Categories: ಕೋಲಾರ

ಅರಾಭಿಕೊತ್ತನೂರು ಗ್ರಾಪಂ ಸಾಮಾನ್ಯ ಸಭೆ ಕೋರಂ ಫೈಟ್

ಕೋಲಾರ: ಅಧ್ಯಕ್ಷ-ಉಪಾಧ್ಯಕ್ಷರು ಹಾಗೂ ಪಿಡಿಒ ತಮಗೆ ಸರಿಯಾದ ರೀತಿಯಲ್ಲಿ ಸ್ಪಂದಿಸದೆ, ಅಗೌರವ ತೋರಿ, ನಿರ್ಲಲಕ್ಷಿಸುತ್ತಿದ್ದಾರೆಂದು ಆರೋಪಿಸಿ ಕೆಲ ಸದಸ್ಯರು ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಅರಾಭಿಕೊತ್ತನೂರು ಗ್ರಾಪಂ ಕಚೇರಿಯಲ್ಲಿ ಬುಧವಾರ ಜರುಗಿತು.

ಸಾಮಾನ್ಯ ಸಭೆ ಬಹಿಷ್ಕರಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅರಾಭಿಕೊತ್ತನೂರು ಗ್ರಾಪಂ ಸದಸ್ಯ ನಂಜುಂಡಗೌಡ, ಕಳೆದ ಸುಮಾರು 5 ತಿಂಗಳ ಬಳಿಕ ಸಭೆ ನಡೆದಿದೆ. ಕಳೆದ 4-5 ಸಭೆಗಳಿಂದಲೂ ನಾವು ನೋಟೀಸ್ ಜತೆಗೆ ಖರ್ಚುವೆಚ್ಚಗಳ ಮಾಹಿತಿ ನೀಡುವಂತೆ ತಿಳಿಸಿದ್ದರೂ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಮೂರೂವರೆ ವರ್ಷಗಳಿಂದ ಉಪ ಸಮಿತಿಗಳನ್ನು ರಚನೆ ಮಾಡಿಲ್ಲ. ಪಿಡಿಒ, ಕಾರ್ಯದರ್ಶಿ, ಕರ ವಸೂಲಿಗಾರ ತಮಗೆ ಇಷ್ಟ ಬಂದಂತೆ ನಡೆದುಕೊಳ್ಳುತ್ತಿದ್ದಾರೆ. ನಾವು 11 ಮಂದಿ ಸದಸ್ಯರಿದ್ದು, ಯಾರಿಗೂ ಅವರು ಗೌರವ ನೀಡುತ್ತಿಲ್ಲ. ಕೋರಂ ಕೊರತೆಯಿದ್ದರೂ ಸಭೆ ನಡೆಸುತ್ತಿದ್ದಾರೆ. ಕೇವಲ 1 ಗಂಟೆಯಲ್ಲೇ ಸಭೆ ಮುಗಿಸಿ ಹೊರಟಿದ್ದಾರೆ. ಅಲ್ಲದೆ ಮಹಿಳಾ ಸದಸ್ಯರಿಗೂ ಗೌರವ ನೀಡದೇ ವರ್ತಿಸುವುದು ಯಾವ ನ್ಯಾಯ ಎಂದು ಪ್ರಶ್ನೆ ಮಾಡಿದರು.

ಕೂಡಲೇ ಸಮಿತಿಗಳನ್ನು ರಚನೆ ಮಾಡಬೇಕು. ಖರ್ಚು ವೆಚ್ಚಗಳ ಕುರಿತು ಸಭೆಯ ನೋಟೀಸ್ ಜತೆಗೆ 7 ದಿನಗಳ ಮೊದಲೇ ಮಾಹಿತಿ ನೀಡಬೇಕು. ಎನ್ನುವುದು ಯಾವ ವಿಚಾರಗಳನ್ನು ಪ್ರಶ್ನೆ ಮಾಡಿದರೂ ಉತ್ತರ ನೀಡುತ್ತಿಲ್ಲ. ಹಾಲಿ ಸದಸ್ಯರಿಗಿಂತ ಮಾಜಿ ಸದಸ್ಯರುಗಳಿಗೆ ಇಲ್ಲಿ ಗೌರವ ನೀಡುತ್ತಿದ್ದು, ನಾವು ಲೆಕ್ಕಕ್ಕೆ ಇಲ್ಲವೇ ಎಂದು ಪ್ರಶ್ನಿಸಿ ಈ ವಿಚಾರಗಳಲ್ಲಿಯೂ ನಮಗೆ ನ್ಯಾಯ ಸಿಗಬೇಕೆಂದು ಗ್ರಾಪಂ ಮಾಜಿ ಅಧ್ಯಕ್ಷ ರಾಜಣ್ಣ, ಸದಸ್ಯರಾದ ನಂದೀಶಪ್ಪ, ವೀಣಾ, ಪುಷ್ಪಲತಾ ಸುರೇಶ್, ಲಲಿತಮ್ಮ, ಪವಿತ್ರ, ರತ್ನಮ್ಮ, ಸುಜಾತಮ್ಮ, ಶಾಂತಮ್ಮ ಮುಂತಾದವರು ಆಗ್ರಹಿಸಿದರು.

ಅವಾಚ್ಯ ಶಬ್ದ ಬಳಸಿ ನಿಂದನೆ ಆರೋಪ:

ಇನ್ನು ಈ ಕುರಿತು ಮಾತನಾಡಿದ ಸ್ಥಾಯಿ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ, ಸಾಮಾನ್ಯ ಸಭೆಗೆ ಬಂದ ಹಿರಿಯ ಸದಸ್ಯ ನಂಜುಂಡಗೌಡ ನೋಟೀಸ್ ಜತೆಗೆ ಖರ್ಚುವೆಚ್ಚದ ಮಾಹಿತಿ ನೀಡಬೇಕೆಂದು ಕೇಳಿದರು. ಆ ವೇಳೆ ಸೌಹಾರ್ಧಯುತವಾಗಿ ಮಾತನಾಡಲು ಉಪಾಧ್ಯಕ್ಷರು ಮುಂದಾಗುತ್ತಿದ್ದಂತೆಯೇ ಅವಾಚ್ಯ ಶಬ್ದ ಬಳಕೆ ಮಾಡಿ ಕುಳಿತುಕೋ ಎಂದು ನಿಂದಿಸಿದ್ದಾರೆ. ಇದು ಕೇವಲ ಉಪಾಧ್ಯಕ್ಷರಿಗೆ ಅಲ್ಲ, ಸಭೆಯಲ್ಲಿದ್ದ ಎಲ್ಲ ಸದಸ್ಯರಿಗೂ ಅನ್ವಯವಾಗುತ್ತದೆಯಲ್ಲವೇ ಎಂದು ಪ್ರಶ್ನಿಸಿದರು.

ಅಧ್ಯಕ್ಷರ ದಲಿತರಾಗಿದ್ದಾರೆ. ಆ ಕಾರಣಕ್ಕಾಗಿ ಸಹಿಸದ ಕೆಲ ಸದಸ್ಯರು ವಿನಾಕಾರಣ ಇಲ್ಲಸಲ್ಲದ ಆರೋಪ ಮಾಡಿ ಸಭೆಗಳಲ್ಲಿ ತೊಂದರೆ ಮಾಡುತ್ತಿದ್ದು, ಎಸ್ಸಿ-ಎಸ್ಟಿ ಸೆಲ್‌ಗೆ ಈ ಸಂಬಂಧ ದೂರು ನೀಡಲಾಗುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಪಿಡಿಒ ಶಾಲಿನಿ ಮಾತನಾಡಿ, ನೀತಿ ಸಂಹಿತೆ ಕಾರಣ ಸಭೆಗಳನ್ನು ನಡೆಸಿರಲಿಲ್ಲ. ಇದೀಗ ಅಜೆಂಡಾ ಪ್ರಕಾರವಾಗಿ ಸಭೆ ನಡೆಸಲಾಗಿದೆ. 7 ದಿನಗಳ ಮುಂಚಿತವಾಗಿ ಎಲ್ಲ ಸದಸ್ಯರಿಗೂ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಪಮನ ಅಧ್ಯಕ್ಷೆ ರೇಣುಕಾಂಭ ಮುನಿರಾಜು, ಉಪಾಧ್ಯಕ್ಷ ನಾಗೇಂದ್ರ ಸೇರಿದಂತೆ ಸದಸ್ಯರು ಇದ್ದರು.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

5 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

6 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago