ದೊಡ್ಡಬಳ್ಳಾಪುರ: ಅರಳುಮಲ್ಲಿಗೆ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಯ 12ಸ್ಥಾನಗಳ ಪೈಕಿ ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದ್ದು, ಉಳಿದ ಹನ್ನೊಂದು ಸ್ಥಾನಗಳಿಗೆ ಕೆಲವು ದಿನಗಳ ಹಿಂದೆ ಚುನಾವಣೆ ನಡೆದು ತಾಂತ್ರಿಕ ಕಾರಣಗಳಿಂದ ಮಾ.4ರಂದು ಮತ ಎಣಿಕೆ ನಡೆದಿದ್ದು ಅದರಲ್ಲಿ ಸಾಮಾನ್ಯ ವರ್ಗದಿಂದ ಚಿಕ್ಕೇಗೌಡ ಸಿ, ಮಹೇಶ್ ಕೆ. ಏನ್., ಲಕ್ಷ್ಮೀನಾರಾಯಣ ಜಿ. ಪಿ., ಜಲೆಂದ್ರ, ರಾಜಣ್ಣ ಎ.ಹಿಂದುಳಿದ ಎ ವರ್ಗದಿಂದ ಲಕ್ಷ್ಮೀನಾರಾಯಣ, ಹಿಂದುಳಿದ ಬಿ. ವರ್ಗದಿಂದ ಅರುಣ್ ಕುಮಾರ್ ಎ. ಪಿ.ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಅಶ್ವಥ್ ನಾರಾಯಣ್,ಮಹಿಳಾ ಮೀಸಲು ಸ್ಥಾನದಿಂದ ಮಂಜಮ್ಮ, ಉಮಾದೇವಿ, ಪರಿಶಿಷ್ಟ ಪಂಗಡದ ಸ್ಥಾನಕ್ಕೆ ಕೊಂಡ ತಿಮ್ಮಯ್ಯ.. ಅವಿರೋಧ ಆಯ್ಕೆ. ಸಾಲಗಾರರಲ್ಲದ ಕ್ಷೇತ್ರದಿಂದ ವೆಂಕಟೇಶ್ ಎಂ. ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಶಿವಕುಮಾರ್ ವಿ. ವಿದ್ಯಕ್ತವಾಗಿ ಘೋಷಿಸಿದ್ದಾರೆ.
ತೀರಾ ಗಮನ ಸೆಳೆದಿದ್ದ ಈ ಚುನಾವಣೆಯಲ್ಲಿ ದಳ ಬಿಜೆಪಿ ಮೈತ್ರಿಕೂಟ ಬೆಂಬಲಿತ ಎಂಟು ಸ್ಥಾನ, ಕಾಂಗ್ರೆಸ್ ಬೆಂಬಲಿತ ಮೂರು ಅಭ್ಯರ್ಥಿಗಳು ಹಾಗೂ ಪಕ್ಷೇತರ ಮಹಿಳಾ ಅಭ್ಯರ್ಥಿ ಆಯ್ಕೆಯಾಗಿದ್ದು, ಮೈತ್ರಿಕೂಟ ಸಹಕಾರ ಸಂಘದ ಅಧಿಕಾರ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಈ ಸಂದರ್ಭದಲ್ಲಿ ಮೈತ್ರಿ ಕೂಟದ ಮುಖಂಡರಾದ ಎಸ್. ಎಂ. ಗೊಲ್ಲಳ್ಳಿ ಮಲ್ಲೇಶ್, ಆಲಹಳ್ಳಿ ಚಂದ್ರಶೇಖರ್, ಕುಂಟನಹಳ್ಳಿ ಶಿವಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿ, ಕಳೆದ ಅವಧಿಯ ಆಡಳಿತ ಮಂಡಳಿಯ ದುರಾಡಳಿತಕ್ಕೆ ಬೇಸತ್ತು ಮತದಾರರು ನಮ್ಮ ಮೈತ್ರಿ ಕೂಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಮುಂದಿನ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಶಾಸಕ ಧೀರಜ್ ಮುನಿರಾಜು ಹಾಗೂ ದಳದ ಮುಖಂಡರಾದ ಮುನೇಗೌಡರ ನೇತೃತ್ವದಲ್ಲಿ ಚುನಾವನೆಗಳನ್ನು ಎದುರಿಸುತ್ತೇವೆ. ಇಂದಿನ ಚುನಾವಣಾ ತೀರ್ಪು ಮುಂದಿನ ಚುನಾವಣೆಗಳು ಮೈತ್ರಿ ಪಕ್ಷಕ್ಕೆ ಶುಭ ಸೂಚನೆ ಸಿಕ್ಕಂತಾಗಿದೆ. ನಮ್ಮ ಮೈತ್ರಿ ಕೂಟಕ್ಕೆ ಮತ ನೀಡಿದ ಎಲ್ಲಾ ಮತದಾರ ಬಂದುಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಹೇಳಿದರು.
ಆಲಹಳ್ಳಿ ಗೋಪಾಲ ಕೃಷ್ಣ ಬೆಂಬಲಿತ ಪಕ್ಷೇತರ ಮಹಿಳಾ ವಿಜೇತ ಅಭ್ಯರ್ಥಿ ಉಮಾದೇವಿ ಮಾತನಾಡಿ, ನನ್ನನ್ನು ಸಹಕಾರ ಸಂಘದ ವ್ಯಾಪ್ತಿಯ ಎಲ್ಲಾ ಗ್ರಾಮಗಳ ರೈತರು ಪಕ್ಷಾತೀತವಾಗಿ ಗೆಲ್ಲಿಸಿದ್ದಾರೆ. ಮುಂಬರುವ ದಿನಗಳಲ್ಲಿ ಸಹಕಾರ ಸಂಘದಿಂದ ಎಲ್ಲಾ ರೈತಬಂದುಗಳಿಗೂ ಸಾಲ ಕೊಡಿಸುವುದು ಸೇರಿದಂತೆ ಸದಸ್ಯರ ಸಮಸ್ಯೆಗಳಿಗೆ ನನ್ನ ಕೈಲಾದ ಸಹಕಾರ ನೀಡಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನನ್ನು ಚುನಾವಣೆಯಲ್ಲಿ ಬೆಂಬಲಿಸಿದ ಆಲಹಳ್ಳಿ ಗೋಪಾಲಕೃಷ್ಣ ಹಾಗೂ ನನ್ನ ಮೇಲೆ ವಿಶ್ವಾಸವಿಟ್ಟು ಮತ ನೀಡಿ ಗೆಲ್ಲಿಸಿದ ಎಲ್ಲಾ ಮತದಾರ ಬಂದುಗಳಿಗೆ ನಾನು ಅಭಾರಿಯಾಗಿದ್ದೇನೆ ಎಂದು ಹೇಳಿದರು.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…