ಅರಿವು ಸಾಲ(ಶೈಕ್ಷಣಿಕ ಸಾಲ) ಯೋಜನೆಯಡಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

2023-24 ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ “CET/NEET ವೃತ್ತಿಪರ ಕೋರ್ಸ್‌ಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಾದ ಅಂದರೆ ವೈದ್ಯಕೀಯ (ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್), ದಂತ ವೈದ್ಯಕೀಯ (ಬಿ.ಡಿ.ಎಸ್, ಎಂ.ಡಿ.ಎಸ್), ಆಯುಷ್ (ಬಿ.ಆಯುಷ್‌, ಎಂ.ಆಯುಷ್), ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ (ಬಿ.ಇ/ಬಿ.ಟೆಕ್, ಎಂ.ಇ/ಎಂ.ಟಿಕ್), ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಮತ್ತು (ಬಿ.ಆರ್ಕ್, ಎಂ ಆರ್ಕ್), MBA, MCA, LLB, B.Sc in Horticulture, Agricultural Engineering, Dairy Technology, Forestry, Veterinary and Animal Technology, Fisheries, Sericulture, Home/Community Sciences, Food Nutrition and Dietetics, B.Pharma, M.Pharma, Pharma D and D Pharma ಇಂತಹ ಪದವಿ ಕೋರ್ಸ್‌ಗಳಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರಿವು ರಿನಿವಲ್ (Arivu Renewal) ಸಾಲದ ಯೋಜನೆಯಡಿ (ವಿದ್ಯಾಭ್ಯಾಸ ಸಾಲ) ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅಂದರೆ ಮುಸ್ಲಿಂ, ಕ್ರಿಶ್ಚಿಯನ್ ಜೈನ್, ಬೌದ್ಧರು, ಸಿಖ್, ಪಾರ್ಸಿ ಇವರುಗಳು ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇಕಡ 12 ರಷ್ಟನ್ನು ಪಾವತಿಸಿ ನಿಗಮದ ಈ ಕೆಳಕಂಡ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು, ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ವಿದ್ಯಾರ್ಥಿಗಳು ಯಾವುದೇ ರಿನಿವಲ್ ಮೊತ್ತವನ್ನು ಪಾವತಿಸುವ ಅಗತ್ಯವಿರುವುದಿಲ್ಲ ಹಾಗೂ ಸಲ್ಲಿಸಿದ ಅರ್ಜಿಯ ಹಾರ್ಡ್ ಕಾಪಿಗಳನ್ನು ಮತ್ತು ವೆಬ್‌ ಸೈಟ್‌ ನಲ್ಲಿ ಅಪ್ ಲೋಡ್ ಮಾಡಿರುವ Original New Indemnity, Bond, ಮತ್ತು ಇತರೆ ಮೂಲ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕ ಕಛೇರಿಗೆ ಸಲ್ಲಿಸಬೇಕಾಗಿರುತ್ತದೆ ಮತ್ತು ಆನ್‌ಲೈನ್‌ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ನಿಗದಿಪಡಿಸಿರುವುದಿಲ್ಲ.

ಅರಿವು ರಿನಿವಲ್‌’ (Arivu Renewal) ಸಾಲದ ಯೋಜನೆಯ ಆನ್‌ಲೈನ್ ವೆಬ್‌ಪೇಜ್
Kmdconline.karnataka.gov.in ಗೆ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನ (ರಜಾ ದಿನವನ್ನು ಹೊರತುಪಡಿಸಿ)
ಸಂಪರ್ಕಿಸಬಹುದಾಗಿದೆ.

ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ಎ)
ನಂ-562110, ಬೆಂಗಳೂರು ಗ್ರಾಮಾಂತರ ಜಿಲ್ಲೆ.
ದೂರವಾಣಿ ಸಂಖ್ಯೆ 080-27681736
Gmail: kmdcbrural@gmail.com
ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

5 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

6 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

21 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago