಾಗೂ ಪಕ್ಷೇತರ ಮಹಿಳಾ ಅಭ್ಯರ್ಥಿ ಆಯ್ಕೆಯಾಗಿದ್ದು, ಮೈತ್ರಿಕೂಟ ಸಹಕಾರ ಸಂಘದ ಅಧಿಕಾರ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಈ ಸಂದರ್ಭದಲ್ಲಿ ಮೈತ್ರಿ ಕೂಟದ ಮುಖಂಡರಾದ ಎಸ್. ಎಂ. ಗೊಲ್ಲಳ್ಳಿ ಮಲ್ಲೇಶ್, ಆಲಹಳ್ಳಿ ಚಂದ್ರಶೇಖರ್, ಕುಂಟನಹಳ್ಳಿ ಶಿವಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿ, ಕಳೆದ ಅವಧಿಯ ಆಡಳಿತ ಮಂಡಳಿಯ ದುರಾಡಳಿತಕ್ಕೆ ಬೇಸತ್ತು ಮತದಾರರು ನಮ್ಮ ಮೈತ್ರಿ ಕೂಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಮುಂದಿನ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಶಾಸಕ ಧೀರಜ್ ಮುನಿರಾಜು ಹಾಗೂ ದಳದ ಮುಖಂಡರಾದ ಮುನೇಗೌಡರ ನೇತೃತ್ವದಲ್ಲಿ ಚುನಾವನೆಗಳನ್ನು ಎದುರಿಸುತ್ತೇವೆ. ಇಂದಿನ ಚುನಾವಣಾ ತೀರ್ಪು ಮುಂದಿನ ಚುನಾವಣೆಗಳು ಮೈತ್ರಿ ಪಕ್ಷಕ್ಕೆ ಶುಭ ಸೂಚನೆ ಸಿಕ್ಕಂತಾಗಿದೆ. ನಮ್ಮ ಮೈತ್ರಿ ಕೂಟಕ್ಕೆ ಮತ ನೀಡಿದ ಎಲ್ಲಾ ಮತದಾರ ಬಂದುಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಹೇಳಿದರು.

ಆಲಹಳ್ಳಿ ಗೋಪಾಲ ಕೃಷ್ಣ ಬೆಂಬಲಿತ ಪಕ್ಷೇತರ ಮಹಿಳಾ ವಿಜೇತ ಅಭ್ಯರ್ಥಿ ಉಮಾದೇವಿ ಮಾತನಾಡಿ, ನನ್ನನ್ನು ಸಹಕಾರ ಸಂಘದ ವ್ಯಾಪ್ತಿಯ ಎಲ್ಲಾ ಗ್ರಾಮಗಳ ರೈತರು ಪಕ್ಷಾತೀತವಾಗಿ ಗೆಲ್ಲಿಸಿದ್ದಾರೆ. ಮುಂಬರುವ ದಿನಗಳಲ್ಲಿ ಸಹಕಾರ ಸಂಘದಿಂದ ಎಲ್ಲಾ ರೈತಬಂದುಗಳಿಗೂ ಸಾಲ ಕೊಡಿಸುವುದು ಸೇರಿದಂತೆ ಸದಸ್ಯರ ಸಮಸ್ಯೆಗಳಿಗೆ ನನ್ನ ಕೈಲಾದ ಸಹಕಾರ ನೀಡಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನನ್ನು ಚುನಾವಣೆಯಲ್ಲಿ ಬೆಂಬಲಿಸಿದ ಆಲಹಳ್ಳಿ ಗೋಪಾಲಕೃಷ್ಣ ಹಾಗೂ ನನ್ನ ಮೇಲೆ ವಿಶ್ವಾಸವಿಟ್ಟು ಮತ ನೀಡಿ ಗೆಲ್ಲಿಸಿದ ಎಲ್ಲಾ ಮತದಾರ ಬಂದುಗಳಿಗೆ ನಾನು ಅಭಾರಿಯಾಗಿದ್ದೇನೆ ಎಂದು ಹೇಳಿದರು.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

4 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

5 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

6 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

8 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

15 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

15 hours ago