ಅರ್ಕಾವತಿ ನದಿ ಪಾತ್ರದ ಕೆರೆಗಳು ಕಲುಷಿತ: ಮುಂದುವರಿದ ಕೆರೆಗಳಲ್ಲಿನ ಮೀನುಗಳ ಮಾರಣಹೋಮ: ಯಾರೋ ಮಾಡುವ ತಪ್ಪಿಗೆ ಯಾರೋ ಬಲಿ..!

 

ಅರ್ಕಾವತಿ ನದಿ ಪಾತ್ರದ ಕೆರೆಗಳಾದ ದೊಡ್ಡತುಮಕೂರು ಕೆರೆ, ಚಿಕ್ಕತುಮಕೂರು ಕೆರೆಗಳು ಕಲುಷಿತಗೊಂಡಿದ್ದು, ನಿರಂತರವಾಗಿ ಸಾವನ್ನಪ್ಪುತ್ತಿರುವ ಕೆರೆಗಳಲ್ಲಿನ ಮೀನುಗಳು. ಇದಕ್ಕೆಲ್ಲಾ ಕಾರಣ ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳ ಚರಂಡಿ ನೀರು, ಕಾರ್ಖಾನೆಗಳ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ನೇರವಾಗಿ ಈ ಕೆರೆಗಳ ಒಡಲು ಸೇರುವುದರಿಂದ ಇಂತಹ ಘಟನೆ ಮರುಕಳಿಸುತ್ತಿದೆ ಎಂದು ಕೆರೆ ಹೋರಾಟ ಸಮಿತಿ ದೂರಿದೆ.

ಕೆರೆಗಳ ಸಂರಕ್ಷಣೆಗೆ, ಕೆರೆ ಕಲುಷಿತಕ್ಕೆ ಕಾರಣವಾಗುತ್ತಿರುವವರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಅರ್ಕಾವತಿ ಕೆರೆ ಹೋರಾಟ ಸಮಿತಿ ಎಷ್ಟೇ ಬಾರಿ ಹೋರಾಟ, ಧರಣಿ, ಪ್ರತಿಭಟನೆ, ಸಂಬಂಧಿಸಿದ ಇಲಾಖೆಗಳಿಗೆ ದೂರು ನೀಡಿದರು ಇನ್ನೂ ಶಾಶ್ವತ ಪರಿಹಾರ ಸಿಕ್ಕಿಲ್ಲ. ಬದಲಿಗೆ ಜಲಚರ ಪ್ರಾಣಿಗಳ ಸಾವು ಮುಂದುವರಿಯುತ್ತಲೇ ಇದೆ. ಇಷ್ಟೆಲ್ಲಾ ಆದರೂ ಎಚ್ಚೆತ್ತುಕೊಳ್ಳದ ಸಂಬಂಧಪಟ್ಟ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು.

ಮೀನುಗಳು‌ ಸತ್ತಾಗ ಮಾತ್ರ ಸ್ಥಳಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಭೇಟಿ ಕೊಟ್ಟು ಸ್ಯಾಂಪಲ್ ತೆಗೆದುಕೊಂಡು ಹೋಗಿ ವರದಿ ಕೊಡುತ್ತದೆಷ್ಟೇ, ಕಾರ್ಖಾನೆಗಳ ವಿರುದ್ಧ ಕ್ರಮ ಜರುಗಿಸುವುದಿಲ್ಲ ಎಂದು ಗ್ರಾಮಸ್ಥರ ಆಕ್ರೋಶ.

ಗ್ರಾಮಸ್ಥರಿಗೆ ಕುಡಿಯಲು ನೀರು ಸಹ ಇಲ್ಲ, ಇತ್ತೀಚಿಗೆ ಜಕ್ಕಲಮಡುಗು ಜಲಾಶಯದಿಂದ ಶುದ್ಧೀಕರಿಸಿದ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಕೆರೆ ನೀರನ್ನು ಬಳಸಿದರೆ ಏನಾದರೂ ಆಗಬಹುದು ಎಂಬ ಜೀವ ಭವಯದಲ್ಲಿ ಜೀವನ ನಡೆಸುತ್ತಿರುವ ಗ್ರಾಮಸ್ಥರು.

ಕೆರೆಗಳ ಉಳಿವಿಗಾಗಿ,‌ ಕೆರೆಗಳ ಶುದ್ಧೀಕರಣಕ್ಕಾಗಿ ಅವಿರತ ಹೋರಾಟ ನಡೆಸುತ್ತಿರುವ ಅರ್ಕಾವತಿ ಕೆರೆ ಹೋರಾ ಸಮಿತಿ ಹಾಗೂ ಗ್ರಾಮಸ್ಥರು, ಪರಿಸರಾಸ್ತಕರು. ಇದಕ್ಕೆ ವ್ಯತಿರಿಕ್ತವಾಗಿ ಇದಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ‌ ಎನ್ನುವ ಮನೋಭಾವದಿಂದ ಇರುವ ಸಂಬಂಧಪಟ್ಟ ಇಲಾಖೆಗಳು, ಜನಪ್ರತಿನಿಧಿಗಳು.

ಒಟ್ಟಾರೆ ಯಾರೋ ಮಾಡುತ್ತಿರುವ ತಪ್ಪಿಗೆ ಮೂಕ‌ ಪ್ರಾಣಿಗಳು ಜೀವ ಕಳೆದುಕೊಳ್ಳುತ್ತಿವೆ, ರೋಗಪೀಡತರಾಗುತ್ತಿರುವ ಮುಗ್ದ ಜನರು. ಭಾರೀ ಅನಾಹುತ ಸಂಭವಿಸುವುದಕ್ಕು ಮುನ್ನಾ ಕೆರೆಗಳ ಸಂರಕ್ಷಣೆ ಆಗಬೇಕಿದೆ.

Ramesh Babu

Journalist

Recent Posts

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

1 hour ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

13 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

13 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

16 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

17 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

20 hours ago