ಅರ್ಕಾವತಿ ನದಿ ಪಾತ್ರದ ಕೆರೆಗಳು ಕಲುಷಿತ: ಮುಂದುವರಿದ ಕೆರೆಗಳಲ್ಲಿನ ಮೀನುಗಳ ಮಾರಣಹೋಮ: ಯಾರೋ ಮಾಡುವ ತಪ್ಪಿಗೆ ಯಾರೋ ಬಲಿ..!

 

ಅರ್ಕಾವತಿ ನದಿ ಪಾತ್ರದ ಕೆರೆಗಳಾದ ದೊಡ್ಡತುಮಕೂರು ಕೆರೆ, ಚಿಕ್ಕತುಮಕೂರು ಕೆರೆಗಳು ಕಲುಷಿತಗೊಂಡಿದ್ದು, ನಿರಂತರವಾಗಿ ಸಾವನ್ನಪ್ಪುತ್ತಿರುವ ಕೆರೆಗಳಲ್ಲಿನ ಮೀನುಗಳು. ಇದಕ್ಕೆಲ್ಲಾ ಕಾರಣ ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳ ಚರಂಡಿ ನೀರು, ಕಾರ್ಖಾನೆಗಳ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ನೇರವಾಗಿ ಈ ಕೆರೆಗಳ ಒಡಲು ಸೇರುವುದರಿಂದ ಇಂತಹ ಘಟನೆ ಮರುಕಳಿಸುತ್ತಿದೆ ಎಂದು ಕೆರೆ ಹೋರಾಟ ಸಮಿತಿ ದೂರಿದೆ.

ಕೆರೆಗಳ ಸಂರಕ್ಷಣೆಗೆ, ಕೆರೆ ಕಲುಷಿತಕ್ಕೆ ಕಾರಣವಾಗುತ್ತಿರುವವರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಅರ್ಕಾವತಿ ಕೆರೆ ಹೋರಾಟ ಸಮಿತಿ ಎಷ್ಟೇ ಬಾರಿ ಹೋರಾಟ, ಧರಣಿ, ಪ್ರತಿಭಟನೆ, ಸಂಬಂಧಿಸಿದ ಇಲಾಖೆಗಳಿಗೆ ದೂರು ನೀಡಿದರು ಇನ್ನೂ ಶಾಶ್ವತ ಪರಿಹಾರ ಸಿಕ್ಕಿಲ್ಲ. ಬದಲಿಗೆ ಜಲಚರ ಪ್ರಾಣಿಗಳ ಸಾವು ಮುಂದುವರಿಯುತ್ತಲೇ ಇದೆ. ಇಷ್ಟೆಲ್ಲಾ ಆದರೂ ಎಚ್ಚೆತ್ತುಕೊಳ್ಳದ ಸಂಬಂಧಪಟ್ಟ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು.

ಮೀನುಗಳು‌ ಸತ್ತಾಗ ಮಾತ್ರ ಸ್ಥಳಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಭೇಟಿ ಕೊಟ್ಟು ಸ್ಯಾಂಪಲ್ ತೆಗೆದುಕೊಂಡು ಹೋಗಿ ವರದಿ ಕೊಡುತ್ತದೆಷ್ಟೇ, ಕಾರ್ಖಾನೆಗಳ ವಿರುದ್ಧ ಕ್ರಮ ಜರುಗಿಸುವುದಿಲ್ಲ ಎಂದು ಗ್ರಾಮಸ್ಥರ ಆಕ್ರೋಶ.

ಗ್ರಾಮಸ್ಥರಿಗೆ ಕುಡಿಯಲು ನೀರು ಸಹ ಇಲ್ಲ, ಇತ್ತೀಚಿಗೆ ಜಕ್ಕಲಮಡುಗು ಜಲಾಶಯದಿಂದ ಶುದ್ಧೀಕರಿಸಿದ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಕೆರೆ ನೀರನ್ನು ಬಳಸಿದರೆ ಏನಾದರೂ ಆಗಬಹುದು ಎಂಬ ಜೀವ ಭವಯದಲ್ಲಿ ಜೀವನ ನಡೆಸುತ್ತಿರುವ ಗ್ರಾಮಸ್ಥರು.

ಕೆರೆಗಳ ಉಳಿವಿಗಾಗಿ,‌ ಕೆರೆಗಳ ಶುದ್ಧೀಕರಣಕ್ಕಾಗಿ ಅವಿರತ ಹೋರಾಟ ನಡೆಸುತ್ತಿರುವ ಅರ್ಕಾವತಿ ಕೆರೆ ಹೋರಾ ಸಮಿತಿ ಹಾಗೂ ಗ್ರಾಮಸ್ಥರು, ಪರಿಸರಾಸ್ತಕರು. ಇದಕ್ಕೆ ವ್ಯತಿರಿಕ್ತವಾಗಿ ಇದಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ‌ ಎನ್ನುವ ಮನೋಭಾವದಿಂದ ಇರುವ ಸಂಬಂಧಪಟ್ಟ ಇಲಾಖೆಗಳು, ಜನಪ್ರತಿನಿಧಿಗಳು.

ಒಟ್ಟಾರೆ ಯಾರೋ ಮಾಡುತ್ತಿರುವ ತಪ್ಪಿಗೆ ಮೂಕ‌ ಪ್ರಾಣಿಗಳು ಜೀವ ಕಳೆದುಕೊಳ್ಳುತ್ತಿವೆ, ರೋಗಪೀಡತರಾಗುತ್ತಿರುವ ಮುಗ್ದ ಜನರು. ಭಾರೀ ಅನಾಹುತ ಸಂಭವಿಸುವುದಕ್ಕು ಮುನ್ನಾ ಕೆರೆಗಳ ಸಂರಕ್ಷಣೆ ಆಗಬೇಕಿದೆ.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

5 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago