ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆಗೆ ಆಗ್ರಹಿಸಿ ಅ.2ರ ಗಾಂಧಿ ಜಯಂತಿಯಂದು ಒಂದು ದಿನದ ಮಟ್ಟಿಗೆ ನಗರದ ತಾಲೂಕು ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ರೈತ ಮುಖಂಡ ವಸಂತ್ ಕುಮಾರ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ಕಾವತಿ ನದಿ ಪಾತ್ರಗಳ ಕೆರೆಗಳ ಸಂರಕ್ಷಣೆಗೆ ಹತ್ತು ಹಲವು ಹೋರಾಟಗಳು ನಡೆಸಿದ್ದರು ಸಹ ಯಾವುದೇ ರೀತಿಯ ಕ್ರಮಗಳನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಕೈಗೊಳ್ಳದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆರೆಗಳು ಕಲುಷಿತಗೊಳ್ಳುತ್ತಿರುವುದರ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ನೀಡಲು ಬೆಂಗಳೂರಿನ ಪೀಣ್ಯಾಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಮಾಲಿನ್ಯ ನಿಯಂತ್ರಣ ಮಂಡಳಿಯ ಕಚೇರಿಯನ್ನ ದೊಡ್ಡಬಳ್ಳಾಪುರಕ್ಕೆ ವರ್ಗಾಯಿಸಬೇಕು ಎಂದು ಆಗ್ರಹಿಸಿದರು.
ನಂತರ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಮುಖಂಡ ಸತೀಶ್ ಮಾತನಾಡಿ, ಸ್ವಾತಂತ್ರ್ಯ ಬಂದು 77 ವರ್ಷ ಕಳೆದರೂ ಶುದ್ಧ ಕುಡಿಯುವ ನೀರಿಗಾಗಿ ಹೋರಾಟ ಮಾಡಬೇಕಾದ ಪರಿಸ್ಥತಿ ಬಂದಿದೆ. ನಮ್ಮ ಹೋರಾಟ ಮಹಾತ್ಮ ಗಾಂಧೀಜಿ ಅವರ ತತ್ವದ ಆಧಾರದ ಮೇಲೆ ನಡೆಯುತ್ತದೆ ನಮಗೆ ಶಾಶ್ವತ ಪರಿಹಾರ ಸಿಗುವವರೆಗೆ ಹೋರಾಟ ಮುಂದುವರಿಯುತ್ತಲೇ ಇರುತ್ತದೆ ಎಂದರು.
ಈ ವೇಳೆ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷೆ ಪ್ರಮಿಳಾ ಮಹದೇವ್, ರೈತ ಮುಖಂಡರಾದ ವಿಜಯಕುಮಾರ್, ರಮೇಶ್, ಮುನಿಕೃಷ್ಣಪ್ಪ, ಕಾಳೇಗೌಡರು, ಚಂದ್ರಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…