ಅರಿವು ಸಾಲ(ಶೈಕ್ಷಣಿಕ ಸಾಲ) ಯೋಜನೆಯಡಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

2023-24 ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ “CET/NEET ವೃತ್ತಿಪರ ಕೋರ್ಸ್‌ಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಾದ ಅಂದರೆ ವೈದ್ಯಕೀಯ (ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್), ದಂತ ವೈದ್ಯಕೀಯ (ಬಿ.ಡಿ.ಎಸ್, ಎಂ.ಡಿ.ಎಸ್), ಆಯುಷ್ (ಬಿ.ಆಯುಷ್‌, ಎಂ.ಆಯುಷ್), ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ (ಬಿ.ಇ/ಬಿ.ಟೆಕ್, ಎಂ.ಇ/ಎಂ.ಟಿಕ್), ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಮತ್ತು (ಬಿ.ಆರ್ಕ್, ಎಂ ಆರ್ಕ್), MBA, MCA, LLB, B.Sc in Horticulture, Agricultural Engineering, Dairy Technology, Forestry, Veterinary and Animal Technology, Fisheries, Sericulture, Home/Community Sciences, Food Nutrition and Dietetics, B.Pharma, M.Pharma, Pharma D and D Pharma ಇಂತಹ ಪದವಿ ಕೋರ್ಸ್‌ಗಳಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರಿವು ರಿನಿವಲ್ (Arivu Renewal) ಸಾಲದ ಯೋಜನೆಯಡಿ (ವಿದ್ಯಾಭ್ಯಾಸ ಸಾಲ) ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅಂದರೆ ಮುಸ್ಲಿಂ, ಕ್ರಿಶ್ಚಿಯನ್ ಜೈನ್, ಬೌದ್ಧರು, ಸಿಖ್, ಪಾರ್ಸಿ ಇವರುಗಳು ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇಕಡ 12 ರಷ್ಟನ್ನು ಪಾವತಿಸಿ ನಿಗಮದ ಈ ಕೆಳಕಂಡ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು, ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ವಿದ್ಯಾರ್ಥಿಗಳು ಯಾವುದೇ ರಿನಿವಲ್ ಮೊತ್ತವನ್ನು ಪಾವತಿಸುವ ಅಗತ್ಯವಿರುವುದಿಲ್ಲ ಹಾಗೂ ಸಲ್ಲಿಸಿದ ಅರ್ಜಿಯ ಹಾರ್ಡ್ ಕಾಪಿಗಳನ್ನು ಮತ್ತು ವೆಬ್‌ ಸೈಟ್‌ ನಲ್ಲಿ ಅಪ್ ಲೋಡ್ ಮಾಡಿರುವ Original New Indemnity, Bond, ಮತ್ತು ಇತರೆ ಮೂಲ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕ ಕಛೇರಿಗೆ ಸಲ್ಲಿಸಬೇಕಾಗಿರುತ್ತದೆ ಮತ್ತು ಆನ್‌ಲೈನ್‌ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ನಿಗದಿಪಡಿಸಿರುವುದಿಲ್ಲ.

ಅರಿವು ರಿನಿವಲ್‌’ (Arivu Renewal) ಸಾಲದ ಯೋಜನೆಯ ಆನ್‌ಲೈನ್ ವೆಬ್‌ಪೇಜ್
Kmdconline.karnataka.gov.in ಗೆ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನ (ರಜಾ ದಿನವನ್ನು ಹೊರತುಪಡಿಸಿ)
ಸಂಪರ್ಕಿಸಬಹುದಾಗಿದೆ.

ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ಎ)
ನಂ-562110, ಬೆಂಗಳೂರು ಗ್ರಾಮಾಂತರ ಜಿಲ್ಲೆ.
ದೂರವಾಣಿ ಸಂಖ್ಯೆ 080-27681736
Gmail: kmdcbrural@gmail.com
ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

1 hour ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

9 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

12 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

20 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

1 day ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

1 day ago