ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ ಶಾಮಿಲಾಗಿ ಖಾಸಗಿ ವ್ಯಕ್ತಿಗೆ ಖಾತೆ ಮಾಡಿಕೊಟ್ಟಿದ್ದಾರೆ. ಇದರಿಂದ ಗ್ರಾಮ ದೇವತೆ ಅರಸೇಶ್ವರಿ ದೇವಿಯ ಜಾತ್ರಾ ಮಹೋತ್ಸವ ಮಾಡಲಾಗುತ್ತಿಲ್ಲ. ಖಾಸಗಿ ವ್ಯಕ್ತಿ ಅರಸೇಶ್ವರಿ ಜಾತ್ರೆ ಮಾಡಲು ಅಡ್ಡಿಪಡಿಸುತ್ತಿದ್ದಾರೆ ಎಂದು ಕಾಡತಿಪ್ಪೂರು, ತಣ್ಣೀರನಹಳ್ಳಿ, ಮೂಡ್ಲುಕಾಳೇನಹಳ್ಳಿ ಗ್ರಾಮಸ್ಥರು ಆರೋಪಿಸಿ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಈ ವೇಳೆ ಮುಖಂಡ ಕೃಷ್ಣಮೂರ್ತಿ ಮಾತನಾಡಿ, ಅರಸೇಶ್ವರಿ ನಮ್ಮ ಭಾಗದ ಗ್ರಾಮದೇವತೆಯಾಗಿದೆ. ಸುಮಾರು 50-60 ವರ್ಷಗಳಿಂದಲೂ ಇಲ್ಲಿ ಪ್ರತಿವರ್ಷ ಅದ್ದೂರಿಯಾಗಿ 7 ದಿನಗಳ ಕಾಲ ಜಾತ್ರಾಮಹೋತ್ಸವ ಮಾಡಿಕೊಂಡು ಬರಲಾಗುತ್ತಿದೆ. ಸುತ್ತಮುತ್ತಲಿನ 20 ಸಾವಿರಕ್ಕೂ ಅಧಿಕ ಭಕ್ತಾಧಿಗಳು ಭಾಗಿಯಾಗುತ್ತಾರೆ. ಇಂತಹ ದೇಗುಲದ ಇನಾಮ್ತಿ ಜಮೀನನ್ನು ಭ್ರಷ್ಟ ಕಂದಾಯ ಇಲಾಖೆ ಅಧಿಕಾರಿಗಳು ದೇಗುಲದ ಸರ್ವೇ ನಂ.69ರ 4 ಎಕರೆ ಜಮೀನನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ಖಾತೆ ಮಾಡಿಕೊಟ್ಟಿದ್ದಾರೆ. ಇದರಿಂದಾಗಿ ನಾವು ಜಾತ್ರೆಯನ್ನ ಮಾಡಲಾಗುತ್ತಿಲ್ಲ. ಖಾಸಗಿ ವ್ಯಕ್ತಿ ದೇವಸ್ಥಾನ ಯಾವುದೇ ಕಾರ್ಯಗಳನ್ನ ಮಾಡಲು ಅಡ್ಡಿಪಡಿಸುತ್ತಿದ್ದಾರೆ. ಅಧಿಕಾರಿಗಳು ಲೋಪಗಳನ್ನ ಸರಿಪಡಿಸಿ ಅರಸೇಶ್ವರಿಯ ಹೆಸರಿಗೆ ಖಾತೆ ಮಾಡಿ ಜಾತ್ರೆಯನ್ನು ಮಾಡಲು ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಸರ್ವೇ ನಂಬರ್ 50 ರಲ್ಲಿ 4 ಎಕರೆ ಸರ್ಕಾರಿ ಗುಂಡುತೋಪನ್ನು ಅಕ್ರಮವಾಗಿ ಖಾತೆ ಮಾಡಿದ್ದು, ಇದನ್ನು ವಜಾಮಾಡಬೇಕು. ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗಿರುವ ನಕಾಶೆ ರಸ್ತೆಯನ್ನು ತೆರವು ಮಾಡಿಕೊಡಬೇಕು. ಎಸ್.ಟಿ ಸಮುದಾಯ ವಾಸವಾಗಿರುವ ಕುಟುಂಬಗಳಿಗೆ ಖಾತೆ ಮಾಡಿಕೊಟ್ಟು ವಾಸಿಸಲು ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದರು.

ನಂತರ ಕೃಷ್ಣಮೂರ್ತಿ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕಾಡತಿಪ್ಪೂರು. ತಣ್ಣೀರನಹಳ್ಳಿ ಮತ್ತು ಮೂಡ್ಲಕಾಳೇನಹಳ್ಳಿ ಗ್ರಾಮಸ್ಥರು 3ಕ್ಕೂ ಹೆಚ್ಚು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ತಾಲ್ಲೂಕು ವೃತ್ತದಿಂದ ತಮಟೆ ವಾದ್ಯದ ಮೂಲಕ ಘೋಷಣೆ ಕೂಗುತ್ತಾ ತಾಲ್ಲೂಕು ಕಚೇರಿ ಮುಂದೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.

ಸಮಸ್ಯೆ ಬಗೆಹರಿಸುವಂತೆ ಕೋರಿ ಸುಮಾರು 4 ವರ್ಷಗಳಿಂದ ಹೋರಾಡುತ್ತಿದ್ದೇವೆ. ಅಧಿಕಾರಿಗಳಿಗೆ ಸಾಕಷ್ಟು ಮನವಿ ಮಾಡಿದ್ದೇವೆ. ಇದುವರೆಗೂ ಒಂದೇ ಒಂದು ಸಮಸ್ಯೆಯನ್ನೂ ಬಗೆಹರಿಸಿಲ್ಲ. ನಾವು ಬಡವರು, ದಲಿತರು, ಅಮಾಯಕರು ಎಂದು ತಿಳಿದ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ. ಕಿವುಡರಾಗಿದ್ದಾರೆ ಅವರಿಗೆ ನಮ್ಮ ಧ್ವನಿ ಕೇಳಿಸುತ್ತಿಲ್ಲ. ನಮ್ಮ ನೋವು ಅವರಿಗೆ ಅರ್ಥವಾಗುತ್ತಿಲ್ಲ. ಹೀಗೆ ಮುಂದುವರಿದರೆ ನಾವು ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಉಪವಿಭಾಗಾಧಿಕಾರಿ ಕಚೇರಿಯ ತಹಶೀಲ್ದಾರ್ ಮಹೇಶ್ ಮನವಿ ಪತ್ರವನ್ನ ಸ್ವೀಕರಿಸಿ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಗಮನಕ್ಕೆ ತಂದು ಕ್ರಮ ಜರುಗಿಸುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆಯನ್ನು ಕೈಬಿಡಲಾಯಿತು.

ಈ ವೇಳೆ ಮುಖಂಡರಾದ ಶಿವರಾಜು, ಗಂಗರಾಜು, ಗೋವಿಂದಪ್ಪ, ರಾಜಣ್ಣ, ಗಂಗಹನುಮಯ್ಯ, ದೇವರಾಜಮ್ಮ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

2 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

23 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago