ಅರ್ಕಾವತಿ ನದಿ ಪಾತ್ರದ ಕೆರೆಗಳು ಕಲುಷಿತ: ಮುಂದುವರಿದ ಕೆರೆಗಳಲ್ಲಿನ ಮೀನುಗಳ ಮಾರಣಹೋಮ: ಯಾರೋ ಮಾಡುವ ತಪ್ಪಿಗೆ ಯಾರೋ ಬಲಿ..!

 

ಅರ್ಕಾವತಿ ನದಿ ಪಾತ್ರದ ಕೆರೆಗಳಾದ ದೊಡ್ಡತುಮಕೂರು ಕೆರೆ, ಚಿಕ್ಕತುಮಕೂರು ಕೆರೆಗಳು ಕಲುಷಿತಗೊಂಡಿದ್ದು, ನಿರಂತರವಾಗಿ ಸಾವನ್ನಪ್ಪುತ್ತಿರುವ ಕೆರೆಗಳಲ್ಲಿನ ಮೀನುಗಳು. ಇದಕ್ಕೆಲ್ಲಾ ಕಾರಣ ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳ ಚರಂಡಿ ನೀರು, ಕಾರ್ಖಾನೆಗಳ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ನೇರವಾಗಿ ಈ ಕೆರೆಗಳ ಒಡಲು ಸೇರುವುದರಿಂದ ಇಂತಹ ಘಟನೆ ಮರುಕಳಿಸುತ್ತಿದೆ ಎಂದು ಕೆರೆ ಹೋರಾಟ ಸಮಿತಿ ದೂರಿದೆ.

ಕೆರೆಗಳ ಸಂರಕ್ಷಣೆಗೆ, ಕೆರೆ ಕಲುಷಿತಕ್ಕೆ ಕಾರಣವಾಗುತ್ತಿರುವವರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಅರ್ಕಾವತಿ ಕೆರೆ ಹೋರಾಟ ಸಮಿತಿ ಎಷ್ಟೇ ಬಾರಿ ಹೋರಾಟ, ಧರಣಿ, ಪ್ರತಿಭಟನೆ, ಸಂಬಂಧಿಸಿದ ಇಲಾಖೆಗಳಿಗೆ ದೂರು ನೀಡಿದರು ಇನ್ನೂ ಶಾಶ್ವತ ಪರಿಹಾರ ಸಿಕ್ಕಿಲ್ಲ. ಬದಲಿಗೆ ಜಲಚರ ಪ್ರಾಣಿಗಳ ಸಾವು ಮುಂದುವರಿಯುತ್ತಲೇ ಇದೆ. ಇಷ್ಟೆಲ್ಲಾ ಆದರೂ ಎಚ್ಚೆತ್ತುಕೊಳ್ಳದ ಸಂಬಂಧಪಟ್ಟ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು.

ಮೀನುಗಳು‌ ಸತ್ತಾಗ ಮಾತ್ರ ಸ್ಥಳಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಭೇಟಿ ಕೊಟ್ಟು ಸ್ಯಾಂಪಲ್ ತೆಗೆದುಕೊಂಡು ಹೋಗಿ ವರದಿ ಕೊಡುತ್ತದೆಷ್ಟೇ, ಕಾರ್ಖಾನೆಗಳ ವಿರುದ್ಧ ಕ್ರಮ ಜರುಗಿಸುವುದಿಲ್ಲ ಎಂದು ಗ್ರಾಮಸ್ಥರ ಆಕ್ರೋಶ.

ಗ್ರಾಮಸ್ಥರಿಗೆ ಕುಡಿಯಲು ನೀರು ಸಹ ಇಲ್ಲ, ಇತ್ತೀಚಿಗೆ ಜಕ್ಕಲಮಡುಗು ಜಲಾಶಯದಿಂದ ಶುದ್ಧೀಕರಿಸಿದ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಕೆರೆ ನೀರನ್ನು ಬಳಸಿದರೆ ಏನಾದರೂ ಆಗಬಹುದು ಎಂಬ ಜೀವ ಭವಯದಲ್ಲಿ ಜೀವನ ನಡೆಸುತ್ತಿರುವ ಗ್ರಾಮಸ್ಥರು.

ಕೆರೆಗಳ ಉಳಿವಿಗಾಗಿ,‌ ಕೆರೆಗಳ ಶುದ್ಧೀಕರಣಕ್ಕಾಗಿ ಅವಿರತ ಹೋರಾಟ ನಡೆಸುತ್ತಿರುವ ಅರ್ಕಾವತಿ ಕೆರೆ ಹೋರಾ ಸಮಿತಿ ಹಾಗೂ ಗ್ರಾಮಸ್ಥರು, ಪರಿಸರಾಸ್ತಕರು. ಇದಕ್ಕೆ ವ್ಯತಿರಿಕ್ತವಾಗಿ ಇದಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ‌ ಎನ್ನುವ ಮನೋಭಾವದಿಂದ ಇರುವ ಸಂಬಂಧಪಟ್ಟ ಇಲಾಖೆಗಳು, ಜನಪ್ರತಿನಿಧಿಗಳು.

ಒಟ್ಟಾರೆ ಯಾರೋ ಮಾಡುತ್ತಿರುವ ತಪ್ಪಿಗೆ ಮೂಕ‌ ಪ್ರಾಣಿಗಳು ಜೀವ ಕಳೆದುಕೊಳ್ಳುತ್ತಿವೆ, ರೋಗಪೀಡತರಾಗುತ್ತಿರುವ ಮುಗ್ದ ಜನರು. ಭಾರೀ ಅನಾಹುತ ಸಂಭವಿಸುವುದಕ್ಕು ಮುನ್ನಾ ಕೆರೆಗಳ ಸಂರಕ್ಷಣೆ ಆಗಬೇಕಿದೆ.

Ramesh Babu

Journalist

Recent Posts

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

2 hours ago

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

16 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

17 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

1 day ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago