ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ ಶಾಮಿಲಾಗಿ ಖಾಸಗಿ ವ್ಯಕ್ತಿಗೆ ಖಾತೆ ಮಾಡಿಕೊಟ್ಟಿದ್ದಾರೆ. ಇದರಿಂದ ಗ್ರಾಮ ದೇವತೆ ಅರಸೇಶ್ವರಿ ದೇವಿಯ ಜಾತ್ರಾ ಮಹೋತ್ಸವ ಮಾಡಲಾಗುತ್ತಿಲ್ಲ. ಖಾಸಗಿ ವ್ಯಕ್ತಿ ಅರಸೇಶ್ವರಿ ಜಾತ್ರೆ ಮಾಡಲು ಅಡ್ಡಿಪಡಿಸುತ್ತಿದ್ದಾರೆ ಎಂದು ಕಾಡತಿಪ್ಪೂರು, ತಣ್ಣೀರನಹಳ್ಳಿ, ಮೂಡ್ಲುಕಾಳೇನಹಳ್ಳಿ ಗ್ರಾಮಸ್ಥರು ಆರೋಪಿಸಿ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಈ ವೇಳೆ ಮುಖಂಡ ಕೃಷ್ಣಮೂರ್ತಿ ಮಾತನಾಡಿ, ಅರಸೇಶ್ವರಿ ನಮ್ಮ ಭಾಗದ ಗ್ರಾಮದೇವತೆಯಾಗಿದೆ. ಸುಮಾರು 50-60 ವರ್ಷಗಳಿಂದಲೂ ಇಲ್ಲಿ ಪ್ರತಿವರ್ಷ ಅದ್ದೂರಿಯಾಗಿ 7 ದಿನಗಳ ಕಾಲ ಜಾತ್ರಾಮಹೋತ್ಸವ ಮಾಡಿಕೊಂಡು ಬರಲಾಗುತ್ತಿದೆ. ಸುತ್ತಮುತ್ತಲಿನ 20 ಸಾವಿರಕ್ಕೂ ಅಧಿಕ ಭಕ್ತಾಧಿಗಳು ಭಾಗಿಯಾಗುತ್ತಾರೆ. ಇಂತಹ ದೇಗುಲದ ಇನಾಮ್ತಿ ಜಮೀನನ್ನು ಭ್ರಷ್ಟ ಕಂದಾಯ ಇಲಾಖೆ ಅಧಿಕಾರಿಗಳು ದೇಗುಲದ ಸರ್ವೇ ನಂ.69ರ 4 ಎಕರೆ ಜಮೀನನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ಖಾತೆ ಮಾಡಿಕೊಟ್ಟಿದ್ದಾರೆ. ಇದರಿಂದಾಗಿ ನಾವು ಜಾತ್ರೆಯನ್ನ ಮಾಡಲಾಗುತ್ತಿಲ್ಲ. ಖಾಸಗಿ ವ್ಯಕ್ತಿ ದೇವಸ್ಥಾನ ಯಾವುದೇ ಕಾರ್ಯಗಳನ್ನ ಮಾಡಲು ಅಡ್ಡಿಪಡಿಸುತ್ತಿದ್ದಾರೆ. ಅಧಿಕಾರಿಗಳು ಲೋಪಗಳನ್ನ ಸರಿಪಡಿಸಿ ಅರಸೇಶ್ವರಿಯ ಹೆಸರಿಗೆ ಖಾತೆ ಮಾಡಿ ಜಾತ್ರೆಯನ್ನು ಮಾಡಲು ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಸರ್ವೇ ನಂಬರ್ 50 ರಲ್ಲಿ 4 ಎಕರೆ ಸರ್ಕಾರಿ ಗುಂಡುತೋಪನ್ನು ಅಕ್ರಮವಾಗಿ ಖಾತೆ ಮಾಡಿದ್ದು, ಇದನ್ನು ವಜಾಮಾಡಬೇಕು. ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗಿರುವ ನಕಾಶೆ ರಸ್ತೆಯನ್ನು ತೆರವು ಮಾಡಿಕೊಡಬೇಕು. ಎಸ್.ಟಿ ಸಮುದಾಯ ವಾಸವಾಗಿರುವ ಕುಟುಂಬಗಳಿಗೆ ಖಾತೆ ಮಾಡಿಕೊಟ್ಟು ವಾಸಿಸಲು ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದರು.

ನಂತರ ಕೃಷ್ಣಮೂರ್ತಿ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕಾಡತಿಪ್ಪೂರು. ತಣ್ಣೀರನಹಳ್ಳಿ ಮತ್ತು ಮೂಡ್ಲಕಾಳೇನಹಳ್ಳಿ ಗ್ರಾಮಸ್ಥರು 3ಕ್ಕೂ ಹೆಚ್ಚು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ತಾಲ್ಲೂಕು ವೃತ್ತದಿಂದ ತಮಟೆ ವಾದ್ಯದ ಮೂಲಕ ಘೋಷಣೆ ಕೂಗುತ್ತಾ ತಾಲ್ಲೂಕು ಕಚೇರಿ ಮುಂದೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.

ಸಮಸ್ಯೆ ಬಗೆಹರಿಸುವಂತೆ ಕೋರಿ ಸುಮಾರು 4 ವರ್ಷಗಳಿಂದ ಹೋರಾಡುತ್ತಿದ್ದೇವೆ. ಅಧಿಕಾರಿಗಳಿಗೆ ಸಾಕಷ್ಟು ಮನವಿ ಮಾಡಿದ್ದೇವೆ. ಇದುವರೆಗೂ ಒಂದೇ ಒಂದು ಸಮಸ್ಯೆಯನ್ನೂ ಬಗೆಹರಿಸಿಲ್ಲ. ನಾವು ಬಡವರು, ದಲಿತರು, ಅಮಾಯಕರು ಎಂದು ತಿಳಿದ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ. ಕಿವುಡರಾಗಿದ್ದಾರೆ ಅವರಿಗೆ ನಮ್ಮ ಧ್ವನಿ ಕೇಳಿಸುತ್ತಿಲ್ಲ. ನಮ್ಮ ನೋವು ಅವರಿಗೆ ಅರ್ಥವಾಗುತ್ತಿಲ್ಲ. ಹೀಗೆ ಮುಂದುವರಿದರೆ ನಾವು ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಉಪವಿಭಾಗಾಧಿಕಾರಿ ಕಚೇರಿಯ ತಹಶೀಲ್ದಾರ್ ಮಹೇಶ್ ಮನವಿ ಪತ್ರವನ್ನ ಸ್ವೀಕರಿಸಿ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಗಮನಕ್ಕೆ ತಂದು ಕ್ರಮ ಜರುಗಿಸುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆಯನ್ನು ಕೈಬಿಡಲಾಯಿತು.

ಈ ವೇಳೆ ಮುಖಂಡರಾದ ಶಿವರಾಜು, ಗಂಗರಾಜು, ಗೋವಿಂದಪ್ಪ, ರಾಜಣ್ಣ, ಗಂಗಹನುಮಯ್ಯ, ದೇವರಾಜಮ್ಮ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

23 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago