ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಚುನಾವಣಾಧಿಕಾರಿ ತೇಜಸ್ ಕುಮಾರ್ ಭೇಟಿ, ಪರಿಶೀಲನೆ

ತಾಲ್ಲೂಕಿನ ಚಿಕ್ಕತುಮಕೂರು, ದೊಡ್ಡತುಮಕೂರು ಕೆರೆಗಳಿಗೆ ಶನಿವಾರ ದಿಢೀರ್ ಭೇಟಿ ನೀಡಿದ್ದ ಉಪವಿಭಾಗಾಧಿಕಾರಿ ಹಾಗೂ ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದ ಚುನಾವಣ ಅಧಿಕಾರಿ ಎನ್.ತೇಜಸ್ ಕುಮಾರ್ ಕೆರೆಗೆ ನೀರು ಹರಿದು ಬರುತ್ತಿರುವ ರಾಜ ಕಾಲುವೆಗಳು, ಒಳಚರಂಡಿ ಪೈಪ್ ಲೈನ್, ಕೆರೆಯಲ್ಲಿನ ನೀರಿನ ಸ್ಥಿತಿಗಳನ್ನು ಖುದ್ದು ಪರಿಶೀಲನೆ ನಡೆಸಿದರು.

ಕೆರೆಗೆ ಸೇರುತ್ತಿರುವ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ಒಳಚರಂಡಿ ನೀರು, ಬಾಶೆಟ್ಟಿಹಳ್ಳಿ ಕೈಗಾರಿಕ ಪ್ರದೇಶ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕಲುಷಿತ ನೀರನ್ನು ತಡೆಯದೇ ಇದ್ದರೆ ಮತದಾನ ಬಹಿಷ್ಕರಿಸುವ ಕುರಿತಂತೆ ಕೆರೆ ಸುತ್ತಮುತ್ತಲಿನ ಗ್ರಾಮಸ್ಥರು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ನೇತೃತ್ವದಲ್ಲಿ ಸಹಿ ಸಂಗ್ರಹ ಮಾಡಿ ಚುನಾವಣ ಅಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿದ್ದರು.

ದೊಡ್ಡತುಮಕೂರು ಗ್ರಾಮದಲ್ಲಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಮುಖಂಡರೊಂದಿಗೆ ಮಾತನಾಡಿದ ಚುನಾವಣ ಅಧಿಕಾರಿ ಎನ್.ತೇಜಸ್ಕುಮಾರ್, ಪ್ರಜಾಪ್ರಭುತ್ವದಲ್ಲಿ ಚುನಾವಣೆ ಹಬ್ಬ ಇದ್ದಂತೆ. ಚುನಾವಣ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದಾಗಲೇ ನಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ.

ಮತದಾನ ಬಹಿಷ್ಕಾರ ಹಾಗೂ ಇಲ್ಲಿನ ಕೆರೆಯ ಸ್ಥಿತಿ ಕುರಿತಂತೆ ಹಿರಿಯ ಅಧಿಕಾರಿಗಳ ಗಮನಕ್ಕು ತರಲಾಗಿದೆ. ತುರ್ತಾಗಿ ಇಲ್ಲಿನ ಗ್ರಾಮಗಳ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಜಕ್ಕಲಮೊಡಗು ಜಲಾಶಯದಿಂದ ನಗರಸಭೆ ವ್ಯಾಪ್ತಿಗೆ ಬರುತ್ತಿರುವ ನೀರನ್ನು ಟ್ಯಾಂಕರ್ ಮೂಲಕ ತಂದು ಹಾಕಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಮೇ 1 ಅಥವಾ 2 ರಂದು ಆರೋಗ್ಯ ಇಲಾಖೆ ವತಿಯಿಂದ ಕೆರೆ ಸುತ್ತ,ಮುತ್ತಲಿನ ಗ್ರಾಮಗಳಲ್ಲಿ ತಜ್ಞ ವೈಧ್ಯರಿಂದ ಆರೋಗ್ಯ ತಪಾಸಣ ಶಿಬಿರ ನಡೆಸಲು ಕ್ರಮಕೈಗೊಳ್ಳೂವಂತೆ ಸೂಚನೆ ನೀಡಲಾಗಿದೆ. ಮೇ 20 ರಂದು ತಾಲ್ಲೂಕು ಕಚೇರಿಯಲ್ಲಿ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ, ಸಣ್ಣ ನೀರಾವರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯನ್ನು ನಡೆಸುವ ಮೂಲಕ ಶಾಶ್ವತ ಪರಿಹಾರ ಮಾರ್ಗವನ್ನು ಕಂಡುಕೊಳ್ಳಲಾಗುವುದು.

ಕೆರೆಗಳಲ್ಲಿನ ನೀರಿನ ಪರಿಸ್ಥಿತಿ ಅತ್ಯಂತ ಕೆಟ್ಟದಾಗಿದೆ. ಇದನ್ನು ಹೀಗೆ ಮುಂದುವರೆಯಲು ಬಿಟ್ಟರೆ ಕೆರೆ ಸುತ್ತಮುತ್ತಲಿನ ಗ್ರಾಮಗಳ ಜನ, ಜಾನುವಾರುಗಳ ಆರೋಗ್ಯ ಮತ್ತಷ್ಟು ಹಾಳಾಗಲಿದೆ. ಕೆರೆ ನೀರಿನ ಸ್ಥಿತಿಯ ಗಂಭೀರತೆ ಅರ್ಥವಾಗಿದೆ ಎಂದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

6 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

17 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

18 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

18 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

21 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

24 hours ago