ಕೋಲಾರ: ನಗರದಲ್ಲಿ ಮಂಗಳವಾರ ಸಂಜೆ ಸುರಿದ ಬಾರಿ ಮಳೆಗೆ ಕೋಲಾರ ಚಿಕ್ಕಬಳ್ಳಾಪುರ ಮುಖ್ಯರಸ್ತೆಯ ಅರಹಳ್ಳಿ ಗೇಟ್ ರೈಲ್ವೆ ಬ್ರಿಡ್ಜ್ ಬಳಿ ಮಳೆಯ ನೀರು ಹೊರಗಡೆ ಹೋಗದೇ ನಿಂತಿದ್ದರಿಂದಾಗಿ ಅ ಭಾಗದಲ್ಲಿ ಸಂಚರಿಸುವ ಸಾರ್ವಜನಿಕವರಿಗೆ ತೀವ್ರ ತೊಂದರೆ ಅನುಭವಿಸಬೇಕಾಯಿತು.
ಕೂಡಲೇ ಶಾಸಕ ಕೊತ್ತೂರು ಮಂಜುನಾಥ್ ನಗರಸಭೆಯ ಅಧಿಕಾರಿಗಳಿಗೆ ಸೂಚನೆ ನೀಡಿ ರೈಲ್ವೆ ಬ್ರಿಡ್ಜ್ ಬಳಿಯ ಮಳೆ ನೀರಿನ ಸಮಸ್ಯೆಯನ್ನು ತಾತ್ಕಾಲಿಕವಾಗಿ ಪರಿಹಾರ ಕಂಡುಕೊಳ್ಳುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು ಬುಧವಾರ ಬೆಳಗ್ಗೆ ಅಧಿಕಾರಿಗಳು ಪೈಪ್ ಗಳಿಗೆ ಅಡ್ಡಲಾಗಿದ್ದ ಕಸಕಡ್ಡಿ, ಪ್ಲಾಸ್ಟಿಕ್ ಕವರ್ ಮತ್ತು ಮಣ್ಣನ್ನು ಹೊರಹಾಕಿ ಮಳೆಯ ನೀರು ಸರಾಗವಾಗಿ ಹರಿಯುವ ವ್ಯವಸ್ಥೆಯನ್ನು ಮಾಡಿಸಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಪ್ರಸ್ತುತ ಮಳೆಗಾಲ ಪ್ರಾಂಭವಾಗಿದೆ ಮುಂದೆ ಇಂತಹ ಘಟನೆಗಳು ನಡೆಯದಂತೆ ಸೂಕ್ತ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು ಜೊತೆಗೆ ನಗರಸಭೆ ವ್ಯಾಪ್ತಿಯಲ್ಲಿನ ಚರಂಡಿಗಳಿಂದ ಸರಾಗವಾಗಿ ನೀರು ಹರಿಯಲು ಮುಚ್ಚಿರುವ ಚರಂಡಿಯ ಕಾಲುವೆಗಳನ್ನು ಸ್ವಚ್ಚಗೊಳಿಸಲು ಗಮನ ಹರಿಸುವಂತೆ ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…