ಅರಿವು ಸಾಲ(ಶೈಕ್ಷಣಿಕ ಸಾಲ) ಯೋಜನೆಯಡಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

2023-24 ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ “CET/NEET ವೃತ್ತಿಪರ ಕೋರ್ಸ್‌ಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಾದ ಅಂದರೆ ವೈದ್ಯಕೀಯ (ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್), ದಂತ ವೈದ್ಯಕೀಯ (ಬಿ.ಡಿ.ಎಸ್, ಎಂ.ಡಿ.ಎಸ್), ಆಯುಷ್ (ಬಿ.ಆಯುಷ್‌, ಎಂ.ಆಯುಷ್), ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ (ಬಿ.ಇ/ಬಿ.ಟೆಕ್, ಎಂ.ಇ/ಎಂ.ಟಿಕ್), ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಮತ್ತು (ಬಿ.ಆರ್ಕ್, ಎಂ ಆರ್ಕ್), MBA, MCA, LLB, B.Sc in Horticulture, Agricultural Engineering, Dairy Technology, Forestry, Veterinary and Animal Technology, Fisheries, Sericulture, Home/Community Sciences, Food Nutrition and Dietetics, B.Pharma, M.Pharma, Pharma D and D Pharma ಇಂತಹ ಪದವಿ ಕೋರ್ಸ್‌ಗಳಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರಿವು ರಿನಿವಲ್ (Arivu Renewal) ಸಾಲದ ಯೋಜನೆಯಡಿ (ವಿದ್ಯಾಭ್ಯಾಸ ಸಾಲ) ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅಂದರೆ ಮುಸ್ಲಿಂ, ಕ್ರಿಶ್ಚಿಯನ್ ಜೈನ್, ಬೌದ್ಧರು, ಸಿಖ್, ಪಾರ್ಸಿ ಇವರುಗಳು ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇಕಡ 12 ರಷ್ಟನ್ನು ಪಾವತಿಸಿ ನಿಗಮದ ಈ ಕೆಳಕಂಡ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು, ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ವಿದ್ಯಾರ್ಥಿಗಳು ಯಾವುದೇ ರಿನಿವಲ್ ಮೊತ್ತವನ್ನು ಪಾವತಿಸುವ ಅಗತ್ಯವಿರುವುದಿಲ್ಲ ಹಾಗೂ ಸಲ್ಲಿಸಿದ ಅರ್ಜಿಯ ಹಾರ್ಡ್ ಕಾಪಿಗಳನ್ನು ಮತ್ತು ವೆಬ್‌ ಸೈಟ್‌ ನಲ್ಲಿ ಅಪ್ ಲೋಡ್ ಮಾಡಿರುವ Original New Indemnity, Bond, ಮತ್ತು ಇತರೆ ಮೂಲ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕ ಕಛೇರಿಗೆ ಸಲ್ಲಿಸಬೇಕಾಗಿರುತ್ತದೆ ಮತ್ತು ಆನ್‌ಲೈನ್‌ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ನಿಗದಿಪಡಿಸಿರುವುದಿಲ್ಲ.

ಅರಿವು ರಿನಿವಲ್‌’ (Arivu Renewal) ಸಾಲದ ಯೋಜನೆಯ ಆನ್‌ಲೈನ್ ವೆಬ್‌ಪೇಜ್
Kmdconline.karnataka.gov.in ಗೆ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನ (ರಜಾ ದಿನವನ್ನು ಹೊರತುಪಡಿಸಿ)
ಸಂಪರ್ಕಿಸಬಹುದಾಗಿದೆ.

ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ಎ)
ನಂ-562110, ಬೆಂಗಳೂರು ಗ್ರಾಮಾಂತರ ಜಿಲ್ಲೆ.
ದೂರವಾಣಿ ಸಂಖ್ಯೆ 080-27681736
Gmail: kmdcbrural@gmail.com
ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

9 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

13 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

13 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

16 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago