Categories: ಕೋಲಾರ

ಅರಾಭಿಕೊತ್ತನೂರು ಗ್ರಾಪಂ ಸಾಮಾನ್ಯ ಸಭೆ ಕೋರಂ ಫೈಟ್

ಕೋಲಾರ: ಅಧ್ಯಕ್ಷ-ಉಪಾಧ್ಯಕ್ಷರು ಹಾಗೂ ಪಿಡಿಒ ತಮಗೆ ಸರಿಯಾದ ರೀತಿಯಲ್ಲಿ ಸ್ಪಂದಿಸದೆ, ಅಗೌರವ ತೋರಿ, ನಿರ್ಲಲಕ್ಷಿಸುತ್ತಿದ್ದಾರೆಂದು ಆರೋಪಿಸಿ ಕೆಲ ಸದಸ್ಯರು ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಅರಾಭಿಕೊತ್ತನೂರು ಗ್ರಾಪಂ ಕಚೇರಿಯಲ್ಲಿ ಬುಧವಾರ ಜರುಗಿತು.

ಸಾಮಾನ್ಯ ಸಭೆ ಬಹಿಷ್ಕರಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅರಾಭಿಕೊತ್ತನೂರು ಗ್ರಾಪಂ ಸದಸ್ಯ ನಂಜುಂಡಗೌಡ, ಕಳೆದ ಸುಮಾರು 5 ತಿಂಗಳ ಬಳಿಕ ಸಭೆ ನಡೆದಿದೆ. ಕಳೆದ 4-5 ಸಭೆಗಳಿಂದಲೂ ನಾವು ನೋಟೀಸ್ ಜತೆಗೆ ಖರ್ಚುವೆಚ್ಚಗಳ ಮಾಹಿತಿ ನೀಡುವಂತೆ ತಿಳಿಸಿದ್ದರೂ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಮೂರೂವರೆ ವರ್ಷಗಳಿಂದ ಉಪ ಸಮಿತಿಗಳನ್ನು ರಚನೆ ಮಾಡಿಲ್ಲ. ಪಿಡಿಒ, ಕಾರ್ಯದರ್ಶಿ, ಕರ ವಸೂಲಿಗಾರ ತಮಗೆ ಇಷ್ಟ ಬಂದಂತೆ ನಡೆದುಕೊಳ್ಳುತ್ತಿದ್ದಾರೆ. ನಾವು 11 ಮಂದಿ ಸದಸ್ಯರಿದ್ದು, ಯಾರಿಗೂ ಅವರು ಗೌರವ ನೀಡುತ್ತಿಲ್ಲ. ಕೋರಂ ಕೊರತೆಯಿದ್ದರೂ ಸಭೆ ನಡೆಸುತ್ತಿದ್ದಾರೆ. ಕೇವಲ 1 ಗಂಟೆಯಲ್ಲೇ ಸಭೆ ಮುಗಿಸಿ ಹೊರಟಿದ್ದಾರೆ. ಅಲ್ಲದೆ ಮಹಿಳಾ ಸದಸ್ಯರಿಗೂ ಗೌರವ ನೀಡದೇ ವರ್ತಿಸುವುದು ಯಾವ ನ್ಯಾಯ ಎಂದು ಪ್ರಶ್ನೆ ಮಾಡಿದರು.

ಕೂಡಲೇ ಸಮಿತಿಗಳನ್ನು ರಚನೆ ಮಾಡಬೇಕು. ಖರ್ಚು ವೆಚ್ಚಗಳ ಕುರಿತು ಸಭೆಯ ನೋಟೀಸ್ ಜತೆಗೆ 7 ದಿನಗಳ ಮೊದಲೇ ಮಾಹಿತಿ ನೀಡಬೇಕು. ಎನ್ನುವುದು ಯಾವ ವಿಚಾರಗಳನ್ನು ಪ್ರಶ್ನೆ ಮಾಡಿದರೂ ಉತ್ತರ ನೀಡುತ್ತಿಲ್ಲ. ಹಾಲಿ ಸದಸ್ಯರಿಗಿಂತ ಮಾಜಿ ಸದಸ್ಯರುಗಳಿಗೆ ಇಲ್ಲಿ ಗೌರವ ನೀಡುತ್ತಿದ್ದು, ನಾವು ಲೆಕ್ಕಕ್ಕೆ ಇಲ್ಲವೇ ಎಂದು ಪ್ರಶ್ನಿಸಿ ಈ ವಿಚಾರಗಳಲ್ಲಿಯೂ ನಮಗೆ ನ್ಯಾಯ ಸಿಗಬೇಕೆಂದು ಗ್ರಾಪಂ ಮಾಜಿ ಅಧ್ಯಕ್ಷ ರಾಜಣ್ಣ, ಸದಸ್ಯರಾದ ನಂದೀಶಪ್ಪ, ವೀಣಾ, ಪುಷ್ಪಲತಾ ಸುರೇಶ್, ಲಲಿತಮ್ಮ, ಪವಿತ್ರ, ರತ್ನಮ್ಮ, ಸುಜಾತಮ್ಮ, ಶಾಂತಮ್ಮ ಮುಂತಾದವರು ಆಗ್ರಹಿಸಿದರು.

ಅವಾಚ್ಯ ಶಬ್ದ ಬಳಸಿ ನಿಂದನೆ ಆರೋಪ:

ಇನ್ನು ಈ ಕುರಿತು ಮಾತನಾಡಿದ ಸ್ಥಾಯಿ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ, ಸಾಮಾನ್ಯ ಸಭೆಗೆ ಬಂದ ಹಿರಿಯ ಸದಸ್ಯ ನಂಜುಂಡಗೌಡ ನೋಟೀಸ್ ಜತೆಗೆ ಖರ್ಚುವೆಚ್ಚದ ಮಾಹಿತಿ ನೀಡಬೇಕೆಂದು ಕೇಳಿದರು. ಆ ವೇಳೆ ಸೌಹಾರ್ಧಯುತವಾಗಿ ಮಾತನಾಡಲು ಉಪಾಧ್ಯಕ್ಷರು ಮುಂದಾಗುತ್ತಿದ್ದಂತೆಯೇ ಅವಾಚ್ಯ ಶಬ್ದ ಬಳಕೆ ಮಾಡಿ ಕುಳಿತುಕೋ ಎಂದು ನಿಂದಿಸಿದ್ದಾರೆ. ಇದು ಕೇವಲ ಉಪಾಧ್ಯಕ್ಷರಿಗೆ ಅಲ್ಲ, ಸಭೆಯಲ್ಲಿದ್ದ ಎಲ್ಲ ಸದಸ್ಯರಿಗೂ ಅನ್ವಯವಾಗುತ್ತದೆಯಲ್ಲವೇ ಎಂದು ಪ್ರಶ್ನಿಸಿದರು.

ಅಧ್ಯಕ್ಷರ ದಲಿತರಾಗಿದ್ದಾರೆ. ಆ ಕಾರಣಕ್ಕಾಗಿ ಸಹಿಸದ ಕೆಲ ಸದಸ್ಯರು ವಿನಾಕಾರಣ ಇಲ್ಲಸಲ್ಲದ ಆರೋಪ ಮಾಡಿ ಸಭೆಗಳಲ್ಲಿ ತೊಂದರೆ ಮಾಡುತ್ತಿದ್ದು, ಎಸ್ಸಿ-ಎಸ್ಟಿ ಸೆಲ್‌ಗೆ ಈ ಸಂಬಂಧ ದೂರು ನೀಡಲಾಗುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಪಿಡಿಒ ಶಾಲಿನಿ ಮಾತನಾಡಿ, ನೀತಿ ಸಂಹಿತೆ ಕಾರಣ ಸಭೆಗಳನ್ನು ನಡೆಸಿರಲಿಲ್ಲ. ಇದೀಗ ಅಜೆಂಡಾ ಪ್ರಕಾರವಾಗಿ ಸಭೆ ನಡೆಸಲಾಗಿದೆ. 7 ದಿನಗಳ ಮುಂಚಿತವಾಗಿ ಎಲ್ಲ ಸದಸ್ಯರಿಗೂ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಪಮನ ಅಧ್ಯಕ್ಷೆ ರೇಣುಕಾಂಭ ಮುನಿರಾಜು, ಉಪಾಧ್ಯಕ್ಷ ನಾಗೇಂದ್ರ ಸೇರಿದಂತೆ ಸದಸ್ಯರು ಇದ್ದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

3 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

6 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

18 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

19 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

21 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

23 hours ago