Categories: ಕೋಲಾರ

ಅರಹಳ್ಳಿ ರೈಲ್ವೆ ಬ್ರಿಡ್ಜ್ ಸಮಸ್ಯೆಗೆ ಸ್ಪಂದಿಸಿದ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರದಲ್ಲಿ ಮಂಗಳವಾರ ಸಂಜೆ ಸುರಿದ ಬಾರಿ ಮಳೆಗೆ ಕೋಲಾರ ಚಿಕ್ಕಬಳ್ಳಾಪುರ ಮುಖ್ಯರಸ್ತೆಯ ಅರಹಳ್ಳಿ ಗೇಟ್ ರೈಲ್ವೆ ಬ್ರಿಡ್ಜ್ ಬಳಿ ಮಳೆಯ ನೀರು ಹೊರಗಡೆ ಹೋಗದೇ ನಿಂತಿದ್ದರಿಂದಾಗಿ ಅ ಭಾಗದಲ್ಲಿ ಸಂಚರಿಸುವ ಸಾರ್ವಜನಿಕವರಿಗೆ ತೀವ್ರ ತೊಂದರೆ ಅನುಭವಿಸಬೇಕಾಯಿತು.

ಕೂಡಲೇ ಶಾಸಕ ಕೊತ್ತೂರು ಮಂಜುನಾಥ್ ನಗರಸಭೆಯ ಅಧಿಕಾರಿಗಳಿಗೆ ಸೂಚನೆ ನೀಡಿ ರೈಲ್ವೆ ಬ್ರಿಡ್ಜ್ ಬಳಿಯ ಮಳೆ ನೀರಿನ ಸಮಸ್ಯೆಯನ್ನು ತಾತ್ಕಾಲಿಕವಾಗಿ ಪರಿಹಾರ ಕಂಡುಕೊಳ್ಳುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು ಬುಧವಾರ ಬೆಳಗ್ಗೆ ಅಧಿಕಾರಿಗಳು ಪೈಪ್ ಗಳಿಗೆ ಅಡ್ಡಲಾಗಿದ್ದ ಕಸಕಡ್ಡಿ, ಪ್ಲಾಸ್ಟಿಕ್ ಕವರ್ ಮತ್ತು ಮಣ್ಣನ್ನು ಹೊರಹಾಕಿ ಮಳೆಯ ನೀರು ಸರಾಗವಾಗಿ ಹರಿಯುವ ವ್ಯವಸ್ಥೆಯನ್ನು ಮಾಡಿಸಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಪ್ರಸ್ತುತ ಮಳೆಗಾಲ ಪ್ರಾಂಭವಾಗಿದೆ ಮುಂದೆ ಇಂತಹ ಘಟನೆಗಳು ನಡೆಯದಂತೆ ಸೂಕ್ತ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು ಜೊತೆಗೆ ನಗರಸಭೆ ವ್ಯಾಪ್ತಿಯಲ್ಲಿನ ಚರಂಡಿಗಳಿಂದ ಸರಾಗವಾಗಿ ನೀರು ಹರಿಯಲು ಮುಚ್ಚಿರುವ ಚರಂಡಿಯ ಕಾಲುವೆಗಳನ್ನು ಸ್ವಚ್ಚಗೊಳಿಸಲು ಗಮನ ಹರಿಸುವಂತೆ ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

2 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

2 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

3 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

8 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

14 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago