ಅರ್ಕಾವತಿ ನದಿ ಪಾತ್ರದ ಕೆರೆಗಳು ಕಲುಷಿತ: ಮುಂದುವರಿದ ಕೆರೆಗಳಲ್ಲಿನ ಮೀನುಗಳ ಮಾರಣಹೋಮ: ಯಾರೋ ಮಾಡುವ ತಪ್ಪಿಗೆ ಯಾರೋ ಬಲಿ..!

 

ಅರ್ಕಾವತಿ ನದಿ ಪಾತ್ರದ ಕೆರೆಗಳಾದ ದೊಡ್ಡತುಮಕೂರು ಕೆರೆ, ಚಿಕ್ಕತುಮಕೂರು ಕೆರೆಗಳು ಕಲುಷಿತಗೊಂಡಿದ್ದು, ನಿರಂತರವಾಗಿ ಸಾವನ್ನಪ್ಪುತ್ತಿರುವ ಕೆರೆಗಳಲ್ಲಿನ ಮೀನುಗಳು. ಇದಕ್ಕೆಲ್ಲಾ ಕಾರಣ ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳ ಚರಂಡಿ ನೀರು, ಕಾರ್ಖಾನೆಗಳ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ನೇರವಾಗಿ ಈ ಕೆರೆಗಳ ಒಡಲು ಸೇರುವುದರಿಂದ ಇಂತಹ ಘಟನೆ ಮರುಕಳಿಸುತ್ತಿದೆ ಎಂದು ಕೆರೆ ಹೋರಾಟ ಸಮಿತಿ ದೂರಿದೆ.

ಕೆರೆಗಳ ಸಂರಕ್ಷಣೆಗೆ, ಕೆರೆ ಕಲುಷಿತಕ್ಕೆ ಕಾರಣವಾಗುತ್ತಿರುವವರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಅರ್ಕಾವತಿ ಕೆರೆ ಹೋರಾಟ ಸಮಿತಿ ಎಷ್ಟೇ ಬಾರಿ ಹೋರಾಟ, ಧರಣಿ, ಪ್ರತಿಭಟನೆ, ಸಂಬಂಧಿಸಿದ ಇಲಾಖೆಗಳಿಗೆ ದೂರು ನೀಡಿದರು ಇನ್ನೂ ಶಾಶ್ವತ ಪರಿಹಾರ ಸಿಕ್ಕಿಲ್ಲ. ಬದಲಿಗೆ ಜಲಚರ ಪ್ರಾಣಿಗಳ ಸಾವು ಮುಂದುವರಿಯುತ್ತಲೇ ಇದೆ. ಇಷ್ಟೆಲ್ಲಾ ಆದರೂ ಎಚ್ಚೆತ್ತುಕೊಳ್ಳದ ಸಂಬಂಧಪಟ್ಟ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು.

ಮೀನುಗಳು‌ ಸತ್ತಾಗ ಮಾತ್ರ ಸ್ಥಳಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಭೇಟಿ ಕೊಟ್ಟು ಸ್ಯಾಂಪಲ್ ತೆಗೆದುಕೊಂಡು ಹೋಗಿ ವರದಿ ಕೊಡುತ್ತದೆಷ್ಟೇ, ಕಾರ್ಖಾನೆಗಳ ವಿರುದ್ಧ ಕ್ರಮ ಜರುಗಿಸುವುದಿಲ್ಲ ಎಂದು ಗ್ರಾಮಸ್ಥರ ಆಕ್ರೋಶ.

ಗ್ರಾಮಸ್ಥರಿಗೆ ಕುಡಿಯಲು ನೀರು ಸಹ ಇಲ್ಲ, ಇತ್ತೀಚಿಗೆ ಜಕ್ಕಲಮಡುಗು ಜಲಾಶಯದಿಂದ ಶುದ್ಧೀಕರಿಸಿದ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಕೆರೆ ನೀರನ್ನು ಬಳಸಿದರೆ ಏನಾದರೂ ಆಗಬಹುದು ಎಂಬ ಜೀವ ಭವಯದಲ್ಲಿ ಜೀವನ ನಡೆಸುತ್ತಿರುವ ಗ್ರಾಮಸ್ಥರು.

ಕೆರೆಗಳ ಉಳಿವಿಗಾಗಿ,‌ ಕೆರೆಗಳ ಶುದ್ಧೀಕರಣಕ್ಕಾಗಿ ಅವಿರತ ಹೋರಾಟ ನಡೆಸುತ್ತಿರುವ ಅರ್ಕಾವತಿ ಕೆರೆ ಹೋರಾ ಸಮಿತಿ ಹಾಗೂ ಗ್ರಾಮಸ್ಥರು, ಪರಿಸರಾಸ್ತಕರು. ಇದಕ್ಕೆ ವ್ಯತಿರಿಕ್ತವಾಗಿ ಇದಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ‌ ಎನ್ನುವ ಮನೋಭಾವದಿಂದ ಇರುವ ಸಂಬಂಧಪಟ್ಟ ಇಲಾಖೆಗಳು, ಜನಪ್ರತಿನಿಧಿಗಳು.

ಒಟ್ಟಾರೆ ಯಾರೋ ಮಾಡುತ್ತಿರುವ ತಪ್ಪಿಗೆ ಮೂಕ‌ ಪ್ರಾಣಿಗಳು ಜೀವ ಕಳೆದುಕೊಳ್ಳುತ್ತಿವೆ, ರೋಗಪೀಡತರಾಗುತ್ತಿರುವ ಮುಗ್ದ ಜನರು. ಭಾರೀ ಅನಾಹುತ ಸಂಭವಿಸುವುದಕ್ಕು ಮುನ್ನಾ ಕೆರೆಗಳ ಸಂರಕ್ಷಣೆ ಆಗಬೇಕಿದೆ.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

5 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

6 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago