ತಾಲ್ಲೂಕಿನ ಚಿಕ್ಕತುಮಕೂರು, ದೊಡ್ಡತುಮಕೂರು ಕೆರೆಗಳಿಗೆ ಶನಿವಾರ ದಿಢೀರ್ ಭೇಟಿ ನೀಡಿದ್ದ ಉಪವಿಭಾಗಾಧಿಕಾರಿ ಹಾಗೂ ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದ ಚುನಾವಣ ಅಧಿಕಾರಿ ಎನ್.ತೇಜಸ್ ಕುಮಾರ್ ಕೆರೆಗೆ ನೀರು ಹರಿದು ಬರುತ್ತಿರುವ ರಾಜ ಕಾಲುವೆಗಳು, ಒಳಚರಂಡಿ ಪೈಪ್ ಲೈನ್, ಕೆರೆಯಲ್ಲಿನ ನೀರಿನ ಸ್ಥಿತಿಗಳನ್ನು ಖುದ್ದು ಪರಿಶೀಲನೆ ನಡೆಸಿದರು.
ಕೆರೆಗೆ ಸೇರುತ್ತಿರುವ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ಒಳಚರಂಡಿ ನೀರು, ಬಾಶೆಟ್ಟಿಹಳ್ಳಿ ಕೈಗಾರಿಕ ಪ್ರದೇಶ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕಲುಷಿತ ನೀರನ್ನು ತಡೆಯದೇ ಇದ್ದರೆ ಮತದಾನ ಬಹಿಷ್ಕರಿಸುವ ಕುರಿತಂತೆ ಕೆರೆ ಸುತ್ತಮುತ್ತಲಿನ ಗ್ರಾಮಸ್ಥರು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ನೇತೃತ್ವದಲ್ಲಿ ಸಹಿ ಸಂಗ್ರಹ ಮಾಡಿ ಚುನಾವಣ ಅಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿದ್ದರು.
ದೊಡ್ಡತುಮಕೂರು ಗ್ರಾಮದಲ್ಲಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಮುಖಂಡರೊಂದಿಗೆ ಮಾತನಾಡಿದ ಚುನಾವಣ ಅಧಿಕಾರಿ ಎನ್.ತೇಜಸ್ಕುಮಾರ್, ಪ್ರಜಾಪ್ರಭುತ್ವದಲ್ಲಿ ಚುನಾವಣೆ ಹಬ್ಬ ಇದ್ದಂತೆ. ಚುನಾವಣ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದಾಗಲೇ ನಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ.
ಮತದಾನ ಬಹಿಷ್ಕಾರ ಹಾಗೂ ಇಲ್ಲಿನ ಕೆರೆಯ ಸ್ಥಿತಿ ಕುರಿತಂತೆ ಹಿರಿಯ ಅಧಿಕಾರಿಗಳ ಗಮನಕ್ಕು ತರಲಾಗಿದೆ. ತುರ್ತಾಗಿ ಇಲ್ಲಿನ ಗ್ರಾಮಗಳ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಜಕ್ಕಲಮೊಡಗು ಜಲಾಶಯದಿಂದ ನಗರಸಭೆ ವ್ಯಾಪ್ತಿಗೆ ಬರುತ್ತಿರುವ ನೀರನ್ನು ಟ್ಯಾಂಕರ್ ಮೂಲಕ ತಂದು ಹಾಕಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಮೇ 1 ಅಥವಾ 2 ರಂದು ಆರೋಗ್ಯ ಇಲಾಖೆ ವತಿಯಿಂದ ಕೆರೆ ಸುತ್ತ,ಮುತ್ತಲಿನ ಗ್ರಾಮಗಳಲ್ಲಿ ತಜ್ಞ ವೈಧ್ಯರಿಂದ ಆರೋಗ್ಯ ತಪಾಸಣ ಶಿಬಿರ ನಡೆಸಲು ಕ್ರಮಕೈಗೊಳ್ಳೂವಂತೆ ಸೂಚನೆ ನೀಡಲಾಗಿದೆ. ಮೇ 20 ರಂದು ತಾಲ್ಲೂಕು ಕಚೇರಿಯಲ್ಲಿ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ, ಸಣ್ಣ ನೀರಾವರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯನ್ನು ನಡೆಸುವ ಮೂಲಕ ಶಾಶ್ವತ ಪರಿಹಾರ ಮಾರ್ಗವನ್ನು ಕಂಡುಕೊಳ್ಳಲಾಗುವುದು.
ಕೆರೆಗಳಲ್ಲಿನ ನೀರಿನ ಪರಿಸ್ಥಿತಿ ಅತ್ಯಂತ ಕೆಟ್ಟದಾಗಿದೆ. ಇದನ್ನು ಹೀಗೆ ಮುಂದುವರೆಯಲು ಬಿಟ್ಟರೆ ಕೆರೆ ಸುತ್ತಮುತ್ತಲಿನ ಗ್ರಾಮಗಳ ಜನ, ಜಾನುವಾರುಗಳ ಆರೋಗ್ಯ ಮತ್ತಷ್ಟು ಹಾಳಾಗಲಿದೆ. ಕೆರೆ ನೀರಿನ ಸ್ಥಿತಿಯ ಗಂಭೀರತೆ ಅರ್ಥವಾಗಿದೆ ಎಂದರು.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…