ಅರ್ಕಾವತಿ ನದಿ ಪಾತ್ರದ ಕೆರೆಗಳಾದ ದೊಡ್ಡತುಮಕೂರು ಕೆರೆ, ಚಿಕ್ಕತುಮಕೂರು ಕೆರೆಗಳು ಕಲುಷಿತಗೊಂಡಿದ್ದು, ನಿರಂತರವಾಗಿ ಸಾವನ್ನಪ್ಪುತ್ತಿರುವ ಕೆರೆಗಳಲ್ಲಿನ ಮೀನುಗಳು. ಇದಕ್ಕೆಲ್ಲಾ ಕಾರಣ ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳ ಚರಂಡಿ ನೀರು, ಕಾರ್ಖಾನೆಗಳ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ನೇರವಾಗಿ ಈ ಕೆರೆಗಳ ಒಡಲು ಸೇರುವುದರಿಂದ ಇಂತಹ ಘಟನೆ ಮರುಕಳಿಸುತ್ತಿದೆ ಎಂದು ಕೆರೆ ಹೋರಾಟ ಸಮಿತಿ ದೂರಿದೆ.
ಕೆರೆಗಳ ಸಂರಕ್ಷಣೆಗೆ, ಕೆರೆ ಕಲುಷಿತಕ್ಕೆ ಕಾರಣವಾಗುತ್ತಿರುವವರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಅರ್ಕಾವತಿ ಕೆರೆ ಹೋರಾಟ ಸಮಿತಿ ಎಷ್ಟೇ ಬಾರಿ ಹೋರಾಟ, ಧರಣಿ, ಪ್ರತಿಭಟನೆ, ಸಂಬಂಧಿಸಿದ ಇಲಾಖೆಗಳಿಗೆ ದೂರು ನೀಡಿದರು ಇನ್ನೂ ಶಾಶ್ವತ ಪರಿಹಾರ ಸಿಕ್ಕಿಲ್ಲ. ಬದಲಿಗೆ ಜಲಚರ ಪ್ರಾಣಿಗಳ ಸಾವು ಮುಂದುವರಿಯುತ್ತಲೇ ಇದೆ. ಇಷ್ಟೆಲ್ಲಾ ಆದರೂ ಎಚ್ಚೆತ್ತುಕೊಳ್ಳದ ಸಂಬಂಧಪಟ್ಟ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು.
ಗ್ರಾಮಸ್ಥರಿಗೆ ಕುಡಿಯಲು ನೀರು ಸಹ ಇಲ್ಲ, ಇತ್ತೀಚಿಗೆ ಜಕ್ಕಲಮಡುಗು ಜಲಾಶಯದಿಂದ ಶುದ್ಧೀಕರಿಸಿದ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಕೆರೆ ನೀರನ್ನು ಬಳಸಿದರೆ ಏನಾದರೂ ಆಗಬಹುದು ಎಂಬ ಜೀವ ಭವಯದಲ್ಲಿ ಜೀವನ ನಡೆಸುತ್ತಿರುವ ಗ್ರಾಮಸ್ಥರು.
ಕೆರೆಗಳ ಉಳಿವಿಗಾಗಿ, ಕೆರೆಗಳ ಶುದ್ಧೀಕರಣಕ್ಕಾಗಿ ಅವಿರತ ಹೋರಾಟ ನಡೆಸುತ್ತಿರುವ ಅರ್ಕಾವತಿ ಕೆರೆ ಹೋರಾ ಸಮಿತಿ ಹಾಗೂ ಗ್ರಾಮಸ್ಥರು, ಪರಿಸರಾಸ್ತಕರು. ಇದಕ್ಕೆ ವ್ಯತಿರಿಕ್ತವಾಗಿ ಇದಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ ಎನ್ನುವ ಮನೋಭಾವದಿಂದ ಇರುವ ಸಂಬಂಧಪಟ್ಟ ಇಲಾಖೆಗಳು, ಜನಪ್ರತಿನಿಧಿಗಳು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…