ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆಗೆ ಆಗ್ರಹಿಸಿ ಅ.2ರ ಗಾಂಧಿ ಜಯಂತಿಯಂದು ಒಂದು ದಿನದ ಮಟ್ಟಿಗೆ ನಗರದ ತಾಲೂಕು ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ರೈತ ಮುಖಂಡ ವಸಂತ್ ಕುಮಾರ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ಕಾವತಿ ನದಿ ಪಾತ್ರಗಳ ಕೆರೆಗಳ ಸಂರಕ್ಷಣೆಗೆ ಹತ್ತು ಹಲವು ಹೋರಾಟಗಳು ನಡೆಸಿದ್ದರು ಸಹ ಯಾವುದೇ ರೀತಿಯ ಕ್ರಮಗಳನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಕೈಗೊಳ್ಳದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆರೆಗಳು ಕಲುಷಿತಗೊಳ್ಳುತ್ತಿರುವುದರ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ನೀಡಲು ಬೆಂಗಳೂರಿನ ಪೀಣ್ಯಾಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಮಾಲಿನ್ಯ ನಿಯಂತ್ರಣ ಮಂಡಳಿಯ ಕಚೇರಿಯನ್ನ ದೊಡ್ಡಬಳ್ಳಾಪುರಕ್ಕೆ ವರ್ಗಾಯಿಸಬೇಕು ಎಂದು ಆಗ್ರಹಿಸಿದರು.
ನಂತರ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಮುಖಂಡ ಸತೀಶ್ ಮಾತನಾಡಿ, ಸ್ವಾತಂತ್ರ್ಯ ಬಂದು 77 ವರ್ಷ ಕಳೆದರೂ ಶುದ್ಧ ಕುಡಿಯುವ ನೀರಿಗಾಗಿ ಹೋರಾಟ ಮಾಡಬೇಕಾದ ಪರಿಸ್ಥತಿ ಬಂದಿದೆ. ನಮ್ಮ ಹೋರಾಟ ಮಹಾತ್ಮ ಗಾಂಧೀಜಿ ಅವರ ತತ್ವದ ಆಧಾರದ ಮೇಲೆ ನಡೆಯುತ್ತದೆ ನಮಗೆ ಶಾಶ್ವತ ಪರಿಹಾರ ಸಿಗುವವರೆಗೆ ಹೋರಾಟ ಮುಂದುವರಿಯುತ್ತಲೇ ಇರುತ್ತದೆ ಎಂದರು.
ಈ ವೇಳೆ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷೆ ಪ್ರಮಿಳಾ ಮಹದೇವ್, ರೈತ ಮುಖಂಡರಾದ ವಿಜಯಕುಮಾರ್, ರಮೇಶ್, ಮುನಿಕೃಷ್ಣಪ್ಪ, ಕಾಳೇಗೌಡರು, ಚಂದ್ರಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…