ಅರ್ಕಾವತಿ ನದಿ ಪಾತ್ರದ ಕೆರೆಗಳಾದ ದೊಡ್ಡತುಮಕೂರು ಕೆರೆ, ಚಿಕ್ಕತುಮಕೂರು ಕೆರೆಗಳು ಕಲುಷಿತಗೊಂಡಿದ್ದು, ನಿರಂತರವಾಗಿ ಸಾವನ್ನಪ್ಪುತ್ತಿರುವ ಕೆರೆಗಳಲ್ಲಿನ ಮೀನುಗಳು. ಇದಕ್ಕೆಲ್ಲಾ ಕಾರಣ ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳ ಚರಂಡಿ ನೀರು, ಕಾರ್ಖಾನೆಗಳ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ನೇರವಾಗಿ ಈ ಕೆರೆಗಳ ಒಡಲು ಸೇರುವುದರಿಂದ ಇಂತಹ ಘಟನೆ ಮರುಕಳಿಸುತ್ತಿದೆ ಎಂದು ಕೆರೆ ಹೋರಾಟ ಸಮಿತಿ ದೂರಿದೆ.
ಕೆರೆಗಳ ಸಂರಕ್ಷಣೆಗೆ, ಕೆರೆ ಕಲುಷಿತಕ್ಕೆ ಕಾರಣವಾಗುತ್ತಿರುವವರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಅರ್ಕಾವತಿ ಕೆರೆ ಹೋರಾಟ ಸಮಿತಿ ಎಷ್ಟೇ ಬಾರಿ ಹೋರಾಟ, ಧರಣಿ, ಪ್ರತಿಭಟನೆ, ಸಂಬಂಧಿಸಿದ ಇಲಾಖೆಗಳಿಗೆ ದೂರು ನೀಡಿದರು ಇನ್ನೂ ಶಾಶ್ವತ ಪರಿಹಾರ ಸಿಕ್ಕಿಲ್ಲ. ಬದಲಿಗೆ ಜಲಚರ ಪ್ರಾಣಿಗಳ ಸಾವು ಮುಂದುವರಿಯುತ್ತಲೇ ಇದೆ. ಇಷ್ಟೆಲ್ಲಾ ಆದರೂ ಎಚ್ಚೆತ್ತುಕೊಳ್ಳದ ಸಂಬಂಧಪಟ್ಟ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು.
ಗ್ರಾಮಸ್ಥರಿಗೆ ಕುಡಿಯಲು ನೀರು ಸಹ ಇಲ್ಲ, ಇತ್ತೀಚಿಗೆ ಜಕ್ಕಲಮಡುಗು ಜಲಾಶಯದಿಂದ ಶುದ್ಧೀಕರಿಸಿದ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಕೆರೆ ನೀರನ್ನು ಬಳಸಿದರೆ ಏನಾದರೂ ಆಗಬಹುದು ಎಂಬ ಜೀವ ಭವಯದಲ್ಲಿ ಜೀವನ ನಡೆಸುತ್ತಿರುವ ಗ್ರಾಮಸ್ಥರು.
ಕೆರೆಗಳ ಉಳಿವಿಗಾಗಿ, ಕೆರೆಗಳ ಶುದ್ಧೀಕರಣಕ್ಕಾಗಿ ಅವಿರತ ಹೋರಾಟ ನಡೆಸುತ್ತಿರುವ ಅರ್ಕಾವತಿ ಕೆರೆ ಹೋರಾ ಸಮಿತಿ ಹಾಗೂ ಗ್ರಾಮಸ್ಥರು, ಪರಿಸರಾಸ್ತಕರು. ಇದಕ್ಕೆ ವ್ಯತಿರಿಕ್ತವಾಗಿ ಇದಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ ಎನ್ನುವ ಮನೋಭಾವದಿಂದ ಇರುವ ಸಂಬಂಧಪಟ್ಟ ಇಲಾಖೆಗಳು, ಜನಪ್ರತಿನಿಧಿಗಳು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…