ಅರ್ಕಾವತಿ ನದಿ ಪಾತ್ರದ ಕೆರೆಗಳಾದ ದೊಡ್ಡತುಮಕೂರು ಕೆರೆ, ಚಿಕ್ಕತುಮಕೂರು ಕೆರೆಗಳು ಕಲುಷಿತಗೊಂಡಿದ್ದು, ನಿರಂತರವಾಗಿ ಸಾವನ್ನಪ್ಪುತ್ತಿರುವ ಕೆರೆಗಳಲ್ಲಿನ ಮೀನುಗಳು. ಇದಕ್ಕೆಲ್ಲಾ ಕಾರಣ ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳ ಚರಂಡಿ ನೀರು, ಕಾರ್ಖಾನೆಗಳ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ನೇರವಾಗಿ ಈ ಕೆರೆಗಳ ಒಡಲು ಸೇರುವುದರಿಂದ ಇಂತಹ ಘಟನೆ ಮರುಕಳಿಸುತ್ತಿದೆ ಎಂದು ಕೆರೆ ಹೋರಾಟ ಸಮಿತಿ ದೂರಿದೆ.
ಕೆರೆಗಳ ಸಂರಕ್ಷಣೆಗೆ, ಕೆರೆ ಕಲುಷಿತಕ್ಕೆ ಕಾರಣವಾಗುತ್ತಿರುವವರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಅರ್ಕಾವತಿ ಕೆರೆ ಹೋರಾಟ ಸಮಿತಿ ಎಷ್ಟೇ ಬಾರಿ ಹೋರಾಟ, ಧರಣಿ, ಪ್ರತಿಭಟನೆ, ಸಂಬಂಧಿಸಿದ ಇಲಾಖೆಗಳಿಗೆ ದೂರು ನೀಡಿದರು ಇನ್ನೂ ಶಾಶ್ವತ ಪರಿಹಾರ ಸಿಕ್ಕಿಲ್ಲ. ಬದಲಿಗೆ ಜಲಚರ ಪ್ರಾಣಿಗಳ ಸಾವು ಮುಂದುವರಿಯುತ್ತಲೇ ಇದೆ. ಇಷ್ಟೆಲ್ಲಾ ಆದರೂ ಎಚ್ಚೆತ್ತುಕೊಳ್ಳದ ಸಂಬಂಧಪಟ್ಟ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು.
ಗ್ರಾಮಸ್ಥರಿಗೆ ಕುಡಿಯಲು ನೀರು ಸಹ ಇಲ್ಲ, ಇತ್ತೀಚಿಗೆ ಜಕ್ಕಲಮಡುಗು ಜಲಾಶಯದಿಂದ ಶುದ್ಧೀಕರಿಸಿದ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಕೆರೆ ನೀರನ್ನು ಬಳಸಿದರೆ ಏನಾದರೂ ಆಗಬಹುದು ಎಂಬ ಜೀವ ಭವಯದಲ್ಲಿ ಜೀವನ ನಡೆಸುತ್ತಿರುವ ಗ್ರಾಮಸ್ಥರು.
ಕೆರೆಗಳ ಉಳಿವಿಗಾಗಿ, ಕೆರೆಗಳ ಶುದ್ಧೀಕರಣಕ್ಕಾಗಿ ಅವಿರತ ಹೋರಾಟ ನಡೆಸುತ್ತಿರುವ ಅರ್ಕಾವತಿ ಕೆರೆ ಹೋರಾ ಸಮಿತಿ ಹಾಗೂ ಗ್ರಾಮಸ್ಥರು, ಪರಿಸರಾಸ್ತಕರು. ಇದಕ್ಕೆ ವ್ಯತಿರಿಕ್ತವಾಗಿ ಇದಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ ಎನ್ನುವ ಮನೋಭಾವದಿಂದ ಇರುವ ಸಂಬಂಧಪಟ್ಟ ಇಲಾಖೆಗಳು, ಜನಪ್ರತಿನಿಧಿಗಳು.
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…