ಅರಳುಮಲ್ಲಿಗೆ ಸರ ಕಳವು ಪ್ರಕರಣ: ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು: ವೃದ್ಧೆ ಕೈ ಸೇರಿದ ಕಳುವಾಗಿದ್ದ ಚಿನ್ನದ ಮಾಂಗಲ್ಯ ಸರ: ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅಜ್ಜಿ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅರಳುಮಲ್ಲಿಗೆ ಗ್ರಾಮದಲ್ಲಿ ಅಜ್ಜಿಯ ಚಿನ್ನದ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಆರೋಪಿಗಳನ್ನು ಪತ್ತೆ ಮಾಡಿ, ಸೂಕ್ತ ತನಿಖೆ‌ ನಡೆಸಿ, ಕಳ್ಳರಿಂದ ಚಿನ್ನದ ಸರವನ್ನು ವಶಕ್ಕೆ ಪಡೆದು ಕಳುವಾಗಿದ್ದ ಚಿನ್ನದ ಸರವನ್ನು ಅಜ್ಜಿಗೆ ವಾಪಸ್ ನೀಡಲಾಯಿತು.

ಫೆ. 21‌ರಂದು ವೃದ್ಧೆ ಕೊರಳಲ್ಲಿದ್ದ ಚಿನ್ನದ ಸರವನ್ನು ಕಳ್ಳರು ಕದ್ದು ಪರಾರಿಯಾಗಿದ್ದ ಘಟನೆ ತಾಲೂಕಿನ ಅರಳುಮಲ್ಲಿಗೆ ಬಳಿ ನಡೆದಿತ್ತು.

ಯಶೋಧಮ್ಮ (75), ಚಿನ್ನದ ಮಾಂಗಲ್ಯ ಸರ ಕಳೆದುಕೊಂಡ ವೃದ್ಧೆ.

ಪೆಟ್ಟಿ ಅಂಗಡಿಯಲ್ಲಿ ವೃದ್ಧೆ ತನ್ನ ಪಾಡಿಗೆ ತಾನು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಳು. ಅಜ್ಜಿಯ ಕೊರಳಲ್ಲಿ ಸುಮಾರು 100 ಗ್ರಾಂ ಮಾಂಗಲ್ಯ ಸರ ಇತ್ತು ಎನ್ನಲಾಗಿತ್ತು. ಇದನ್ನು ಗಮನಿಸಿದ ಇಬ್ಬರು ಖದೀಮರು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬೈಕ್ ನಲ್ಲಿ ಅಂಗಡಿ ಬಳಿ ಬರುತ್ತಾರೆ. ಅಂಗಡಿ ಬಳಿ ಬಂದು 10 ರೂಪಾಯಿ ಕೊಟ್ಟು 5 ರೂಪಾಯಿಯ ಚಾಕಲೇಟ್ ಖರೀದಿ ಮಾಡುತ್ತಾರೆ. ಉಳಿದ 5 ರೂಪಾಯಿ ಚಿಲ್ಲರೆ ವಾಪಸ್ ಕೊಡಲು ಅಜ್ಜಿ ಮುಂದಾದಗ ಕಳ್ಳರು ನೇರವಾಗಿ ಅಜ್ಜಿಯ ಕೊರಳಿಗೆ ಕೈ ಹಾಕಿ ಚೈನ್ ಕದಿಯಲು ಮುಂದಾಗುತ್ತಾರೆ. ಅಜ್ಜಿ ಕೂಡಲೇ ಎಚ್ಚೆತ್ತುಕೊಂಡು ತನ್ನ ಚೈನನ್ನು ಬಿಗಿಯಾಗಿ ಹಿಡಿದುಕೊಳ್ಳುತ್ತಾರೆ.

ಯಶೋಧಮ್ಮ ಕೊರಳಿನಿಂದ ಸರವನ್ನ ಕಿತ್ತಿಕೊಳ್ಳುವಾಗ ಸರ ತುಂಡಾಗಿ, ಅರ್ಧ ಸರ ಮಾತ್ರ ಕಳ್ಳರಿಗೆ ಕೈಗೆ ಸಿಕ್ಕಿತ್ತು. ಆಗ 100 ಗ್ರಾಂ ಚಿನ್ನದ ಸರದಲ್ಲಿ 50ಗ್ರಾಂ ಚಿನ್ನದ ಸರ ಮಾತ್ರ ಕಳ್ಳರಿಗೆ ಸಿಕ್ಕಿದೆ ಎನ್ನಲಾಗಿತ್ತು.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳರ ಜಾಡು‌ಹಿಡಿದು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಸದ್ಯ ಇಬ್ಬರು ಖದೀಮರನ್ನು  ಬಂಧಿಸಿ ಕದ್ದ ಚಿನ್ನದ ಸರವನ್ನು ವಶಕ್ಕೆ ಪಡೆದು ಇಂದು ಕಳುವಾಗಿದ್ದ ಚಿನ್ನದ ಸರವನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಅವರು ಅಜ್ಜಿಗೆ ವಾಪಸ್ ನೀಡಿದರು.

ಈ ವೇಳೆ ಕಳುವಾಗಿದ್ದ ಚಿನ್ನದ ಮಾಂಗಲ್ಯ ಸರ ಕೈ ಸೇರಿದ‌ ಮೇಲೆ ವೃದ್ಧೆ ಯಶೋಧಮ್ಮ ಭಾವುಕರಾದರು. ಪೊಲೀಸರ ಕಾರ್ಯವೈಖರಿಗೆ ಪ್ರಶಂಸೆಯನ್ನು ಕೂಡ ವ್ಯಕ್ತಪಡಿಸಿದರು.

ಕಳ್ಳರನ್ನು ಪತ್ತೆ ಮಾಡುವಲ್ಲಿ ಶ್ರಮಿಸಿದ ಪೊಲೀಸ್ ಸಿಬ್ಬಂದಿ ಸುನಿಲ್ ಬಾಸ್ಕಿ, ಸಚಿನ್, ಹರೀಶ್ ಮತ್ತು ಪ್ರವೀಣ್ ರವರನ್ನ ಇನ್ಸ್ ಪೆಕ್ಟರ್ ಸಾಧಿಕ್ ಪಾಷ ಅಭಿನಂಧಿಸಿದ್ದಾರೆ.

ಆರೋಪಿಗಳ ಮಾಹಿತಿ

ಕನಕಪುರ ಮೂಲದ ಶಿವರಾಜ್ ಮತ್ತು ಸುಂದರೇಶ್ ಎಂಬ ಇಬ್ಬರು ಕಳ್ಳರನ್ನು ಬಂಧಿಸಲಾಗಿದೆ.

ಈ ಹಿಂದೆ ಮಂಡ್ಯ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೇಲ್ ನಲ್ಲಿ ಹೊರ ಬಂದಿರುತ್ತಾರೆ. ಕಳ್ಳತನಕ್ಕಾಗಿಯೇ ಹೊಸ ಬೈಕ್ ಖರೀದಿಯನ್ನು ಮಾಡಿರುತ್ತಾರೆ. ಬಣ್ಣದ ಮೂರು‌ ಮೂರು ಟೀ ಶರ್ಟ್ ಗಳನ್ನು ಧರಿಸಿದ್ದರು. ಅರಳುಮಲ್ಲಿಗೆಯಲ್ಲಿ‌ ಕಳ್ಳತನ ಮಾಡಿ ಕನಕಪುರ ತಾಲೂಕಿನ ಮಠವೊಂದರಲ್ಲಿ ವಾಸ ಮಾಡುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.

Ramesh Babu

Journalist

Recent Posts

ನಾಳೆ ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜನೆ

ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ವತಿಯಿಂದ ಸಂವಿಧಾನ…

3 hours ago

ವ್ಯಕ್ತಿಯೋರ್ವ ನೇಣಿಗೆ ಶರಣು

  ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸಾದುಮಠದಲ್ಲಿ ನಡೆದಿದೆ.. ಊರ ಹೊರವಲಯದಲ್ಲಿರುವ ಹಲಸಿನ ಮರಕ್ಕೆ…

3 hours ago

ತಿಂಗಳಾಂತ್ಯಕ್ಕೆ ಮೊದಲ ಬಗರ್ ಹುಕುಂ ಸಮಿತಿ ಸಭೆ – ಶಾಸಕ ಧೀರಜ್ ಮುನಿರಾಜು

ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100…

4 hours ago

ಭೂ ಮಾಪನ ಕಾರ್ಯ ಸ್ಥಗಿತ, ರೈತರ ಆಕ್ರೋಶ: ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…

5 hours ago

ಮಹಿಳೆಯರ ಸಬಲೀಕರಣಕ್ಕೆ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆ ಜಾರಿ- ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್

ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…

5 hours ago

ಆಶಾ ಭೋಸ್ಲೆ…..ಸುಮಾರು 12000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದವರು- ಅವರಿಗೆ ‌ಭಾವಪೂರ್ಣ ಶ್ರದ್ಧಾಂಜಲಿ……

ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…

16 hours ago