ಅರಿವು ಸಾಲ(ಶೈಕ್ಷಣಿಕ ಸಾಲ) ಯೋಜನೆಯಡಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

2023-24 ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ “CET/NEET ವೃತ್ತಿಪರ ಕೋರ್ಸ್‌ಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಾದ ಅಂದರೆ ವೈದ್ಯಕೀಯ (ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್), ದಂತ ವೈದ್ಯಕೀಯ (ಬಿ.ಡಿ.ಎಸ್, ಎಂ.ಡಿ.ಎಸ್), ಆಯುಷ್ (ಬಿ.ಆಯುಷ್‌, ಎಂ.ಆಯುಷ್), ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ (ಬಿ.ಇ/ಬಿ.ಟೆಕ್, ಎಂ.ಇ/ಎಂ.ಟಿಕ್), ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಮತ್ತು (ಬಿ.ಆರ್ಕ್, ಎಂ ಆರ್ಕ್), MBA, MCA, LLB, B.Sc in Horticulture, Agricultural Engineering, Dairy Technology, Forestry, Veterinary and Animal Technology, Fisheries, Sericulture, Home/Community Sciences, Food Nutrition and Dietetics, B.Pharma, M.Pharma, Pharma D and D Pharma ಇಂತಹ ಪದವಿ ಕೋರ್ಸ್‌ಗಳಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರಿವು ರಿನಿವಲ್ (Arivu Renewal) ಸಾಲದ ಯೋಜನೆಯಡಿ (ವಿದ್ಯಾಭ್ಯಾಸ ಸಾಲ) ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅಂದರೆ ಮುಸ್ಲಿಂ, ಕ್ರಿಶ್ಚಿಯನ್ ಜೈನ್, ಬೌದ್ಧರು, ಸಿಖ್, ಪಾರ್ಸಿ ಇವರುಗಳು ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇಕಡ 12 ರಷ್ಟನ್ನು ಪಾವತಿಸಿ ನಿಗಮದ ಈ ಕೆಳಕಂಡ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು, ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ವಿದ್ಯಾರ್ಥಿಗಳು ಯಾವುದೇ ರಿನಿವಲ್ ಮೊತ್ತವನ್ನು ಪಾವತಿಸುವ ಅಗತ್ಯವಿರುವುದಿಲ್ಲ ಹಾಗೂ ಸಲ್ಲಿಸಿದ ಅರ್ಜಿಯ ಹಾರ್ಡ್ ಕಾಪಿಗಳನ್ನು ಮತ್ತು ವೆಬ್‌ ಸೈಟ್‌ ನಲ್ಲಿ ಅಪ್ ಲೋಡ್ ಮಾಡಿರುವ Original New Indemnity, Bond, ಮತ್ತು ಇತರೆ ಮೂಲ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕ ಕಛೇರಿಗೆ ಸಲ್ಲಿಸಬೇಕಾಗಿರುತ್ತದೆ ಮತ್ತು ಆನ್‌ಲೈನ್‌ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ನಿಗದಿಪಡಿಸಿರುವುದಿಲ್ಲ.

ಅರಿವು ರಿನಿವಲ್‌’ (Arivu Renewal) ಸಾಲದ ಯೋಜನೆಯ ಆನ್‌ಲೈನ್ ವೆಬ್‌ಪೇಜ್
Kmdconline.karnataka.gov.in ಗೆ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನ (ರಜಾ ದಿನವನ್ನು ಹೊರತುಪಡಿಸಿ)
ಸಂಪರ್ಕಿಸಬಹುದಾಗಿದೆ.

ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ಎ)
ನಂ-562110, ಬೆಂಗಳೂರು ಗ್ರಾಮಾಂತರ ಜಿಲ್ಲೆ.
ದೂರವಾಣಿ ಸಂಖ್ಯೆ 080-27681736
Gmail: kmdcbrural@gmail.com
ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಭಾರತದ ಮಧ್ಯಮ ವರ್ಗದವರ ಸಿಹಿ-ಕಹಿಗಳು, ನಿರಾಸೆ ಮತ್ತು ಜೀವನೋತ್ಸಾಹ…..

ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…

13 minutes ago

ದೊಡ್ಡಬಳ್ಳಾಪುರದಲ್ಲಿ ಕಳ್ಳರ ಹಾವಳಿ: ಸರ, ಬೈಕ್‌ನಿಂದ ಹಸುಗಳವರೆಗೆ ಕಳವು – ಜನರಲ್ಲಿ ಹೆಚ್ಚಿದ ಆತಂಕ

ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…

1 hour ago

ಸಿಎಂ, ಡಿಸಿಎಂ, ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…

2 hours ago

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

12 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

15 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

19 hours ago