ಅರಳುಮಲ್ಲಿಗೆ ಸರ ಕಳವು ಪ್ರಕರಣ: ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು: ವೃದ್ಧೆ ಕೈ ಸೇರಿದ ಕಳುವಾಗಿದ್ದ ಚಿನ್ನದ ಮಾಂಗಲ್ಯ ಸರ: ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅಜ್ಜಿ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅರಳುಮಲ್ಲಿಗೆ ಗ್ರಾಮದಲ್ಲಿ ಅಜ್ಜಿಯ ಚಿನ್ನದ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಆರೋಪಿಗಳನ್ನು ಪತ್ತೆ ಮಾಡಿ, ಸೂಕ್ತ ತನಿಖೆ‌ ನಡೆಸಿ, ಕಳ್ಳರಿಂದ ಚಿನ್ನದ ಸರವನ್ನು ವಶಕ್ಕೆ ಪಡೆದು ಕಳುವಾಗಿದ್ದ ಚಿನ್ನದ ಸರವನ್ನು ಅಜ್ಜಿಗೆ ವಾಪಸ್ ನೀಡಲಾಯಿತು.

ಫೆ. 21‌ರಂದು ವೃದ್ಧೆ ಕೊರಳಲ್ಲಿದ್ದ ಚಿನ್ನದ ಸರವನ್ನು ಕಳ್ಳರು ಕದ್ದು ಪರಾರಿಯಾಗಿದ್ದ ಘಟನೆ ತಾಲೂಕಿನ ಅರಳುಮಲ್ಲಿಗೆ ಬಳಿ ನಡೆದಿತ್ತು.

ಯಶೋಧಮ್ಮ (75), ಚಿನ್ನದ ಮಾಂಗಲ್ಯ ಸರ ಕಳೆದುಕೊಂಡ ವೃದ್ಧೆ.

ಪೆಟ್ಟಿ ಅಂಗಡಿಯಲ್ಲಿ ವೃದ್ಧೆ ತನ್ನ ಪಾಡಿಗೆ ತಾನು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಳು. ಅಜ್ಜಿಯ ಕೊರಳಲ್ಲಿ ಸುಮಾರು 100 ಗ್ರಾಂ ಮಾಂಗಲ್ಯ ಸರ ಇತ್ತು ಎನ್ನಲಾಗಿತ್ತು. ಇದನ್ನು ಗಮನಿಸಿದ ಇಬ್ಬರು ಖದೀಮರು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬೈಕ್ ನಲ್ಲಿ ಅಂಗಡಿ ಬಳಿ ಬರುತ್ತಾರೆ. ಅಂಗಡಿ ಬಳಿ ಬಂದು 10 ರೂಪಾಯಿ ಕೊಟ್ಟು 5 ರೂಪಾಯಿಯ ಚಾಕಲೇಟ್ ಖರೀದಿ ಮಾಡುತ್ತಾರೆ. ಉಳಿದ 5 ರೂಪಾಯಿ ಚಿಲ್ಲರೆ ವಾಪಸ್ ಕೊಡಲು ಅಜ್ಜಿ ಮುಂದಾದಗ ಕಳ್ಳರು ನೇರವಾಗಿ ಅಜ್ಜಿಯ ಕೊರಳಿಗೆ ಕೈ ಹಾಕಿ ಚೈನ್ ಕದಿಯಲು ಮುಂದಾಗುತ್ತಾರೆ. ಅಜ್ಜಿ ಕೂಡಲೇ ಎಚ್ಚೆತ್ತುಕೊಂಡು ತನ್ನ ಚೈನನ್ನು ಬಿಗಿಯಾಗಿ ಹಿಡಿದುಕೊಳ್ಳುತ್ತಾರೆ.

ಯಶೋಧಮ್ಮ ಕೊರಳಿನಿಂದ ಸರವನ್ನ ಕಿತ್ತಿಕೊಳ್ಳುವಾಗ ಸರ ತುಂಡಾಗಿ, ಅರ್ಧ ಸರ ಮಾತ್ರ ಕಳ್ಳರಿಗೆ ಕೈಗೆ ಸಿಕ್ಕಿತ್ತು. ಆಗ 100 ಗ್ರಾಂ ಚಿನ್ನದ ಸರದಲ್ಲಿ 50ಗ್ರಾಂ ಚಿನ್ನದ ಸರ ಮಾತ್ರ ಕಳ್ಳರಿಗೆ ಸಿಕ್ಕಿದೆ ಎನ್ನಲಾಗಿತ್ತು.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳರ ಜಾಡು‌ಹಿಡಿದು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಸದ್ಯ ಇಬ್ಬರು ಖದೀಮರನ್ನು  ಬಂಧಿಸಿ ಕದ್ದ ಚಿನ್ನದ ಸರವನ್ನು ವಶಕ್ಕೆ ಪಡೆದು ಇಂದು ಕಳುವಾಗಿದ್ದ ಚಿನ್ನದ ಸರವನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಅವರು ಅಜ್ಜಿಗೆ ವಾಪಸ್ ನೀಡಿದರು.

ಈ ವೇಳೆ ಕಳುವಾಗಿದ್ದ ಚಿನ್ನದ ಮಾಂಗಲ್ಯ ಸರ ಕೈ ಸೇರಿದ‌ ಮೇಲೆ ವೃದ್ಧೆ ಯಶೋಧಮ್ಮ ಭಾವುಕರಾದರು. ಪೊಲೀಸರ ಕಾರ್ಯವೈಖರಿಗೆ ಪ್ರಶಂಸೆಯನ್ನು ಕೂಡ ವ್ಯಕ್ತಪಡಿಸಿದರು.

ಕಳ್ಳರನ್ನು ಪತ್ತೆ ಮಾಡುವಲ್ಲಿ ಶ್ರಮಿಸಿದ ಪೊಲೀಸ್ ಸಿಬ್ಬಂದಿ ಸುನಿಲ್ ಬಾಸ್ಕಿ, ಸಚಿನ್, ಹರೀಶ್ ಮತ್ತು ಪ್ರವೀಣ್ ರವರನ್ನ ಇನ್ಸ್ ಪೆಕ್ಟರ್ ಸಾಧಿಕ್ ಪಾಷ ಅಭಿನಂಧಿಸಿದ್ದಾರೆ.

ಆರೋಪಿಗಳ ಮಾಹಿತಿ

ಕನಕಪುರ ಮೂಲದ ಶಿವರಾಜ್ ಮತ್ತು ಸುಂದರೇಶ್ ಎಂಬ ಇಬ್ಬರು ಕಳ್ಳರನ್ನು ಬಂಧಿಸಲಾಗಿದೆ.

ಈ ಹಿಂದೆ ಮಂಡ್ಯ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೇಲ್ ನಲ್ಲಿ ಹೊರ ಬಂದಿರುತ್ತಾರೆ. ಕಳ್ಳತನಕ್ಕಾಗಿಯೇ ಹೊಸ ಬೈಕ್ ಖರೀದಿಯನ್ನು ಮಾಡಿರುತ್ತಾರೆ. ಬಣ್ಣದ ಮೂರು‌ ಮೂರು ಟೀ ಶರ್ಟ್ ಗಳನ್ನು ಧರಿಸಿದ್ದರು. ಅರಳುಮಲ್ಲಿಗೆಯಲ್ಲಿ‌ ಕಳ್ಳತನ ಮಾಡಿ ಕನಕಪುರ ತಾಲೂಕಿನ ಮಠವೊಂದರಲ್ಲಿ ವಾಸ ಮಾಡುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 hour ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

2 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

11 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago