ಅರಳುಮಲ್ಲಿಗೆ ಸರ ಕಳವು ಪ್ರಕರಣ: ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು: ವೃದ್ಧೆ ಕೈ ಸೇರಿದ ಕಳುವಾಗಿದ್ದ ಚಿನ್ನದ ಮಾಂಗಲ್ಯ ಸರ: ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅಜ್ಜಿ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅರಳುಮಲ್ಲಿಗೆ ಗ್ರಾಮದಲ್ಲಿ ಅಜ್ಜಿಯ ಚಿನ್ನದ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಆರೋಪಿಗಳನ್ನು ಪತ್ತೆ ಮಾಡಿ, ಸೂಕ್ತ ತನಿಖೆ‌ ನಡೆಸಿ, ಕಳ್ಳರಿಂದ ಚಿನ್ನದ ಸರವನ್ನು ವಶಕ್ಕೆ ಪಡೆದು ಕಳುವಾಗಿದ್ದ ಚಿನ್ನದ ಸರವನ್ನು ಅಜ್ಜಿಗೆ ವಾಪಸ್ ನೀಡಲಾಯಿತು.

ಫೆ. 21‌ರಂದು ವೃದ್ಧೆ ಕೊರಳಲ್ಲಿದ್ದ ಚಿನ್ನದ ಸರವನ್ನು ಕಳ್ಳರು ಕದ್ದು ಪರಾರಿಯಾಗಿದ್ದ ಘಟನೆ ತಾಲೂಕಿನ ಅರಳುಮಲ್ಲಿಗೆ ಬಳಿ ನಡೆದಿತ್ತು.

ಯಶೋಧಮ್ಮ (75), ಚಿನ್ನದ ಮಾಂಗಲ್ಯ ಸರ ಕಳೆದುಕೊಂಡ ವೃದ್ಧೆ.

ಪೆಟ್ಟಿ ಅಂಗಡಿಯಲ್ಲಿ ವೃದ್ಧೆ ತನ್ನ ಪಾಡಿಗೆ ತಾನು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಳು. ಅಜ್ಜಿಯ ಕೊರಳಲ್ಲಿ ಸುಮಾರು 100 ಗ್ರಾಂ ಮಾಂಗಲ್ಯ ಸರ ಇತ್ತು ಎನ್ನಲಾಗಿತ್ತು. ಇದನ್ನು ಗಮನಿಸಿದ ಇಬ್ಬರು ಖದೀಮರು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬೈಕ್ ನಲ್ಲಿ ಅಂಗಡಿ ಬಳಿ ಬರುತ್ತಾರೆ. ಅಂಗಡಿ ಬಳಿ ಬಂದು 10 ರೂಪಾಯಿ ಕೊಟ್ಟು 5 ರೂಪಾಯಿಯ ಚಾಕಲೇಟ್ ಖರೀದಿ ಮಾಡುತ್ತಾರೆ. ಉಳಿದ 5 ರೂಪಾಯಿ ಚಿಲ್ಲರೆ ವಾಪಸ್ ಕೊಡಲು ಅಜ್ಜಿ ಮುಂದಾದಗ ಕಳ್ಳರು ನೇರವಾಗಿ ಅಜ್ಜಿಯ ಕೊರಳಿಗೆ ಕೈ ಹಾಕಿ ಚೈನ್ ಕದಿಯಲು ಮುಂದಾಗುತ್ತಾರೆ. ಅಜ್ಜಿ ಕೂಡಲೇ ಎಚ್ಚೆತ್ತುಕೊಂಡು ತನ್ನ ಚೈನನ್ನು ಬಿಗಿಯಾಗಿ ಹಿಡಿದುಕೊಳ್ಳುತ್ತಾರೆ.

ಯಶೋಧಮ್ಮ ಕೊರಳಿನಿಂದ ಸರವನ್ನ ಕಿತ್ತಿಕೊಳ್ಳುವಾಗ ಸರ ತುಂಡಾಗಿ, ಅರ್ಧ ಸರ ಮಾತ್ರ ಕಳ್ಳರಿಗೆ ಕೈಗೆ ಸಿಕ್ಕಿತ್ತು. ಆಗ 100 ಗ್ರಾಂ ಚಿನ್ನದ ಸರದಲ್ಲಿ 50ಗ್ರಾಂ ಚಿನ್ನದ ಸರ ಮಾತ್ರ ಕಳ್ಳರಿಗೆ ಸಿಕ್ಕಿದೆ ಎನ್ನಲಾಗಿತ್ತು.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳರ ಜಾಡು‌ಹಿಡಿದು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಸದ್ಯ ಇಬ್ಬರು ಖದೀಮರನ್ನು  ಬಂಧಿಸಿ ಕದ್ದ ಚಿನ್ನದ ಸರವನ್ನು ವಶಕ್ಕೆ ಪಡೆದು ಇಂದು ಕಳುವಾಗಿದ್ದ ಚಿನ್ನದ ಸರವನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಅವರು ಅಜ್ಜಿಗೆ ವಾಪಸ್ ನೀಡಿದರು.

ಈ ವೇಳೆ ಕಳುವಾಗಿದ್ದ ಚಿನ್ನದ ಮಾಂಗಲ್ಯ ಸರ ಕೈ ಸೇರಿದ‌ ಮೇಲೆ ವೃದ್ಧೆ ಯಶೋಧಮ್ಮ ಭಾವುಕರಾದರು. ಪೊಲೀಸರ ಕಾರ್ಯವೈಖರಿಗೆ ಪ್ರಶಂಸೆಯನ್ನು ಕೂಡ ವ್ಯಕ್ತಪಡಿಸಿದರು.

ಕಳ್ಳರನ್ನು ಪತ್ತೆ ಮಾಡುವಲ್ಲಿ ಶ್ರಮಿಸಿದ ಪೊಲೀಸ್ ಸಿಬ್ಬಂದಿ ಸುನಿಲ್ ಬಾಸ್ಕಿ, ಸಚಿನ್, ಹರೀಶ್ ಮತ್ತು ಪ್ರವೀಣ್ ರವರನ್ನ ಇನ್ಸ್ ಪೆಕ್ಟರ್ ಸಾಧಿಕ್ ಪಾಷ ಅಭಿನಂಧಿಸಿದ್ದಾರೆ.

ಆರೋಪಿಗಳ ಮಾಹಿತಿ

ಕನಕಪುರ ಮೂಲದ ಶಿವರಾಜ್ ಮತ್ತು ಸುಂದರೇಶ್ ಎಂಬ ಇಬ್ಬರು ಕಳ್ಳರನ್ನು ಬಂಧಿಸಲಾಗಿದೆ.

ಈ ಹಿಂದೆ ಮಂಡ್ಯ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೇಲ್ ನಲ್ಲಿ ಹೊರ ಬಂದಿರುತ್ತಾರೆ. ಕಳ್ಳತನಕ್ಕಾಗಿಯೇ ಹೊಸ ಬೈಕ್ ಖರೀದಿಯನ್ನು ಮಾಡಿರುತ್ತಾರೆ. ಬಣ್ಣದ ಮೂರು‌ ಮೂರು ಟೀ ಶರ್ಟ್ ಗಳನ್ನು ಧರಿಸಿದ್ದರು. ಅರಳುಮಲ್ಲಿಗೆಯಲ್ಲಿ‌ ಕಳ್ಳತನ ಮಾಡಿ ಕನಕಪುರ ತಾಲೂಕಿನ ಮಠವೊಂದರಲ್ಲಿ ವಾಸ ಮಾಡುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.

Ramesh Babu

Journalist

Recent Posts

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

1 hour ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

4 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

6 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

17 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

22 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

23 hours ago